Advertisement
The Rural Mirror ಫಾಲೋಅಪ್

ಮಳೆಕೊಯ್ಲು ಬಾವಿ ಉಳಿಸಿತು – ಕೃಷಿಕನ ಸುಲಭ ಪ್ರಯತ್ನ ಪರಿಣಾಮ ನೀಡಿತು

Share

ಗುತ್ತಿಗಾರು: ಮಳೆನೀರನ್ನು ಬಾವಿಗೆ ಬಿಡುವ ಮೂಲಕ ಬತ್ತಿ ಹೋಗುವ ಬಾವಿಯನ್ನು  ಮತ್ತೆ ಜೀವ ಮಾಡಿರುವ ಯಶೋಗಾಥೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಏರಣಗುಡ್ಡೆ ಬಳಿಯ ಮಲ್ಕಜೆಯ ಬಿಟ್ಟಿ ನೆಡುನೀಲಂ ಅವರದು.

ಕಳೆದ ಕೆಲವು ವರ್ಷಗಳಿಂದ ಅವರು ಮಳೆಕೊಯ್ಲು ಮಾಡುತ್ತಿದ್ದಾರೆ. ಯಾವುದೇ ದೊಡ್ಡ ಸಾಧನಗಳು ಇಲ್ಲದೆ, ತಮ್ಮ ಮನೆಯಲ್ಲೇ ಇರುವ ಸಾಮಾಗ್ರಿ ಬಳಸಿ ಮಳೆನೀರನ್ನು ಸೋಸಿ ಬಾವಿಗೆ ಬಿಡುತ್ತಿದ್ದಾರೆ. ಇದೀಗ ಬಾವಿಯಲ್ಲಿ ನೀರು ಉಳಿದಿದೆ. ಕಳೆದ 2 ವರ್ಷಗಳಲ್ಲಿ  ಬಿಟ್ಟಿ ನೆಡುನೀಲಂ ಅವರ ಈ ಯಶೋಗಾಥೆಯನ್ನು ವಿವಿಧ ಮಾಧ್ಯಮಗಳು ಫೋಕಸ್ ಮಾಡಿತ್ತು. ಮನೆಯ ಟೆರೇಸ್, ಛಾವಣಿ ನೀರನ್ನು 200 ಲೀಟರ್  ಬ್ಯಾರೆಲ್ ಮೂಲಕ ಸೋಸುವಂತೆ ಮಾಡಿ ಶುದ್ಧವಾದ ಬಳಿಕ ಬಾವಿಗೆ ಬಿಡುತ್ತಿದ್ದಾರೆ. ಹಿಂದೆಲ್ಲಾ ಸುಮಾರು ಮಾರ್ಚ್-ಎಪ್ರಿಲ್ ವೇಳೆಗೆ ಬಾವಿಯಲ್ಲಿ ನೀರು ಬರಿದಾಗುತ್ತಿತ್ತು. ಮಳೆಕೊಯ್ಲು ಮಾಡಿದ ಬಳಿಕ ನೀರು ಬತ್ತುವುದಕ್ಕೆ ತಡೆಯಾಗಿದೆ. ಅಲ್ಲದೆ ಬಾವಿಗಿಂತ ಕೆಳಗಿನ ಭಾಗದ ಕೆರೆಯಲ್ಲೂ ನೀರು ಹೆಚ್ಚಾಗಿದೆ ಎನ್ನುತ್ತಾರೆ ಬಿಟ್ಟಿ ನೆಡುನೀಲಂ.  ಬ್ಯಾರೆಲ್ ಒಳಗಡೆ ಜಲ್ಲಿ , ಮಸಿ ಹಾಗೂ ಮರಳನ್ನು  ಹಾಕಿ ನೀರು ಸೋಸುವಂತೆ ಮಾಡಿ ಬಾವಿಗೆ ಬಿಡುತ್ತಾರೆ. ಮಳೆಗಾಲ ಪೂರ್ತಿ ಈ ರೀತಿಯಾಗಿ ಬಾವಿಗೆ ನೀರು ಇಂಗುತ್ತದೆ.  ಈ ಮಾದರಿಯನ್ನು  ಎಲ್ಲಾ ಮನೆಗಳಲ್ಲೂ ಮಾಡಬಹುದಾಗಿದೆ.

 

ನಿಮಗೆ ತಿಳಿದಿರುವ ಮಳೆ ಕೊಯ್ಲು , ಜಲಸಂರಕ್ಷಣೆಯ ಸುಲಭ ಉಪಾಯಗಳನ್ನು , ಕೃಷಿಕರ ಮಾದರಿಗಳನ್ನು , ಸಣ್ಣ ಖರ್ಚಿನಲ್ಲಿ  ಮಾಡಬಹುದಾದ , ಮಾಡಿರುವ ಉದಾಹರಣೆಗಳು, ಯಾವುದೇ ಉಪಕರಣಗಳು ಇಲ್ಲದೆ ಮಾಡಬಹುದಾದ ಪ್ರಯತ್ನಗಳು ಇದ್ದರೆ ನಮಗೆ  ಇಮೈಲ್ ಅಥವಾ ವ್ಯಾಟ್ಸಪ್ ಮಾಡಿ ( sullianews@gmail.com ಅಥವಾ 9449125447 )  ತಿಳಿಸಿ. ನಾವು ಸಮಾಜಕ್ಕೆ ತಿಳಿಸುತ್ತೇವೆ. 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

6 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

14 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

14 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

21 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

22 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

2 days ago