Advertisement
MIRROR FOCUS

ಮಳೆಗಾಲದ ಆರಂಭ ಖುಷಿಯಲ್ಲಿ ಮೈಮರೆಯಬಾರದು , ಇರಬೇಕು ಮುಂಜಾಗ್ರತೆ

Share

ಸುಳ್ಯ: ವಿಳಂಬವಾಗಿ ಮುಂಗಾರು ಆರಂಭವಾಯಿತು. ಮಳೆ ಬರುವ ನಿರೀಕ್ಷೆ, ಕಾತರ , ಹಂಬಲ ಎಲ್ಲವೂ ಇತ್ತು. ಕೊನೆಗೂ ಮಳೆ ಬಂತು. ಖುಷಿಯಾಯ್ತು. ಇದೇ ಖುಷಿಯಲ್ಲಿ  ಇನ್ನೀಗ ಮುಂಜಾಗ್ರತೆಯೂ ಅಗತ್ಯವಾಗಿದೆ. ಬಂಟ್ವಾಳದಲ್ಲಿ ವಿದ್ಯುತ್ ಶಾಕ್ ಗೆ ಇಬ್ಬರು ಬಲಿಯಾದರು, ಸುಬ್ರಹ್ಮಣ್ಯದಲ್ಲಿ ಮರದ ಗೆಲ್ಲು ಬಿದ್ದು ವ್ಯಕ್ತಿಯೊಬ್ಬರಿಗೆ ಗಾಯವಾಗಿದೆ. ಮಡಿಕೇರಿ ಬಳಿ ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯವಾಗಿದೆ. ಹೀಗಾಗಿ ಮಳೆಗಾಲ ಮುಂಜಾಗ್ರತೆ ಹೆಚ್ಚಾಗಿ ಬೇಕಾಗಿದೆ.

Advertisement
Advertisement

ಮಡಿಕೇರಿಯಲ್ಲಿ  ಜಿಲ್ಲಾಡಳಿತವು ಮುಂಜಾಗ್ರತಾ ಸಭೆ  ನಡೆಸಿದೆ. ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹವಾಮಾನದ ಬದಲಾವಣೆ ಕುರಿತು ನಿರಂತರ ನಿಗಾವಹಿಸಿದ್ದು, ಭಾರೀ ಮಳೆ ಅಥವಾ ನೈಸರ್ಗಿಕ ವಿಕೋಪದ ಮನ್ಸೂಚನೆ ಇದ್ದಲ್ಲಿ ಜಿಲ್ಲಾಡಳಿತ ಅಧಿಕೃತವಾಗಿ ಮಾಹಿತಿ ನೀಡಲಿದೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಟ್ಟು ಆತಂಕಕ್ಕೆ ಒಳಗಾಗಬಾರದೆಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್  ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Advertisement

ಮಡಿಕೇರಿಯಲ್ಲಿ  ಜೂ.13ರವರೆಗೆ ಭಾರೀ ಮಳೆ ಮತ್ತು ಗಾಳಿ ಇರಲಿದೆಯೆಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ. ಜೂ.14 ರಿಂದ 20ರವರೆಗೆ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆಯಾದರು, ಒಳನಾಡು ಪ್ರದೇಶಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಜೂ.20 ರ ನಂತರ ಜಿಲ್ಲೆಯಲ್ಲಿ ಮತ್ತೆ ಮುಂಗಾರುಮಳೆ ಚುರುಕುಗೊಳ್ಳಲಿದ್ದು, ಸಾರ್ವಜನಿಕರು ಯಾವುದೇ ಪ್ರಾಕೃತಿ ವಿಕೋಪ ಸಮಸ್ಯೆಗಳು ಎದುರಾದಲ್ಲಿ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ- ಕಂಟ್ರೋಲ್ ರೂಂ 1077, ವಾಟ್ಸ್ ಅಪ್ ನಂಬರ್ 8550001077.

ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಮಲೆನಾಡು, ಕರಾವಳಿ ಭಾಗಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ  ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ಸೂಚನೆ ನೀಡಿದ್ದಾರೆ.ಕಳೆದ ವರ್ಷ ಮಳೆಗಾಲದಲ್ಲಿ ಕೊಡಗು ಸೇರಿದಂತೆ ಮಲೆನಾಡು, ಕರಾವಳಿ ಭಾಗಗಳಲ್ಲಿ ಭಾರೀ ಅನಾಹುತ ಸಂಭವಿಸಿದ ಹಿನ್ನೆಲೆಯಲ್ಲಿ ಈ ಬಾರಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿನೆ ನೀಡಿದರು.

Advertisement

 

ಮಳೆಗಾಲದ ಆರೋಗ್ಯದ ಮೇಲಿರಲಿ ನಿಗಾ :

Advertisement

ಮಳೆಗಾಲದಲ್ಲಿ ಪ್ರತೀ ವರ್ಷ ಮಲೇರಿಯಾ, ಚಿಕೂನ್‌ಗುನ್ಯಾ, ಹೆಪಟೈಟೀಸ್ ಎ, ಡೆಂಗ್ಯು  ಸೇರಿದಂತೆ ವೈರಲ್ ಫಿವರ್ ಸಾಮಾನ್ಯವಾಗಿರುತ್ತದೆ. ಹೀಗಾಗಿ ಯಾವುದೇ ಆರೋಗ್ಯದ ಸಮಸ್ಯೆ ಬಗ್ಗೆಯೂ ತಕ್ಷಣ ಮುಂಜಾಗ್ರತೆ ಅಗತ್ಯವಾಗಿದೆ. 2-3 ದಿನ ಜ್ವರ ಇದ್ದರೆ ತಕ್ಷಣವೇ ರಕ್ತ ಪರೀಕ್ಷೆ ಮಾಡಿದಿ ಖಚಿತ ಪಡಿಸಿಕೊಳ್ಳುವುದು  ಉತ್ತಮ. ಆರೋಗ್ಯ ಇಲಾಖೆಯೂ ಈ ಬಗ್ಗೆ ಕಾಳಜಿ ವಹಿಸಿದೆ. ಮಳೆಗಾಲದಲ್ಲಿ ಬರುವ ಕಾಯಿಲೆಗಳ ಮೂಲ ನೀರು. ಮುಂಗಾರಿನ ಆರಂಭ ಸೊಳ್ಳೆಗಳ ಸಂತಾನಾಭಿವೃದ್ಧಿಯ ಪರ್ವ ಕಾಲ. ಸಾಮಾನ್ಯವಾಗಿ ನಿಂತ ನೀರಲ್ಲಿ ಸೊಳ್ಳೆಗಳು ವೃದ್ಧಿಯಾಗುತ್ತವೆ. ಇದರಿಂದ ಮಲೇರಿಯಾ, ಡೆಂಗ್ಯು ಚಿಕೂನ್‌ಗುನ್ಯಾದಂತಹ ಸಮಸ್ಯೆಗಳು ಹೆಚ್ಚಾಗಿ ಕಂಡು ಬರುತ್ತದೆ. ಇದರ ಜೊತೆಗೆ  ನೆಗಡಿ, ಜ್ವರ ಕಾಣಿಸಿಕೊಳ್ಳುತ್ತದೆ.

ಅನಾಫಿಲೀಸ್ ಸೊಳ್ಳೆಯಿಂದ ಮಲೇರಿಯಾ ಬರುತ್ತದೆ. ಚಳಿಜ್ವರ, ರಕ್ತಹೀನತೆ, ಸುಸ್ತು, ತಲೆನೋವು, ವಾಂತಿ ಮಲೇರಿಯಾದ ಲಕ್ಷಣಗಳು.

Advertisement

ಡೆಂಗ್ಯು ಈಡೀಸ್ ಸೊಳ್ಳೆಯಿಂದ ಬರುತ್ತದೆ. ಮೈಕೈ ನೋವು, ಕೀಲು ನೋವು, ವಾಂತಿ, ತೀವ್ರ ಜ್ವರ ಇತ್ಯಾದಿ ಲಕ್ಷಣಗಳು.

 

Advertisement

 

 

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

5 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

6 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago

ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |

ಹೆಚ್ಚಿನ ಪಾಲಕರು(Parents) ಮಕ್ಕಳನ್ನು(Children) ಹೆತ್ತ ನಂತರ ಅವರನ್ನು ಶಿಕ್ಷಣದ ವ್ಯವಸ್ಥೆ(Education system) ಮಾಡುವುದು…

2 days ago