Advertisement
The Rural Mirror ಫಾಲೋಅಪ್

ಮಳೆಕೊಯ್ಲು ಬಾವಿ ಉಳಿಸಿತು – ಕೃಷಿಕನ ಸುಲಭ ಪ್ರಯತ್ನ ಪರಿಣಾಮ ನೀಡಿತು

Share

ಗುತ್ತಿಗಾರು: ಮಳೆನೀರನ್ನು ಬಾವಿಗೆ ಬಿಡುವ ಮೂಲಕ ಬತ್ತಿ ಹೋಗುವ ಬಾವಿಯನ್ನು  ಮತ್ತೆ ಜೀವ ಮಾಡಿರುವ ಯಶೋಗಾಥೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಏರಣಗುಡ್ಡೆ ಬಳಿಯ ಮಲ್ಕಜೆಯ ಬಿಟ್ಟಿ ನೆಡುನೀಲಂ ಅವರದು.

ಕಳೆದ ಕೆಲವು ವರ್ಷಗಳಿಂದ ಅವರು ಮಳೆಕೊಯ್ಲು ಮಾಡುತ್ತಿದ್ದಾರೆ. ಯಾವುದೇ ದೊಡ್ಡ ಸಾಧನಗಳು ಇಲ್ಲದೆ, ತಮ್ಮ ಮನೆಯಲ್ಲೇ ಇರುವ ಸಾಮಾಗ್ರಿ ಬಳಸಿ ಮಳೆನೀರನ್ನು ಸೋಸಿ ಬಾವಿಗೆ ಬಿಡುತ್ತಿದ್ದಾರೆ. ಇದೀಗ ಬಾವಿಯಲ್ಲಿ ನೀರು ಉಳಿದಿದೆ. ಕಳೆದ 2 ವರ್ಷಗಳಲ್ಲಿ  ಬಿಟ್ಟಿ ನೆಡುನೀಲಂ ಅವರ ಈ ಯಶೋಗಾಥೆಯನ್ನು ವಿವಿಧ ಮಾಧ್ಯಮಗಳು ಫೋಕಸ್ ಮಾಡಿತ್ತು. ಮನೆಯ ಟೆರೇಸ್, ಛಾವಣಿ ನೀರನ್ನು 200 ಲೀಟರ್  ಬ್ಯಾರೆಲ್ ಮೂಲಕ ಸೋಸುವಂತೆ ಮಾಡಿ ಶುದ್ಧವಾದ ಬಳಿಕ ಬಾವಿಗೆ ಬಿಡುತ್ತಿದ್ದಾರೆ. ಹಿಂದೆಲ್ಲಾ ಸುಮಾರು ಮಾರ್ಚ್-ಎಪ್ರಿಲ್ ವೇಳೆಗೆ ಬಾವಿಯಲ್ಲಿ ನೀರು ಬರಿದಾಗುತ್ತಿತ್ತು. ಮಳೆಕೊಯ್ಲು ಮಾಡಿದ ಬಳಿಕ ನೀರು ಬತ್ತುವುದಕ್ಕೆ ತಡೆಯಾಗಿದೆ. ಅಲ್ಲದೆ ಬಾವಿಗಿಂತ ಕೆಳಗಿನ ಭಾಗದ ಕೆರೆಯಲ್ಲೂ ನೀರು ಹೆಚ್ಚಾಗಿದೆ ಎನ್ನುತ್ತಾರೆ ಬಿಟ್ಟಿ ನೆಡುನೀಲಂ.  ಬ್ಯಾರೆಲ್ ಒಳಗಡೆ ಜಲ್ಲಿ , ಮಸಿ ಹಾಗೂ ಮರಳನ್ನು  ಹಾಕಿ ನೀರು ಸೋಸುವಂತೆ ಮಾಡಿ ಬಾವಿಗೆ ಬಿಡುತ್ತಾರೆ. ಮಳೆಗಾಲ ಪೂರ್ತಿ ಈ ರೀತಿಯಾಗಿ ಬಾವಿಗೆ ನೀರು ಇಂಗುತ್ತದೆ.  ಈ ಮಾದರಿಯನ್ನು  ಎಲ್ಲಾ ಮನೆಗಳಲ್ಲೂ ಮಾಡಬಹುದಾಗಿದೆ.

 

ನಿಮಗೆ ತಿಳಿದಿರುವ ಮಳೆ ಕೊಯ್ಲು , ಜಲಸಂರಕ್ಷಣೆಯ ಸುಲಭ ಉಪಾಯಗಳನ್ನು , ಕೃಷಿಕರ ಮಾದರಿಗಳನ್ನು , ಸಣ್ಣ ಖರ್ಚಿನಲ್ಲಿ  ಮಾಡಬಹುದಾದ , ಮಾಡಿರುವ ಉದಾಹರಣೆಗಳು, ಯಾವುದೇ ಉಪಕರಣಗಳು ಇಲ್ಲದೆ ಮಾಡಬಹುದಾದ ಪ್ರಯತ್ನಗಳು ಇದ್ದರೆ ನಮಗೆ  ಇಮೈಲ್ ಅಥವಾ ವ್ಯಾಟ್ಸಪ್ ಮಾಡಿ ( sullianews@gmail.com ಅಥವಾ 9449125447 )  ತಿಳಿಸಿ. ನಾವು ಸಮಾಜಕ್ಕೆ ತಿಳಿಸುತ್ತೇವೆ. 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

9 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

17 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago