ಸುಳ್ಯ: ಮಳೆಯೆಂಬುವುದು ನೀರಿನ ಪ್ರಮುಖ ಮೂಲ. ಮಳೆಗಾಲದ ನೀರು ವ್ಯರ್ಥವಾಗದಂತೆ ಅದನ್ನು ಭೂಮಿಗೆ ಇಂಗಿಸಿ ಅಂತರ್ಜಲದ ಮಟ್ಟವನ್ನು ಹೆಚ್ಚಿಸಬಹುದು. ಪ್ರಸ್ತುತವಾಗಿ ಅಂತರ್ಜಲದ ಮಟ್ಟವು ಕುಸಿಯುತ್ತಿದ್ದು, ಇದನ್ನು ಹೆಚ್ಚಿಸಲು ಮಳೆನೀರಿನ ಕೊಯ್ಲು ಅತ್ಯವಶ್ಯಕವಾಗಿದೆ ಎಂದು ನೆಹರು ಮೆಮೊರಿಯಲ್ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ನಡೆದ “ಮಳೆನೀರಿನ ಕೊಯ್ಲು ಇಂದಿನ ಅವಶ್ಯಕತೆʼʼ ಕಾರ್ಯಕ್ರಮದಲ್ಲಿ ಎಂ. ಬಾಲಚಂದ್ರಗೌಡರವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಾಯಿರಾಮ್ ಅವರು ಆಗಮಿಸಿದ್ದರು. ಇವರು ಮಳೆನೀರನ್ನು ಇಂಗಿಸುವ ವಿವಿಧ ವಿಧಾನಗಳನ್ನು ತಿಳಿಸುವುದರ ಜೊತೆಗೆ ಕೆ.ವಿ.ಜಿ. ಕ್ಯಾಂಪಸ್ ನಲ್ಲಿ ಅಳವಡಿಸಲಾಗಿರುವ ಮಳೆನೀರಿನ ಘಟಕಗಳನ್ನು ವಿಡಿಯೋ ಮೂಲಕ ಮನಮುಟ್ಟುವಂತೆ ವಿವರಿಸಿದರು.
ಎನ್.ಎಸ್.ಎಸ್. ಘಟಕಾಧಿಕಾರಿಯಾದ ಶ್ರೀ ಸಂಜೀವ ಕುದ್ಪಾಜೆರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್.ಎಸ್.ಎಸ್. ಘಟಕಾಧಿಕಾರಿಯಾದ ಕು.ಪಾವನ ಬಿ. ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅನುಷ ಎಂ. ವಂದಿಸಿದರು. ಪ್ರೇಕ್ಷಾ ಬಿ.ಎನ್. ನಿರೂಪಿಸಿದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…