Advertisement
ಸುದ್ದಿಗಳು

ಮಲೆಯಾಳ-ಐನಕಿದು ರಸ್ತೆ ದ್ವಿಚಕ್ರ ವಾಹನ ಓಡಾಟಕ್ಕೆ ಮುಕ್ತ

Share

ಸುಬ್ರಹ್ಮಣ್ಯ : ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗಾಗಿ ವಾಹನ ಸಂಚಾರ ನಿಷೇಧಿಸಲಾಗಿದ್ದ ಮಲೆಯಾಳ-ಐನಕಿದು ಮಾರ್ಗದಲ್ಲಿ ದ್ವಿಚಕ್ರ ವಾಹನಗಳ ಓಡಾಟಕ್ಕೆ ಜು.11 ರಿಂದ ಅವಕಾಶ ನೀಡಲಾಗಿದೆ. ಸುಳ್ಯ ತಹಶೀಲ್ದಾರ್ ಅವರ ಸೂಚನೆಯಂತೆ ಈ ಕ್ರಮವಹಿಸಲಾಗಿದೆ.

ಸುಬ್ರಹ್ಮಣ್ಯ ಭಾಗದಿಂದ ಐನಕಿದು ಸೇರಿದಂತೆ ಹಲವು ಭಾಗಗಳಿಗೆ ಸಂಪರ್ಕಿಸುವ ಮಲೆಯಾಳ-ಐನಕಿದು ರಸ್ತೆಯಲ್ಲಿ ಎರಡು ಕಡೆ ಕಾಂಕ್ರೀಟ್ ಕಾಮಗಾರಿ ನಡೆಸಲೆಂದು ಕಳೆದ ಕೆಲ ದಿನಗಳಿಂದ ವಾಹನಗಳ ಓಡಾಟವನ್ನು ನಿಷೇದಿಸಲಾಗಿತ್ತು. ಇದೇ ರಸ್ತೆಯ ಪಕ್ಕ ಬದಲಿ ಮಾರ್ಗ ನಿರ್ಮಿಸಿ ಕನಿಷ್ಠ ದ್ವಿಚಕ್ರ ವಾಹನ ಓಡಾಟಕ್ಕೂ ಅವಕಾಶ ಮಾಡಿಕೊಡದೆ ಸಂಪೂರ್ಣ ಬಂದ್ ಮಾಡಲಾಗಿತ್ತು. ಇದರಿಂದ ಸಾರಿಗೆ ಬಸ್ ಸಹಿತ ಲಘು ಘನ ವಾಹನಗಳ ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಈ ಮಾರ್ಗವಾಗಿ ತೆರಳಲು ಸಾಧ್ಯವಾಗದೆ ತೊಂದರೆಗೆ ಒಳಗಾಗಿದ್ದರು. ಐನಕಿದು, ಕೆದಿಲ ಸೇರಿದಂತೆ ಹರಿಹರ, ಬಾಳುಗೋಡು, ಕಲ್ಮಕಾರು, ಕೊಲ್ಲಮೊಗ್ರು ಭಾಗದವರಿಗೆ ಸುಬ್ರಹ್ಮಣ್ಯ ಭಾಗದಿಂದ ತೆರಳಲು ಅಡಚಣೆಯಾಗಿತ್ತು. ಶಾಲಾ ವಿದ್ಯಾರ್ಥಿಗಳು ಕೂಡ ಸುತ್ತು ಬಳಸಿ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿದ್ದರು.

ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ತೊಂದರೆ ಆಗುವುದಲ್ಲದೆ ತುರ್ತು ಅಗತ್ಯಕ್ಕೆ ದ್ವಿಚಕ್ರ ವಾಹನ ಸವಾರರರಿಗೂ ಇಲ್ಲಿ ತೆರಳಲು ಪರ್ಯಾಯ ವ್ಯವಸ್ಥೆ ಮಾಡದೇ ಇರುವ ಕುರಿತು ಸ್ಥಳೀಯರು ಅಸಮಧಾನಗೊಂಡಿದ್ದರು. ಈ ವಿಚಾರ ಸುಳ್ಯ ತಹಶೀಲ್ದಾರ್ ಅವರ ಗಮನಕ್ಕೆ ಬಂದಿತ್ತು. ಸುಳ್ಯ ತಹಶೀಲ್ದಾರ್ ಕುಂಞ ಅಹಮ್ಮದ್ ಅವರು ಕೂಡಲೇ ಸ್ಪಂದಿಸಿ ಸಂಬಂದಿಸಿದ ಇಲಾಖೆಯ ಇಂಜಿನೀಯರ್ ಅವರಿಗೆ ಸಂಚಾರ ವ್ಯತ್ಯಾಯ ಸರಿಪಡಿಸುವಂತೆ ಸೂಚಿಸಿದ್ದರು. ಅದರಂತೆ ಈ ಮಾರ್ಗದಲ್ಲಿ ದ್ವಿಚಕ್ರ ವಾಹನ ಓಡಾಟಕ್ಕೆ ಮುಕ್ತವಾಗಿದ್ದು, ಮುಂದಿನ ಕೆಲ ದಿನಗಳಲ್ಲಿ ಬಸ್ ಸಹಿತ ಘನ ವಾಹನಗಳ ಓಡಾಟಕ್ಕೂ ಸಿದ್ಧವಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

14 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

16 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

20 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

1 day ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

2 days ago