ಮಡಿಕೇರಿ : ಮಳೆಗೆ ಮಂಜಿನ ನಗರಿ ಸೊಗಸಾಗಿದೆ. ಮಂಜು ಓಡುತ್ತಾ ಬರುತ್ತಿದೆ… ಹಾಗೆಯೇ ಸುತ್ತಿಕೊಳ್ಳುತ್ತಿದೆ…. ಕೊಂಚ ಹೊತ್ತಲ್ಲಿ ಮರೆಯಾಗುತ್ತಿದೆ.. ಈ ದೃಶ್ಯ ವೈಭವ ಕಾಣುವುದು ಮಡಿಕೇರಿಯ ರಾಜಾಸೀಟಿನಲ್ಲಿ. ಇದೀಗ ಈ ಅಂದಕ್ಕೆ ಮತ್ತಷ್ಟು ಆಕರ್ಷಣೆ ನೀಡಲು ಆನೆಯೂ ಬಂದಿದೆ..!.
ಮಡಿಕೇರಿ ನಗರದ ಹೆಸರುವಾಸಿ ಪ್ರವಾಸಿತಾಣ ರಾಜಾಸೀಟು ಉದ್ಯಾನವನ ಈಗ ಮತ್ತಷ್ಟು ಆಕರ್ಷಣೆಯನ್ನು ಪಡೆದುಕೊಂಡಿದೆ. ವನ್ಯಜೀವಿಗಳ ಬೃಹತ್ ಕಲಾಕೃತಿಗಳನ್ನು ಅಳವಡಿಸಲಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಎತ್ತರದ ಆನೆ ಕಲಾಕೃತಿ ಹೆಚ್ಚು ಗಮನ ಸೆಳೆಯುತ್ತಿದೆ. ಜಿಲ್ಲಾಡಳಿತದ ಆಸಕ್ತಿಯಿಂದಾಗಿ ರಾಜಾಸೀಟಿಗೆ ಹೆಚ್ಚು ಮೆರುಗು ಬಂದಿದೆ ಎಂದು ಸ್ಥಳೀಯ ನಾಗರೀಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುಮಾರು 18 ಲಕ್ಷ ರೂ. ವೆಚ್ಚದ ಕಲಾಕೃತಿಗಳನ್ನು ಪುಣೆಯಿಂದ ತರಲಾಗಿದ್ದು, ನವಿಲು, ಜಿಂಕೆ, ಮೊಲ, ಹುಲಿ, ಜಿರಾಫೆ, ಆನೆ ಹಾಗೂ ಇನ್ನಿತರ ಕಲಾಕೃತಿಗಳು ಪ್ರವಾಸಿಗರ ಗಮನ ಸೆಳೆಯುತ್ತಿವೆ. ಪ್ರವಾಸಿಗರು ಕುಳಿತುಕೊಳ್ಳಲು ಆಕರ್ಷಕ ಕಲ್ಲುಬೆಂಚು ಅಳವಡಿಸಲಾಗುವುದು ಮತ್ತು ವೀಕ್ಷಣಾ ಗೋಪುರವನ್ನು ಮತ್ತಷ್ಟು ಅಂದಗಾಣಿಸಲಾಗುತ್ತಿದೆ.
ಇದೀಗ ಮಳೆಯೂ ಹೆಚ್ಚಾಗಿದ್ದು ಮಂಜಿನ ಓಟದ ದೃಶ್ಯವು ಮನ ತಣಿಸುತ್ತದೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…