ಮಳೆಕೊಯ್ಲು ಬಾವಿ ಉಳಿಸಿತು – ಕೃಷಿಕನ ಸುಲಭ ಪ್ರಯತ್ನ ಪರಿಣಾಮ ನೀಡಿತು

June 28, 2019
2:00 PM

ಗುತ್ತಿಗಾರು: ಮಳೆನೀರನ್ನು ಬಾವಿಗೆ ಬಿಡುವ ಮೂಲಕ ಬತ್ತಿ ಹೋಗುವ ಬಾವಿಯನ್ನು  ಮತ್ತೆ ಜೀವ ಮಾಡಿರುವ ಯಶೋಗಾಥೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಏರಣಗುಡ್ಡೆ ಬಳಿಯ ಮಲ್ಕಜೆಯ ಬಿಟ್ಟಿ ನೆಡುನೀಲಂ ಅವರದು.

ಕಳೆದ ಕೆಲವು ವರ್ಷಗಳಿಂದ ಅವರು ಮಳೆಕೊಯ್ಲು ಮಾಡುತ್ತಿದ್ದಾರೆ. ಯಾವುದೇ ದೊಡ್ಡ ಸಾಧನಗಳು ಇಲ್ಲದೆ, ತಮ್ಮ ಮನೆಯಲ್ಲೇ ಇರುವ ಸಾಮಾಗ್ರಿ ಬಳಸಿ ಮಳೆನೀರನ್ನು ಸೋಸಿ ಬಾವಿಗೆ ಬಿಡುತ್ತಿದ್ದಾರೆ. ಇದೀಗ ಬಾವಿಯಲ್ಲಿ ನೀರು ಉಳಿದಿದೆ. ಕಳೆದ 2 ವರ್ಷಗಳಲ್ಲಿ  ಬಿಟ್ಟಿ ನೆಡುನೀಲಂ ಅವರ ಈ ಯಶೋಗಾಥೆಯನ್ನು ವಿವಿಧ ಮಾಧ್ಯಮಗಳು ಫೋಕಸ್ ಮಾಡಿತ್ತು. ಮನೆಯ ಟೆರೇಸ್, ಛಾವಣಿ ನೀರನ್ನು 200 ಲೀಟರ್  ಬ್ಯಾರೆಲ್ ಮೂಲಕ ಸೋಸುವಂತೆ ಮಾಡಿ ಶುದ್ಧವಾದ ಬಳಿಕ ಬಾವಿಗೆ ಬಿಡುತ್ತಿದ್ದಾರೆ. ಹಿಂದೆಲ್ಲಾ ಸುಮಾರು ಮಾರ್ಚ್-ಎಪ್ರಿಲ್ ವೇಳೆಗೆ ಬಾವಿಯಲ್ಲಿ ನೀರು ಬರಿದಾಗುತ್ತಿತ್ತು. ಮಳೆಕೊಯ್ಲು ಮಾಡಿದ ಬಳಿಕ ನೀರು ಬತ್ತುವುದಕ್ಕೆ ತಡೆಯಾಗಿದೆ. ಅಲ್ಲದೆ ಬಾವಿಗಿಂತ ಕೆಳಗಿನ ಭಾಗದ ಕೆರೆಯಲ್ಲೂ ನೀರು ಹೆಚ್ಚಾಗಿದೆ ಎನ್ನುತ್ತಾರೆ ಬಿಟ್ಟಿ ನೆಡುನೀಲಂ.  ಬ್ಯಾರೆಲ್ ಒಳಗಡೆ ಜಲ್ಲಿ , ಮಸಿ ಹಾಗೂ ಮರಳನ್ನು  ಹಾಕಿ ನೀರು ಸೋಸುವಂತೆ ಮಾಡಿ ಬಾವಿಗೆ ಬಿಡುತ್ತಾರೆ. ಮಳೆಗಾಲ ಪೂರ್ತಿ ಈ ರೀತಿಯಾಗಿ ಬಾವಿಗೆ ನೀರು ಇಂಗುತ್ತದೆ.  ಈ ಮಾದರಿಯನ್ನು  ಎಲ್ಲಾ ಮನೆಗಳಲ್ಲೂ ಮಾಡಬಹುದಾಗಿದೆ.

 

ನಿಮಗೆ ತಿಳಿದಿರುವ ಮಳೆ ಕೊಯ್ಲು , ಜಲಸಂರಕ್ಷಣೆಯ ಸುಲಭ ಉಪಾಯಗಳನ್ನು , ಕೃಷಿಕರ ಮಾದರಿಗಳನ್ನು , ಸಣ್ಣ ಖರ್ಚಿನಲ್ಲಿ  ಮಾಡಬಹುದಾದ , ಮಾಡಿರುವ ಉದಾಹರಣೆಗಳು, ಯಾವುದೇ ಉಪಕರಣಗಳು ಇಲ್ಲದೆ ಮಾಡಬಹುದಾದ ಪ್ರಯತ್ನಗಳು ಇದ್ದರೆ ನಮಗೆ  ಇಮೈಲ್ ಅಥವಾ ವ್ಯಾಟ್ಸಪ್ ಮಾಡಿ ( [email protected] ಅಥವಾ 9449125447 )  ತಿಳಿಸಿ. ನಾವು ಸಮಾಜಕ್ಕೆ ತಿಳಿಸುತ್ತೇವೆ. 

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕ್ಯಾನ್ಸರ್‌ಕಾರಕ ಅಂಶ | ಅಡಿಕೆಯ ಶುದ್ಧತೆಯನ್ನು ಶ್ರುತ ಪಡಿಸಲು ಇರುವ ಸವಾಲುಗಳು ಏನು..?
November 30, 2024
6:34 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಮೇಲೆ ಕ್ಯಾನ್ಸರ್‌ ಗುಮ್ಮ | 20 ವರ್ಷಗಳಿಂದ ಏನೇನಾಯ್ತು..? | ಮುಂದೇನು ಮಾಡಬಹುದು..?
November 20, 2024
11:27 AM
by: ವಿಶೇಷ ಪ್ರತಿನಿಧಿ
ನೇಪಾಳದಲ್ಲಿ ಅಡಿಕೆ ಆಮದು ಮೇಲಿನ ನಿರ್ಬಂಧ ಸಡಿಲಿಕೆ | ಅಡಿಕೆ ಕಳ್ಳಸಾಗಾಣಿಕೆಗೆ ಇನ್ನೊಂದು ದಾರಿ…? |
September 29, 2024
8:00 AM
by: ದ ರೂರಲ್ ಮಿರರ್.ಕಾಂ
ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು | 4 ದಿನದಲ್ಲಿ ಡ್ಯಾಂಗೆ 7 ಟಿಎಂಸಿ ನೀರು ಹರಿವು |
August 21, 2024
11:29 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror