ಮಳೆಗಾಲದಲ್ಲಿ ಹಸಿರು ಬೆಳೆಯೋಣ

May 14, 2019
2:00 PM

ಈ ವರ್ಷದ ಬೇಸಿಗೆಯಲ್ಲಿ ನೆಲ ನೀರಿನಂಶವನ್ನು ಕಳೆದುಕೊಂಡು ಬರಡಾಗುತ್ತಿದೆ. ಆಧುನಿಕತೆ ಮತ್ತು ಕಾಲಕಾಲಕ್ಕೆ ಸೌಕರ್ಯಗಳಿಗಾಗಿ ನಮ್ಮ ಸುತ್ತ ಮುತ್ತ ಇದ್ದ ಹಸಿರು ಅಳಿದು ಕಾಂಕ್ರೀಟ್ ಕಾಡುಗಳು ಮೇಲೇಳಲು ಸರ್ವ ಪ್ರಯತ್ನಗಳನ್ನೂ ಮಾಡಿದ್ದೇವೆ.

Advertisement

ಮಣ್ಣಿನ ತುಂಬ ಕಾಂಕ್ರೀಟ್ ಮತ್ತು ಪ್ಲಾಸ್ಟಿಕ್ ಬೆಸೆದು ನೆಲದಾಳಕ್ಕೆ ನೀರಿಳಿಯುವ ಒಟ್ಟು ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದೆ. ನಮಗೆ ನಮ್ಮ ಸೌಕರ್ಯಗಳು ನೆಮ್ಮದಿಯನ್ನು, ಸುಖವನ್ನು ಮೊಗೆ ಮೊಗೆದು ಕೊಡುತ್ತವೆ ಎಂಬ ಭ್ರಮೆ. ಅದಕ್ಕಾಗಿ ನಾವು ಪ್ರಕೃತಿಯ ಮೇಲೆ ಎಂಥಹ ಹೇಯ ಅನಾಚಾರಕ್ಕೂ ಹೇಸದೆ ಅದರಿಂದ ಬರುವ ಆದಾಯದ ಸುಖಕ್ಕೆ ಮಣೆ ಹಾಕಿದ್ದೇವೆ. ಈ ಹಂತದಲ್ಲಿ ಯಾರ ಕಿವಿಮಾತುಗಳೂ ನಮಗೆ ಪಥ್ಯವಾಗುವುದು ಕಡಿಮೆಯೇ . ವರ್ಷ ವರ್ಷವೂ ವನಮಹೋತ್ಸವವನ್ನು ಕಾಟಾಚಾರಕ್ಕೆ ಆಚರಿಸಿ ಒಂದಷ್ಟು ಗಿಡಗಳನ್ನು ನೆಲದಲ್ಲಿ ನಟ್ಟು ಬೀಗುವ ನಾವು ಅದರತ್ತ ಮತ್ತೆ ತಿರುಗುವುದಿಲ್ಲ. ನೆಟ್ಟ ಗಿಡಗಳ ಪರಿಸ್ಥಿತಿ ಹೇಗಿದೆ ಎಂಬುದನ್ನೆಲ್ಲ ಯಾರೂ ಯೋಚಿಸುವ ಗೊಡವೆಗೇ ಹೋಗುವುದಿಲ್ಲ. ಈ ಕಾಟಾಚಾರದ ವನಮಹೋತ್ಸವ, ಪ್ರಚಾರದ ದೃಷ್ಟಿಯಲ್ಲಿ ಆಯೋಜಿಸುವ ಗಿಡನಡುವ ನಾಟಕಗಳಿಗಿಂತ ಹೊರತಾಗಿ ನಾವು ನಮ್ಮದೇ ಪರಿಸರದಲ್ಲಿ ಹಣ್ಣು ಹಂಪಲು ಮರಗಳ ಗಿಡಗಳನ್ನು ನಟ್ಟು ಬೆಳೆಸಿದರೆ ಹೇಗೆ? ಪ್ರಚಾರವಿಲ್ಲದೆ, ಹಂಗಿಲ್ಲದೆ ನಮ್ಮಷ್ಟಕ್ಕೆ ನಾವು ಗಿಡಗಳನ್ನು ಮಾಡಿ ಸರಿಯಾಗಿ ಮಳೆ ಬಂದ ಮೇಲೆ ನಟ್ಟುಬಿಡಬಹುದಲ್ಲ. ಇದು ಕಷ್ಟವ?.

ಮರಗಳು ಅಳಿದು ಬಿಸಿಲೇರಿತು ಸಾಮಾನ್ಯವಾಗಿ ಹಳ್ಳಿಗಳಲ್ಲಿ ಅಡಿಕೆ ತೋಟ ಇರದವರು ಕಡಿಮೆ. ಅದರ ಬದಿಗಳಲ್ಲಿ ಹಲಸು, ಮಾವಿನ ಮರಗಳು ಹಿಂದೆ ಸಾಮಾನ್ಯ. ಈಗ ಕಾಲ ಬದಲಾಗಿದೆ. ನೂರಾರು ವರ್ಷಗಳಿಂದ ತೋಟದ ಬದಿಯಲ್ಲಿದ್ದ ಮರಗಳಿಂದು ವ್ಯಾಪಾರದ ದೃಷ್ಟಿಯಿಂದ ಕಡಿದುರುಳಿಸಿಯಾಗಿದೆ. ಹತ್ತಿರದ ಗುಡ್ಡಗಳಿಗೂ ಕೊಡಲಿ ಹೋಗಿದೆ. ಸ್ವಾರ್ಥಕ್ಕಾಗಿ ಹಸಿರೊಸರಿನ ಮೂಲಕ್ಕೆ ಕೈಹಾಕಿ ಹೊಸಕಿದ ಪಾಪಿಗಳು ಮನುಜರು. ಪೆಟ್ಟಿಗೆಯೊಳಗೆ ಬಂಧಿಯಂತೆ ಇದ್ದ ನಮ್ಮ ಹಸಿರು ತೋಟಗಳು ಸುತ್ತಲಿನ ಮರಗಳನ್ನು ಮಾರಾಟಮಾಡಿದ್ದರಿಂದ ಅಥವ ನಮ್ಮ ಮನೆಗೇ ಮೋಪಿಗಾಗಿ ಕಡಿದಿದ್ದರಿಂದ ಇಂದು ಪೂರ್ತಿ ತೆರೆದುಕೊಂಡಿವೆ. ಸರಿಯಾಗಿ ಗಾಳಿಬೆಳಕು ಬೀಳುತ್ತಿವೆ. ಆದರೆ ನೀರಿನ ಕೊರತೆ ಎದುರಿಸುತ್ತಿರುವ ತೋಟಗಳ ಮೇಲೆ ಇದು ಸರಿಯಾಗಿ ದುಷ್ಪರಿಣಾಮ ಬೀರುತ್ತಿವೆ. ಸುತ್ತಲಿನ ಮರಗಳು ಅಳಿದ ನಂತರ ಅಡಿಕೆ ತೋಟದೊಳಗೆ ಗಾಳಿಯೂ ಸರಾಗವಾಗಿ ನುಗ್ಗಿದ್ದರಿಂದ ಫಸಲಿಗೂ ಖುಷಿಯಾಯಿತು. ಆದರೆ ಗಾಳಿ ನುಗ್ಗಿ ಅಡಿಕೆ ಮರಗಳು ಸಾಲಾಗಿ ಉರುಳಿ ನಷ್ಟವೂ ಜೊತೆಗೆ ಬಂತು ಎಂಬುದು ಬೇರೆ ವಿಚಾರ. ಆದರೆ ಅದಕ್ಕಿಂತ ಅಪಾಯಕಾರಿಯಾದ ಸಂಗತಿ ಅಂದರೆ ಮರ ಕಡಿದ ನಂತರ ತೋಟದ ತೇವಾಂಶದಲ್ಲಿ ಏರುಪೇರಾಯಿತು. ಜುಳು ಜುಳು ನೀರಿನ ಸೆಲೆಗಳು ಅಳಿದು ನೆಲ ಬಿಸಿಲಿನ ತಾಪಕ್ಕೆ ಕಂಗಾಲಾಗತೊಡಗಿತು. ಅಡಿಕೆ ಫಸಲಿನ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರಿತು. ನೀರಿಗಾಗಿ ಕೊಳವೆ ಬಾವಿ ಯುಗ ಆರಂಭವಾಗಲು ಮೂಲ ಕಾರಣವೂ ಆಯಿತು.
ಇನ್ನಾದರೂ ಸರಿಯಾಗಲಿ.

Advertisement

ಇದಕ್ಕೆ ಪರಿಹಾರವೆಂದರೆ ಪ್ರಾಯಶ್ಚಿತ. ಮರ ಕಡಿದ ತಪ್ಪಿಗೆ ಅದರ ಮೂರ ಪಟ್ಟು ಮರಗಳನ್ನು ನಟ್ಟು ಬೆಳೆಸುತ್ತೇವೆ ಎಂಬ ಶಪಥ ಮಾಡಿಕೊಳ್ಳಬೇಕು. ಹಳ್ಳಿ ಜನರಿಗೆ ಗಿಡಗಳನ್ನು ಪೇಟೆಯಿಂದ ತರಬೇಕೆಂದಿಲ್ಲ. ಅವರ ಪರಿಸರದಲ್ಲಿಯೇ ಯಥೇಚ್ಛ ಹಣ್ಣು ಹಂಪಲಿನ ಗಿಡ ಮರಗಳಿರುತ್ತವೆ. ಅದರ ಬೀಜಗಳನ್ನು ಜೋಪಾನ ಮಾಡಿ ಮೇ ತಿಂಗಳಿನಲ್ಲಿಯೇ ಲಕೋಟೆಗಳಲ್ಲಿ ಮಣ್ಣು ತುಂಬಿ ಬಿತ್ತಿದರೆ ಮಳೆ ಬಂದಾಗ ಬೀಜ ಮೊಳಕೆಯೊಡೆದು ತಯಾರಾಗುತ್ತದೆ. ಪ್ರತಿ ಮನೆಯಲ್ಲಿ ಇಂತಹ ಕಾರ್ಯ ಮಾಡಲು ಕಷ್ಟವಾಗದು. ಕಾಲಕಾಲಕ್ಕೆ ಮಳೆ ಬರುವುದು, ಪ್ರಾಕೃತಿಕ ವಿಕೋಪಗಳಾಗದಿರುವುದು ಪ್ರತಿಯೊಬ್ಬ ಬಯಸುವ ಕ್ರಮಗಳು. ಅಂತಹ ದಿನಗಳನ್ನು ನಾವು ಮತ್ತು ಮುಂದಿನ ಯುವ ಜನಾಂಗ ಕಾಣಬೇಡವೆ? ಅದರ ಸುಖಗಳನ್ನು ಸವಿಯಬೇಡವೆ? ಅದಕ್ಕಾಗಿ ಮಳೆಗಾಲ ಬಂದೊಡನೆ ನಡಲು ಸಿಗುವಂತೆ ಈಗಲೇ ಪೂರ್ವ ತಯಾರಿ ಮಾಡಿಕೊಂಡು ಗಿಡ ಬೆಳೆಸೋಣ. ವೈವಿಧ್ಯಮಯ ಕಾಡು ಮಾವು, ಹಲಸು, ಪೇರಳೆ, ನೇರಳೆ ಗಿಡಗಳನ್ನಾದರೂ ಬೀಜ ಬಿತ್ತಿ ಬೆಳೆಯುವುದು ಕಷ್ಟವಲ್ಲ. ಅದಕ್ಕೆ ಬೇಕಾದಂತಹ ಮನಸ್ಸುಗಳನ್ನು ಜೋಡಿಸುವ ಕೆಲಸವಾದಾಗ ಹಸಿರಳಿದು ಬಿಸಿಲೇರಿದ ಹವೆ ಹೋಗಿ ಹಸಿರೊಸರು ಉಕ್ಕುಕ್ಕಿ ಬಂದು ಮತ್ತೆ ನಮ್ಮ ನೆಲ ಹಸಿರಾಗಿ ನಳನಳಿಸಬಹುದಲ್ಲವೆ? ಅಂತಹ ದಿನಗಳನ್ನು ನಮ್ಮ ಹಿರಿಯರು ಅನುಭವಿಸಿದ್ದರು. ನಾವು ಅದರಿಂದ ವಂಚಿತರಾದೆವು. ಇನ್ನು ನಮ್ಮಿಂದ ನಮ್ಮ ಮುಂದಿನ ಪೀಳಿಗೆ ಹಸಿರಿನ ನೆಮ್ಮದಿಯನ್ನು ಹಿಗ್ಗಿಗ್ಗಿ ಅನುಭವಿಸುವಂತೆ ಮಾಡುವುದು ನಮ್ಮ ಕರ್ತವ್ಯ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಶಂ. ನಾ. ಖಂಡಿಗೆ

ಕೃಷಿಕ, ಬರಹಗಾರರು

ಇದನ್ನೂ ಓದಿ

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ
August 10, 2025
7:00 AM
by: ನಾ.ಕಾರಂತ ಪೆರಾಜೆ
ಹೊಸರುಚಿ | ಹಲಸಿನ ಹಣ್ಣಿನ ಹಲ್ವ
August 9, 2025
7:37 AM
by: ದಿವ್ಯ ಮಹೇಶ್
ನೈತಿಕ ಮೌಲ್ಯದ ಸವಾಲು, ಕಾಮುಕ ರಾಜಕಾರಣಿಯ ಸೋಲು
August 6, 2025
8:23 PM
by: ಡಾ.ಚಂದ್ರಶೇಖರ ದಾಮ್ಲೆ
ಮಾತು ಬಿಡ ಮಂಜುನಾಥ | ಮಾತಿನ ಮೇಲೆ ಹಿಡಿತ ಇರಲಿ, ಎಚ್ಚರಿಕೆ ಇರಲಿ
August 6, 2025
8:04 AM
by: ಮಹೇಶ್ ಪುಚ್ಚಪ್ಪಾಡಿ
ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಪ್ರಮುಖ ಸುದ್ದಿ

MIRROR FOCUS

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!
August 14, 2025
7:39 AM
by: ವಿಶೇಷ ಪ್ರತಿನಿಧಿ
ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!
August 14, 2025
7:39 AM
by: ವಿಶೇಷ ಪ್ರತಿನಿಧಿ
ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ
August 14, 2025
7:04 AM
by: The Rural Mirror ಸುದ್ದಿಜಾಲ
ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌
August 13, 2025
11:03 PM
by: ದ ರೂರಲ್ ಮಿರರ್.ಕಾಂ
ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ
August 13, 2025
9:13 PM
by: The Rural Mirror ಸುದ್ದಿಜಾಲ

Editorial pick

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ
August 14, 2025
2:53 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ
August 14, 2025
2:48 PM
by: ಸಾಯಿಶೇಖರ್ ಕರಿಕಳ
ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!
August 14, 2025
7:39 AM
by: ವಿಶೇಷ ಪ್ರತಿನಿಧಿ
ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ
August 14, 2025
7:04 AM
by: The Rural Mirror ಸುದ್ದಿಜಾಲ
ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌
August 13, 2025
11:03 PM
by: ದ ರೂರಲ್ ಮಿರರ್.ಕಾಂ
ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ
August 13, 2025
9:13 PM
by: The Rural Mirror ಸುದ್ದಿಜಾಲ
15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ 
August 13, 2025
8:04 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?
August 13, 2025
2:02 PM
by: ಸಾಯಿಶೇಖರ್ ಕರಿಕಳ
ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
August 13, 2025
7:26 AM
by: The Rural Mirror ಸುದ್ದಿಜಾಲ

ವಿಶೇಷ ವರದಿ

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ
ಈ ಬಾರಿಯ ಮಳೆಯಿಂದ ಅಡಿಕೆಗೆ ಕೊಳೆರೋಗ | ಮರ ಏರಿ ಔಷಧಿ ಸಿಂಪಡಿಸಿದ ಮಹಿಳೆ |
August 6, 2025
7:16 AM
by: ವಿಶೇಷ ಪ್ರತಿನಿಧಿ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ

OPINION

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group