ಸುಳ್ಯ: ಮಳೆಯೆಂಬುವುದು ನೀರಿನ ಪ್ರಮುಖ ಮೂಲ. ಮಳೆಗಾಲದ ನೀರು ವ್ಯರ್ಥವಾಗದಂತೆ ಅದನ್ನು ಭೂಮಿಗೆ ಇಂಗಿಸಿ ಅಂತರ್ಜಲದ ಮಟ್ಟವನ್ನು ಹೆಚ್ಚಿಸಬಹುದು. ಪ್ರಸ್ತುತವಾಗಿ ಅಂತರ್ಜಲದ ಮಟ್ಟವು ಕುಸಿಯುತ್ತಿದ್ದು, ಇದನ್ನು ಹೆಚ್ಚಿಸಲು ಮಳೆನೀರಿನ ಕೊಯ್ಲು ಅತ್ಯವಶ್ಯಕವಾಗಿದೆ ಎಂದು ನೆಹರು ಮೆಮೊರಿಯಲ್ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ನಡೆದ “ಮಳೆನೀರಿನ ಕೊಯ್ಲು ಇಂದಿನ ಅವಶ್ಯಕತೆʼʼ ಕಾರ್ಯಕ್ರಮದಲ್ಲಿ ಎಂ. ಬಾಲಚಂದ್ರಗೌಡರವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಾಯಿರಾಮ್ ಅವರು ಆಗಮಿಸಿದ್ದರು. ಇವರು ಮಳೆನೀರನ್ನು ಇಂಗಿಸುವ ವಿವಿಧ ವಿಧಾನಗಳನ್ನು ತಿಳಿಸುವುದರ ಜೊತೆಗೆ ಕೆ.ವಿ.ಜಿ. ಕ್ಯಾಂಪಸ್ ನಲ್ಲಿ ಅಳವಡಿಸಲಾಗಿರುವ ಮಳೆನೀರಿನ ಘಟಕಗಳನ್ನು ವಿಡಿಯೋ ಮೂಲಕ ಮನಮುಟ್ಟುವಂತೆ ವಿವರಿಸಿದರು.
ಎನ್.ಎಸ್.ಎಸ್. ಘಟಕಾಧಿಕಾರಿಯಾದ ಶ್ರೀ ಸಂಜೀವ ಕುದ್ಪಾಜೆರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್.ಎಸ್.ಎಸ್. ಘಟಕಾಧಿಕಾರಿಯಾದ ಕು.ಪಾವನ ಬಿ. ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅನುಷ ಎಂ. ವಂದಿಸಿದರು. ಪ್ರೇಕ್ಷಾ ಬಿ.ಎನ್. ನಿರೂಪಿಸಿದರು.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…