ಮಳೆನೀರಿನ ಕೊಯ್ಲು ಇಂದಿನ ಅವಶ್ಯಕತೆ : ಪ್ರೊ. ಎಂ. ಬಾಲಚಂದ್ರಗೌಡ

July 29, 2019
1:00 PM

ಸುಳ್ಯ: ಮಳೆಯೆಂಬುವುದು ನೀರಿನ ಪ್ರಮುಖ ಮೂಲ. ಮಳೆಗಾಲದ ನೀರು ವ್ಯರ್ಥವಾಗದಂತೆ ಅದನ್ನು ಭೂಮಿಗೆ ಇಂಗಿಸಿ ಅಂತರ್ಜಲದ ಮಟ್ಟವನ್ನು ಹೆಚ್ಚಿಸಬಹುದು. ಪ್ರಸ್ತುತವಾಗಿ ಅಂತರ್ಜಲದ ಮಟ್ಟವು ಕುಸಿಯುತ್ತಿದ್ದು, ಇದನ್ನು ಹೆಚ್ಚಿಸಲು ಮಳೆನೀರಿನ ಕೊಯ್ಲು ಅತ್ಯವಶ್ಯಕವಾಗಿದೆ ಎಂದು ನೆಹರು ಮೆಮೊರಿಯಲ್ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ನಡೆದ “ಮಳೆನೀರಿನ ಕೊಯ್ಲು ಇಂದಿನ ಅವಶ್ಯಕತೆʼʼ ಕಾರ್ಯಕ್ರಮದಲ್ಲಿ ಎಂ. ಬಾಲಚಂದ್ರಗೌಡರವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ  ಸಾಯಿರಾಮ್ ಅವರು ಆಗಮಿಸಿದ್ದರು. ಇವರು ಮಳೆನೀರನ್ನು ಇಂಗಿಸುವ ವಿವಿಧ ವಿಧಾನಗಳನ್ನು ತಿಳಿಸುವುದರ ಜೊತೆಗೆ ಕೆ.ವಿ.ಜಿ. ಕ್ಯಾಂಪಸ್ ನಲ್ಲಿ ಅಳವಡಿಸಲಾಗಿರುವ ಮಳೆನೀರಿನ ಘಟಕಗಳನ್ನು ವಿಡಿಯೋ ಮೂಲಕ ಮನಮುಟ್ಟುವಂತೆ ವಿವರಿಸಿದರು.

ಎನ್.ಎಸ್.ಎಸ್. ಘಟಕಾಧಿಕಾರಿಯಾದ ಶ್ರೀ ಸಂಜೀವ ಕುದ್ಪಾಜೆರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್.ಎಸ್.ಎಸ್. ಘಟಕಾಧಿಕಾರಿಯಾದ ಕು.ಪಾವನ ಬಿ. ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅನುಷ ಎಂ. ವಂದಿಸಿದರು. ಪ್ರೇಕ್ಷಾ ಬಿ.ಎನ್. ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror