Advertisement
ಸುದ್ದಿಗಳು

ಮಲೆಯಾಳ-ಐನಕಿದು ರಸ್ತೆ ದ್ವಿಚಕ್ರ ವಾಹನ ಓಡಾಟಕ್ಕೆ ಮುಕ್ತ

Share

ಸುಬ್ರಹ್ಮಣ್ಯ : ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗಾಗಿ ವಾಹನ ಸಂಚಾರ ನಿಷೇಧಿಸಲಾಗಿದ್ದ ಮಲೆಯಾಳ-ಐನಕಿದು ಮಾರ್ಗದಲ್ಲಿ ದ್ವಿಚಕ್ರ ವಾಹನಗಳ ಓಡಾಟಕ್ಕೆ ಜು.11 ರಿಂದ ಅವಕಾಶ ನೀಡಲಾಗಿದೆ. ಸುಳ್ಯ ತಹಶೀಲ್ದಾರ್ ಅವರ ಸೂಚನೆಯಂತೆ ಈ ಕ್ರಮವಹಿಸಲಾಗಿದೆ.

ಸುಬ್ರಹ್ಮಣ್ಯ ಭಾಗದಿಂದ ಐನಕಿದು ಸೇರಿದಂತೆ ಹಲವು ಭಾಗಗಳಿಗೆ ಸಂಪರ್ಕಿಸುವ ಮಲೆಯಾಳ-ಐನಕಿದು ರಸ್ತೆಯಲ್ಲಿ ಎರಡು ಕಡೆ ಕಾಂಕ್ರೀಟ್ ಕಾಮಗಾರಿ ನಡೆಸಲೆಂದು ಕಳೆದ ಕೆಲ ದಿನಗಳಿಂದ ವಾಹನಗಳ ಓಡಾಟವನ್ನು ನಿಷೇದಿಸಲಾಗಿತ್ತು. ಇದೇ ರಸ್ತೆಯ ಪಕ್ಕ ಬದಲಿ ಮಾರ್ಗ ನಿರ್ಮಿಸಿ ಕನಿಷ್ಠ ದ್ವಿಚಕ್ರ ವಾಹನ ಓಡಾಟಕ್ಕೂ ಅವಕಾಶ ಮಾಡಿಕೊಡದೆ ಸಂಪೂರ್ಣ ಬಂದ್ ಮಾಡಲಾಗಿತ್ತು. ಇದರಿಂದ ಸಾರಿಗೆ ಬಸ್ ಸಹಿತ ಲಘು ಘನ ವಾಹನಗಳ ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಈ ಮಾರ್ಗವಾಗಿ ತೆರಳಲು ಸಾಧ್ಯವಾಗದೆ ತೊಂದರೆಗೆ ಒಳಗಾಗಿದ್ದರು. ಐನಕಿದು, ಕೆದಿಲ ಸೇರಿದಂತೆ ಹರಿಹರ, ಬಾಳುಗೋಡು, ಕಲ್ಮಕಾರು, ಕೊಲ್ಲಮೊಗ್ರು ಭಾಗದವರಿಗೆ ಸುಬ್ರಹ್ಮಣ್ಯ ಭಾಗದಿಂದ ತೆರಳಲು ಅಡಚಣೆಯಾಗಿತ್ತು. ಶಾಲಾ ವಿದ್ಯಾರ್ಥಿಗಳು ಕೂಡ ಸುತ್ತು ಬಳಸಿ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿದ್ದರು.

ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ತೊಂದರೆ ಆಗುವುದಲ್ಲದೆ ತುರ್ತು ಅಗತ್ಯಕ್ಕೆ ದ್ವಿಚಕ್ರ ವಾಹನ ಸವಾರರರಿಗೂ ಇಲ್ಲಿ ತೆರಳಲು ಪರ್ಯಾಯ ವ್ಯವಸ್ಥೆ ಮಾಡದೇ ಇರುವ ಕುರಿತು ಸ್ಥಳೀಯರು ಅಸಮಧಾನಗೊಂಡಿದ್ದರು. ಈ ವಿಚಾರ ಸುಳ್ಯ ತಹಶೀಲ್ದಾರ್ ಅವರ ಗಮನಕ್ಕೆ ಬಂದಿತ್ತು. ಸುಳ್ಯ ತಹಶೀಲ್ದಾರ್ ಕುಂಞ ಅಹಮ್ಮದ್ ಅವರು ಕೂಡಲೇ ಸ್ಪಂದಿಸಿ ಸಂಬಂದಿಸಿದ ಇಲಾಖೆಯ ಇಂಜಿನೀಯರ್ ಅವರಿಗೆ ಸಂಚಾರ ವ್ಯತ್ಯಾಯ ಸರಿಪಡಿಸುವಂತೆ ಸೂಚಿಸಿದ್ದರು. ಅದರಂತೆ ಈ ಮಾರ್ಗದಲ್ಲಿ ದ್ವಿಚಕ್ರ ವಾಹನ ಓಡಾಟಕ್ಕೆ ಮುಕ್ತವಾಗಿದ್ದು, ಮುಂದಿನ ಕೆಲ ದಿನಗಳಲ್ಲಿ ಬಸ್ ಸಹಿತ ಘನ ವಾಹನಗಳ ಓಡಾಟಕ್ಕೂ ಸಿದ್ಧವಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

1 day ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

1 day ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

1 day ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago