ಸುಳ್ಯ: ಮಳೆಯೆಂಬುವುದು ನೀರಿನ ಪ್ರಮುಖ ಮೂಲ. ಮಳೆಗಾಲದ ನೀರು ವ್ಯರ್ಥವಾಗದಂತೆ ಅದನ್ನು ಭೂಮಿಗೆ ಇಂಗಿಸಿ ಅಂತರ್ಜಲದ ಮಟ್ಟವನ್ನು ಹೆಚ್ಚಿಸಬಹುದು. ಪ್ರಸ್ತುತವಾಗಿ ಅಂತರ್ಜಲದ ಮಟ್ಟವು ಕುಸಿಯುತ್ತಿದ್ದು, ಇದನ್ನು ಹೆಚ್ಚಿಸಲು ಮಳೆನೀರಿನ ಕೊಯ್ಲು ಅತ್ಯವಶ್ಯಕವಾಗಿದೆ ಎಂದು ನೆಹರು ಮೆಮೊರಿಯಲ್ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ನಡೆದ “ಮಳೆನೀರಿನ ಕೊಯ್ಲು ಇಂದಿನ ಅವಶ್ಯಕತೆʼʼ ಕಾರ್ಯಕ್ರಮದಲ್ಲಿ ಎಂ. ಬಾಲಚಂದ್ರಗೌಡರವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಾಯಿರಾಮ್ ಅವರು ಆಗಮಿಸಿದ್ದರು. ಇವರು ಮಳೆನೀರನ್ನು ಇಂಗಿಸುವ ವಿವಿಧ ವಿಧಾನಗಳನ್ನು ತಿಳಿಸುವುದರ ಜೊತೆಗೆ ಕೆ.ವಿ.ಜಿ. ಕ್ಯಾಂಪಸ್ ನಲ್ಲಿ ಅಳವಡಿಸಲಾಗಿರುವ ಮಳೆನೀರಿನ ಘಟಕಗಳನ್ನು ವಿಡಿಯೋ ಮೂಲಕ ಮನಮುಟ್ಟುವಂತೆ ವಿವರಿಸಿದರು.
ಎನ್.ಎಸ್.ಎಸ್. ಘಟಕಾಧಿಕಾರಿಯಾದ ಶ್ರೀ ಸಂಜೀವ ಕುದ್ಪಾಜೆರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್.ಎಸ್.ಎಸ್. ಘಟಕಾಧಿಕಾರಿಯಾದ ಕು.ಪಾವನ ಬಿ. ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅನುಷ ಎಂ. ವಂದಿಸಿದರು. ಪ್ರೇಕ್ಷಾ ಬಿ.ಎನ್. ನಿರೂಪಿಸಿದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…