Advertisement
The Rural Mirror ಫಾಲೋಅಪ್

ಮಳೆಕೊಯ್ಲು ಬಾವಿ ಉಳಿಸಿತು – ಕೃಷಿಕನ ಸುಲಭ ಪ್ರಯತ್ನ ಪರಿಣಾಮ ನೀಡಿತು

Share

ಗುತ್ತಿಗಾರು: ಮಳೆನೀರನ್ನು ಬಾವಿಗೆ ಬಿಡುವ ಮೂಲಕ ಬತ್ತಿ ಹೋಗುವ ಬಾವಿಯನ್ನು  ಮತ್ತೆ ಜೀವ ಮಾಡಿರುವ ಯಶೋಗಾಥೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಏರಣಗುಡ್ಡೆ ಬಳಿಯ ಮಲ್ಕಜೆಯ ಬಿಟ್ಟಿ ನೆಡುನೀಲಂ ಅವರದು.

ಕಳೆದ ಕೆಲವು ವರ್ಷಗಳಿಂದ ಅವರು ಮಳೆಕೊಯ್ಲು ಮಾಡುತ್ತಿದ್ದಾರೆ. ಯಾವುದೇ ದೊಡ್ಡ ಸಾಧನಗಳು ಇಲ್ಲದೆ, ತಮ್ಮ ಮನೆಯಲ್ಲೇ ಇರುವ ಸಾಮಾಗ್ರಿ ಬಳಸಿ ಮಳೆನೀರನ್ನು ಸೋಸಿ ಬಾವಿಗೆ ಬಿಡುತ್ತಿದ್ದಾರೆ. ಇದೀಗ ಬಾವಿಯಲ್ಲಿ ನೀರು ಉಳಿದಿದೆ. ಕಳೆದ 2 ವರ್ಷಗಳಲ್ಲಿ  ಬಿಟ್ಟಿ ನೆಡುನೀಲಂ ಅವರ ಈ ಯಶೋಗಾಥೆಯನ್ನು ವಿವಿಧ ಮಾಧ್ಯಮಗಳು ಫೋಕಸ್ ಮಾಡಿತ್ತು. ಮನೆಯ ಟೆರೇಸ್, ಛಾವಣಿ ನೀರನ್ನು 200 ಲೀಟರ್  ಬ್ಯಾರೆಲ್ ಮೂಲಕ ಸೋಸುವಂತೆ ಮಾಡಿ ಶುದ್ಧವಾದ ಬಳಿಕ ಬಾವಿಗೆ ಬಿಡುತ್ತಿದ್ದಾರೆ. ಹಿಂದೆಲ್ಲಾ ಸುಮಾರು ಮಾರ್ಚ್-ಎಪ್ರಿಲ್ ವೇಳೆಗೆ ಬಾವಿಯಲ್ಲಿ ನೀರು ಬರಿದಾಗುತ್ತಿತ್ತು. ಮಳೆಕೊಯ್ಲು ಮಾಡಿದ ಬಳಿಕ ನೀರು ಬತ್ತುವುದಕ್ಕೆ ತಡೆಯಾಗಿದೆ. ಅಲ್ಲದೆ ಬಾವಿಗಿಂತ ಕೆಳಗಿನ ಭಾಗದ ಕೆರೆಯಲ್ಲೂ ನೀರು ಹೆಚ್ಚಾಗಿದೆ ಎನ್ನುತ್ತಾರೆ ಬಿಟ್ಟಿ ನೆಡುನೀಲಂ.  ಬ್ಯಾರೆಲ್ ಒಳಗಡೆ ಜಲ್ಲಿ , ಮಸಿ ಹಾಗೂ ಮರಳನ್ನು  ಹಾಕಿ ನೀರು ಸೋಸುವಂತೆ ಮಾಡಿ ಬಾವಿಗೆ ಬಿಡುತ್ತಾರೆ. ಮಳೆಗಾಲ ಪೂರ್ತಿ ಈ ರೀತಿಯಾಗಿ ಬಾವಿಗೆ ನೀರು ಇಂಗುತ್ತದೆ.  ಈ ಮಾದರಿಯನ್ನು  ಎಲ್ಲಾ ಮನೆಗಳಲ್ಲೂ ಮಾಡಬಹುದಾಗಿದೆ.

 

ನಿಮಗೆ ತಿಳಿದಿರುವ ಮಳೆ ಕೊಯ್ಲು , ಜಲಸಂರಕ್ಷಣೆಯ ಸುಲಭ ಉಪಾಯಗಳನ್ನು , ಕೃಷಿಕರ ಮಾದರಿಗಳನ್ನು , ಸಣ್ಣ ಖರ್ಚಿನಲ್ಲಿ  ಮಾಡಬಹುದಾದ , ಮಾಡಿರುವ ಉದಾಹರಣೆಗಳು, ಯಾವುದೇ ಉಪಕರಣಗಳು ಇಲ್ಲದೆ ಮಾಡಬಹುದಾದ ಪ್ರಯತ್ನಗಳು ಇದ್ದರೆ ನಮಗೆ  ಇಮೈಲ್ ಅಥವಾ ವ್ಯಾಟ್ಸಪ್ ಮಾಡಿ ( sullianews@gmail.com ಅಥವಾ 9449125447 )  ತಿಳಿಸಿ. ನಾವು ಸಮಾಜಕ್ಕೆ ತಿಳಿಸುತ್ತೇವೆ. 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

6 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

14 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

21 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

21 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

21 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

21 hours ago