Advertisement
ಸುದ್ದಿಗಳು

ಮಲೆಯಾಳ-ಐನಕಿದು ರಸ್ತೆ ದ್ವಿಚಕ್ರ ವಾಹನ ಓಡಾಟಕ್ಕೆ ಮುಕ್ತ

Share

ಸುಬ್ರಹ್ಮಣ್ಯ : ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗಾಗಿ ವಾಹನ ಸಂಚಾರ ನಿಷೇಧಿಸಲಾಗಿದ್ದ ಮಲೆಯಾಳ-ಐನಕಿದು ಮಾರ್ಗದಲ್ಲಿ ದ್ವಿಚಕ್ರ ವಾಹನಗಳ ಓಡಾಟಕ್ಕೆ ಜು.11 ರಿಂದ ಅವಕಾಶ ನೀಡಲಾಗಿದೆ. ಸುಳ್ಯ ತಹಶೀಲ್ದಾರ್ ಅವರ ಸೂಚನೆಯಂತೆ ಈ ಕ್ರಮವಹಿಸಲಾಗಿದೆ.

Advertisement

ಸುಬ್ರಹ್ಮಣ್ಯ ಭಾಗದಿಂದ ಐನಕಿದು ಸೇರಿದಂತೆ ಹಲವು ಭಾಗಗಳಿಗೆ ಸಂಪರ್ಕಿಸುವ ಮಲೆಯಾಳ-ಐನಕಿದು ರಸ್ತೆಯಲ್ಲಿ ಎರಡು ಕಡೆ ಕಾಂಕ್ರೀಟ್ ಕಾಮಗಾರಿ ನಡೆಸಲೆಂದು ಕಳೆದ ಕೆಲ ದಿನಗಳಿಂದ ವಾಹನಗಳ ಓಡಾಟವನ್ನು ನಿಷೇದಿಸಲಾಗಿತ್ತು. ಇದೇ ರಸ್ತೆಯ ಪಕ್ಕ ಬದಲಿ ಮಾರ್ಗ ನಿರ್ಮಿಸಿ ಕನಿಷ್ಠ ದ್ವಿಚಕ್ರ ವಾಹನ ಓಡಾಟಕ್ಕೂ ಅವಕಾಶ ಮಾಡಿಕೊಡದೆ ಸಂಪೂರ್ಣ ಬಂದ್ ಮಾಡಲಾಗಿತ್ತು. ಇದರಿಂದ ಸಾರಿಗೆ ಬಸ್ ಸಹಿತ ಲಘು ಘನ ವಾಹನಗಳ ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಈ ಮಾರ್ಗವಾಗಿ ತೆರಳಲು ಸಾಧ್ಯವಾಗದೆ ತೊಂದರೆಗೆ ಒಳಗಾಗಿದ್ದರು. ಐನಕಿದು, ಕೆದಿಲ ಸೇರಿದಂತೆ ಹರಿಹರ, ಬಾಳುಗೋಡು, ಕಲ್ಮಕಾರು, ಕೊಲ್ಲಮೊಗ್ರು ಭಾಗದವರಿಗೆ ಸುಬ್ರಹ್ಮಣ್ಯ ಭಾಗದಿಂದ ತೆರಳಲು ಅಡಚಣೆಯಾಗಿತ್ತು. ಶಾಲಾ ವಿದ್ಯಾರ್ಥಿಗಳು ಕೂಡ ಸುತ್ತು ಬಳಸಿ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿದ್ದರು.

ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ತೊಂದರೆ ಆಗುವುದಲ್ಲದೆ ತುರ್ತು ಅಗತ್ಯಕ್ಕೆ ದ್ವಿಚಕ್ರ ವಾಹನ ಸವಾರರರಿಗೂ ಇಲ್ಲಿ ತೆರಳಲು ಪರ್ಯಾಯ ವ್ಯವಸ್ಥೆ ಮಾಡದೇ ಇರುವ ಕುರಿತು ಸ್ಥಳೀಯರು ಅಸಮಧಾನಗೊಂಡಿದ್ದರು. ಈ ವಿಚಾರ ಸುಳ್ಯ ತಹಶೀಲ್ದಾರ್ ಅವರ ಗಮನಕ್ಕೆ ಬಂದಿತ್ತು. ಸುಳ್ಯ ತಹಶೀಲ್ದಾರ್ ಕುಂಞ ಅಹಮ್ಮದ್ ಅವರು ಕೂಡಲೇ ಸ್ಪಂದಿಸಿ ಸಂಬಂದಿಸಿದ ಇಲಾಖೆಯ ಇಂಜಿನೀಯರ್ ಅವರಿಗೆ ಸಂಚಾರ ವ್ಯತ್ಯಾಯ ಸರಿಪಡಿಸುವಂತೆ ಸೂಚಿಸಿದ್ದರು. ಅದರಂತೆ ಈ ಮಾರ್ಗದಲ್ಲಿ ದ್ವಿಚಕ್ರ ವಾಹನ ಓಡಾಟಕ್ಕೆ ಮುಕ್ತವಾಗಿದ್ದು, ಮುಂದಿನ ಕೆಲ ದಿನಗಳಲ್ಲಿ ಬಸ್ ಸಹಿತ ಘನ ವಾಹನಗಳ ಓಡಾಟಕ್ಕೂ ಸಿದ್ಧವಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

20 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago