Advertisement
ಸುದ್ದಿಗಳು

ಮಲೆಯಾಳ-ಐನಕಿದು ರಸ್ತೆ ದ್ವಿಚಕ್ರ ವಾಹನ ಓಡಾಟಕ್ಕೆ ಮುಕ್ತ

Share

ಸುಬ್ರಹ್ಮಣ್ಯ : ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗಾಗಿ ವಾಹನ ಸಂಚಾರ ನಿಷೇಧಿಸಲಾಗಿದ್ದ ಮಲೆಯಾಳ-ಐನಕಿದು ಮಾರ್ಗದಲ್ಲಿ ದ್ವಿಚಕ್ರ ವಾಹನಗಳ ಓಡಾಟಕ್ಕೆ ಜು.11 ರಿಂದ ಅವಕಾಶ ನೀಡಲಾಗಿದೆ. ಸುಳ್ಯ ತಹಶೀಲ್ದಾರ್ ಅವರ ಸೂಚನೆಯಂತೆ ಈ ಕ್ರಮವಹಿಸಲಾಗಿದೆ.

ಸುಬ್ರಹ್ಮಣ್ಯ ಭಾಗದಿಂದ ಐನಕಿದು ಸೇರಿದಂತೆ ಹಲವು ಭಾಗಗಳಿಗೆ ಸಂಪರ್ಕಿಸುವ ಮಲೆಯಾಳ-ಐನಕಿದು ರಸ್ತೆಯಲ್ಲಿ ಎರಡು ಕಡೆ ಕಾಂಕ್ರೀಟ್ ಕಾಮಗಾರಿ ನಡೆಸಲೆಂದು ಕಳೆದ ಕೆಲ ದಿನಗಳಿಂದ ವಾಹನಗಳ ಓಡಾಟವನ್ನು ನಿಷೇದಿಸಲಾಗಿತ್ತು. ಇದೇ ರಸ್ತೆಯ ಪಕ್ಕ ಬದಲಿ ಮಾರ್ಗ ನಿರ್ಮಿಸಿ ಕನಿಷ್ಠ ದ್ವಿಚಕ್ರ ವಾಹನ ಓಡಾಟಕ್ಕೂ ಅವಕಾಶ ಮಾಡಿಕೊಡದೆ ಸಂಪೂರ್ಣ ಬಂದ್ ಮಾಡಲಾಗಿತ್ತು. ಇದರಿಂದ ಸಾರಿಗೆ ಬಸ್ ಸಹಿತ ಲಘು ಘನ ವಾಹನಗಳ ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಈ ಮಾರ್ಗವಾಗಿ ತೆರಳಲು ಸಾಧ್ಯವಾಗದೆ ತೊಂದರೆಗೆ ಒಳಗಾಗಿದ್ದರು. ಐನಕಿದು, ಕೆದಿಲ ಸೇರಿದಂತೆ ಹರಿಹರ, ಬಾಳುಗೋಡು, ಕಲ್ಮಕಾರು, ಕೊಲ್ಲಮೊಗ್ರು ಭಾಗದವರಿಗೆ ಸುಬ್ರಹ್ಮಣ್ಯ ಭಾಗದಿಂದ ತೆರಳಲು ಅಡಚಣೆಯಾಗಿತ್ತು. ಶಾಲಾ ವಿದ್ಯಾರ್ಥಿಗಳು ಕೂಡ ಸುತ್ತು ಬಳಸಿ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿದ್ದರು.

ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ತೊಂದರೆ ಆಗುವುದಲ್ಲದೆ ತುರ್ತು ಅಗತ್ಯಕ್ಕೆ ದ್ವಿಚಕ್ರ ವಾಹನ ಸವಾರರರಿಗೂ ಇಲ್ಲಿ ತೆರಳಲು ಪರ್ಯಾಯ ವ್ಯವಸ್ಥೆ ಮಾಡದೇ ಇರುವ ಕುರಿತು ಸ್ಥಳೀಯರು ಅಸಮಧಾನಗೊಂಡಿದ್ದರು. ಈ ವಿಚಾರ ಸುಳ್ಯ ತಹಶೀಲ್ದಾರ್ ಅವರ ಗಮನಕ್ಕೆ ಬಂದಿತ್ತು. ಸುಳ್ಯ ತಹಶೀಲ್ದಾರ್ ಕುಂಞ ಅಹಮ್ಮದ್ ಅವರು ಕೂಡಲೇ ಸ್ಪಂದಿಸಿ ಸಂಬಂದಿಸಿದ ಇಲಾಖೆಯ ಇಂಜಿನೀಯರ್ ಅವರಿಗೆ ಸಂಚಾರ ವ್ಯತ್ಯಾಯ ಸರಿಪಡಿಸುವಂತೆ ಸೂಚಿಸಿದ್ದರು. ಅದರಂತೆ ಈ ಮಾರ್ಗದಲ್ಲಿ ದ್ವಿಚಕ್ರ ವಾಹನ ಓಡಾಟಕ್ಕೆ ಮುಕ್ತವಾಗಿದ್ದು, ಮುಂದಿನ ಕೆಲ ದಿನಗಳಲ್ಲಿ ಬಸ್ ಸಹಿತ ಘನ ವಾಹನಗಳ ಓಡಾಟಕ್ಕೂ ಸಿದ್ಧವಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

13 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

13 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

13 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

13 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago