ಸುಳ್ಯ: ಮಳೆಯೆಂಬುವುದು ನೀರಿನ ಪ್ರಮುಖ ಮೂಲ. ಮಳೆಗಾಲದ ನೀರು ವ್ಯರ್ಥವಾಗದಂತೆ ಅದನ್ನು ಭೂಮಿಗೆ ಇಂಗಿಸಿ ಅಂತರ್ಜಲದ ಮಟ್ಟವನ್ನು ಹೆಚ್ಚಿಸಬಹುದು. ಪ್ರಸ್ತುತವಾಗಿ ಅಂತರ್ಜಲದ ಮಟ್ಟವು ಕುಸಿಯುತ್ತಿದ್ದು, ಇದನ್ನು ಹೆಚ್ಚಿಸಲು ಮಳೆನೀರಿನ ಕೊಯ್ಲು ಅತ್ಯವಶ್ಯಕವಾಗಿದೆ ಎಂದು ನೆಹರು ಮೆಮೊರಿಯಲ್ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ನಡೆದ “ಮಳೆನೀರಿನ ಕೊಯ್ಲು ಇಂದಿನ ಅವಶ್ಯಕತೆʼʼ ಕಾರ್ಯಕ್ರಮದಲ್ಲಿ ಎಂ. ಬಾಲಚಂದ್ರಗೌಡರವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಾಯಿರಾಮ್ ಅವರು ಆಗಮಿಸಿದ್ದರು. ಇವರು ಮಳೆನೀರನ್ನು ಇಂಗಿಸುವ ವಿವಿಧ ವಿಧಾನಗಳನ್ನು ತಿಳಿಸುವುದರ ಜೊತೆಗೆ ಕೆ.ವಿ.ಜಿ. ಕ್ಯಾಂಪಸ್ ನಲ್ಲಿ ಅಳವಡಿಸಲಾಗಿರುವ ಮಳೆನೀರಿನ ಘಟಕಗಳನ್ನು ವಿಡಿಯೋ ಮೂಲಕ ಮನಮುಟ್ಟುವಂತೆ ವಿವರಿಸಿದರು.
ಎನ್.ಎಸ್.ಎಸ್. ಘಟಕಾಧಿಕಾರಿಯಾದ ಶ್ರೀ ಸಂಜೀವ ಕುದ್ಪಾಜೆರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್.ಎಸ್.ಎಸ್. ಘಟಕಾಧಿಕಾರಿಯಾದ ಕು.ಪಾವನ ಬಿ. ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅನುಷ ಎಂ. ವಂದಿಸಿದರು. ಪ್ರೇಕ್ಷಾ ಬಿ.ಎನ್. ನಿರೂಪಿಸಿದರು.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…