ಸುಳ್ಯ: ಮಳೆಯೆಂಬುವುದು ನೀರಿನ ಪ್ರಮುಖ ಮೂಲ. ಮಳೆಗಾಲದ ನೀರು ವ್ಯರ್ಥವಾಗದಂತೆ ಅದನ್ನು ಭೂಮಿಗೆ ಇಂಗಿಸಿ ಅಂತರ್ಜಲದ ಮಟ್ಟವನ್ನು ಹೆಚ್ಚಿಸಬಹುದು. ಪ್ರಸ್ತುತವಾಗಿ ಅಂತರ್ಜಲದ ಮಟ್ಟವು ಕುಸಿಯುತ್ತಿದ್ದು, ಇದನ್ನು ಹೆಚ್ಚಿಸಲು ಮಳೆನೀರಿನ ಕೊಯ್ಲು ಅತ್ಯವಶ್ಯಕವಾಗಿದೆ ಎಂದು ನೆಹರು ಮೆಮೊರಿಯಲ್ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ನಡೆದ “ಮಳೆನೀರಿನ ಕೊಯ್ಲು ಇಂದಿನ ಅವಶ್ಯಕತೆʼʼ ಕಾರ್ಯಕ್ರಮದಲ್ಲಿ ಎಂ. ಬಾಲಚಂದ್ರಗೌಡರವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಾಯಿರಾಮ್ ಅವರು ಆಗಮಿಸಿದ್ದರು. ಇವರು ಮಳೆನೀರನ್ನು ಇಂಗಿಸುವ ವಿವಿಧ ವಿಧಾನಗಳನ್ನು ತಿಳಿಸುವುದರ ಜೊತೆಗೆ ಕೆ.ವಿ.ಜಿ. ಕ್ಯಾಂಪಸ್ ನಲ್ಲಿ ಅಳವಡಿಸಲಾಗಿರುವ ಮಳೆನೀರಿನ ಘಟಕಗಳನ್ನು ವಿಡಿಯೋ ಮೂಲಕ ಮನಮುಟ್ಟುವಂತೆ ವಿವರಿಸಿದರು.
ಎನ್.ಎಸ್.ಎಸ್. ಘಟಕಾಧಿಕಾರಿಯಾದ ಶ್ರೀ ಸಂಜೀವ ಕುದ್ಪಾಜೆರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್.ಎಸ್.ಎಸ್. ಘಟಕಾಧಿಕಾರಿಯಾದ ಕು.ಪಾವನ ಬಿ. ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅನುಷ ಎಂ. ವಂದಿಸಿದರು. ಪ್ರೇಕ್ಷಾ ಬಿ.ಎನ್. ನಿರೂಪಿಸಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…