Advertisement
The Rural Mirror ಫಾಲೋಅಪ್

ಮಳೆಕೊಯ್ಲು ಬಾವಿ ಉಳಿಸಿತು – ಕೃಷಿಕನ ಸುಲಭ ಪ್ರಯತ್ನ ಪರಿಣಾಮ ನೀಡಿತು

Share

ಗುತ್ತಿಗಾರು: ಮಳೆನೀರನ್ನು ಬಾವಿಗೆ ಬಿಡುವ ಮೂಲಕ ಬತ್ತಿ ಹೋಗುವ ಬಾವಿಯನ್ನು  ಮತ್ತೆ ಜೀವ ಮಾಡಿರುವ ಯಶೋಗಾಥೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಏರಣಗುಡ್ಡೆ ಬಳಿಯ ಮಲ್ಕಜೆಯ ಬಿಟ್ಟಿ ನೆಡುನೀಲಂ ಅವರದು.

ಕಳೆದ ಕೆಲವು ವರ್ಷಗಳಿಂದ ಅವರು ಮಳೆಕೊಯ್ಲು ಮಾಡುತ್ತಿದ್ದಾರೆ. ಯಾವುದೇ ದೊಡ್ಡ ಸಾಧನಗಳು ಇಲ್ಲದೆ, ತಮ್ಮ ಮನೆಯಲ್ಲೇ ಇರುವ ಸಾಮಾಗ್ರಿ ಬಳಸಿ ಮಳೆನೀರನ್ನು ಸೋಸಿ ಬಾವಿಗೆ ಬಿಡುತ್ತಿದ್ದಾರೆ. ಇದೀಗ ಬಾವಿಯಲ್ಲಿ ನೀರು ಉಳಿದಿದೆ. ಕಳೆದ 2 ವರ್ಷಗಳಲ್ಲಿ  ಬಿಟ್ಟಿ ನೆಡುನೀಲಂ ಅವರ ಈ ಯಶೋಗಾಥೆಯನ್ನು ವಿವಿಧ ಮಾಧ್ಯಮಗಳು ಫೋಕಸ್ ಮಾಡಿತ್ತು. ಮನೆಯ ಟೆರೇಸ್, ಛಾವಣಿ ನೀರನ್ನು 200 ಲೀಟರ್  ಬ್ಯಾರೆಲ್ ಮೂಲಕ ಸೋಸುವಂತೆ ಮಾಡಿ ಶುದ್ಧವಾದ ಬಳಿಕ ಬಾವಿಗೆ ಬಿಡುತ್ತಿದ್ದಾರೆ. ಹಿಂದೆಲ್ಲಾ ಸುಮಾರು ಮಾರ್ಚ್-ಎಪ್ರಿಲ್ ವೇಳೆಗೆ ಬಾವಿಯಲ್ಲಿ ನೀರು ಬರಿದಾಗುತ್ತಿತ್ತು. ಮಳೆಕೊಯ್ಲು ಮಾಡಿದ ಬಳಿಕ ನೀರು ಬತ್ತುವುದಕ್ಕೆ ತಡೆಯಾಗಿದೆ. ಅಲ್ಲದೆ ಬಾವಿಗಿಂತ ಕೆಳಗಿನ ಭಾಗದ ಕೆರೆಯಲ್ಲೂ ನೀರು ಹೆಚ್ಚಾಗಿದೆ ಎನ್ನುತ್ತಾರೆ ಬಿಟ್ಟಿ ನೆಡುನೀಲಂ.  ಬ್ಯಾರೆಲ್ ಒಳಗಡೆ ಜಲ್ಲಿ , ಮಸಿ ಹಾಗೂ ಮರಳನ್ನು  ಹಾಕಿ ನೀರು ಸೋಸುವಂತೆ ಮಾಡಿ ಬಾವಿಗೆ ಬಿಡುತ್ತಾರೆ. ಮಳೆಗಾಲ ಪೂರ್ತಿ ಈ ರೀತಿಯಾಗಿ ಬಾವಿಗೆ ನೀರು ಇಂಗುತ್ತದೆ.  ಈ ಮಾದರಿಯನ್ನು  ಎಲ್ಲಾ ಮನೆಗಳಲ್ಲೂ ಮಾಡಬಹುದಾಗಿದೆ.

 

ನಿಮಗೆ ತಿಳಿದಿರುವ ಮಳೆ ಕೊಯ್ಲು , ಜಲಸಂರಕ್ಷಣೆಯ ಸುಲಭ ಉಪಾಯಗಳನ್ನು , ಕೃಷಿಕರ ಮಾದರಿಗಳನ್ನು , ಸಣ್ಣ ಖರ್ಚಿನಲ್ಲಿ  ಮಾಡಬಹುದಾದ , ಮಾಡಿರುವ ಉದಾಹರಣೆಗಳು, ಯಾವುದೇ ಉಪಕರಣಗಳು ಇಲ್ಲದೆ ಮಾಡಬಹುದಾದ ಪ್ರಯತ್ನಗಳು ಇದ್ದರೆ ನಮಗೆ  ಇಮೈಲ್ ಅಥವಾ ವ್ಯಾಟ್ಸಪ್ ಮಾಡಿ ( sullianews@gmail.com ಅಥವಾ 9449125447 )  ತಿಳಿಸಿ. ನಾವು ಸಮಾಜಕ್ಕೆ ತಿಳಿಸುತ್ತೇವೆ. 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

4 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

4 hours ago

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

10 hours ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

11 hours ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

11 hours ago