ಸುಳ್ಯ: ಮಳೆಯೆಂಬುವುದು ನೀರಿನ ಪ್ರಮುಖ ಮೂಲ. ಮಳೆಗಾಲದ ನೀರು ವ್ಯರ್ಥವಾಗದಂತೆ ಅದನ್ನು ಭೂಮಿಗೆ ಇಂಗಿಸಿ ಅಂತರ್ಜಲದ ಮಟ್ಟವನ್ನು ಹೆಚ್ಚಿಸಬಹುದು. ಪ್ರಸ್ತುತವಾಗಿ ಅಂತರ್ಜಲದ ಮಟ್ಟವು ಕುಸಿಯುತ್ತಿದ್ದು, ಇದನ್ನು ಹೆಚ್ಚಿಸಲು ಮಳೆನೀರಿನ ಕೊಯ್ಲು ಅತ್ಯವಶ್ಯಕವಾಗಿದೆ ಎಂದು ನೆಹರು ಮೆಮೊರಿಯಲ್ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ನಡೆದ “ಮಳೆನೀರಿನ ಕೊಯ್ಲು ಇಂದಿನ ಅವಶ್ಯಕತೆʼʼ ಕಾರ್ಯಕ್ರಮದಲ್ಲಿ ಎಂ. ಬಾಲಚಂದ್ರಗೌಡರವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಾಯಿರಾಮ್ ಅವರು ಆಗಮಿಸಿದ್ದರು. ಇವರು ಮಳೆನೀರನ್ನು ಇಂಗಿಸುವ ವಿವಿಧ ವಿಧಾನಗಳನ್ನು ತಿಳಿಸುವುದರ ಜೊತೆಗೆ ಕೆ.ವಿ.ಜಿ. ಕ್ಯಾಂಪಸ್ ನಲ್ಲಿ ಅಳವಡಿಸಲಾಗಿರುವ ಮಳೆನೀರಿನ ಘಟಕಗಳನ್ನು ವಿಡಿಯೋ ಮೂಲಕ ಮನಮುಟ್ಟುವಂತೆ ವಿವರಿಸಿದರು.
ಎನ್.ಎಸ್.ಎಸ್. ಘಟಕಾಧಿಕಾರಿಯಾದ ಶ್ರೀ ಸಂಜೀವ ಕುದ್ಪಾಜೆರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್.ಎಸ್.ಎಸ್. ಘಟಕಾಧಿಕಾರಿಯಾದ ಕು.ಪಾವನ ಬಿ. ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅನುಷ ಎಂ. ವಂದಿಸಿದರು. ಪ್ರೇಕ್ಷಾ ಬಿ.ಎನ್. ನಿರೂಪಿಸಿದರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…