Advertisement
ಸುದ್ದಿಗಳು

#ಮಳೆಮಾತು | ಚುರುಕಾದ ಮುಂಗಾರು ಮಳೆ | ರಾಜ್ಯದ ವಿವಿದೆಡೆ ನಿರೀಕ್ಷೆಗೂ ಮುನ್ನವೇ ಮುಂಗಾರು ಹೆಜ್ಜೆ |

Share

ಕೇರಳದಿಂದ ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಮಾಡಿದೆ. ಈ ಬಾರಿ ಅಂಫಾನ್ ಚಂಡಮಾರುತದ ಜೊತೆ ಜೊತೆಗೇ ಆರಂಭವಾದ ಮುಂಗಾರು ಮಳೆ ನಿಗದಿತ ಸಮಯಕ್ಕೆ ಕೇರಳ ಪ್ರವೇಶ ಮಾಡಿದೆ. ಜೂ.7 ರಿಂದ ರಾಜ್ಯದಲ್ಲಿ  ಮಳೆ ಚುರುಕಾಗಲಿದ್ದು ಜೂ.9 ರಿಂದ ಎಂದಿನಂತೆ ಸುರಿಯಲಿದೆ. ಈ ನಡುವೆ ಜೂನ್ 4 ರಂದು ಕರಾವಳಿಗೆ ಆಗಮಿಸಿರುವ ಮುಂಗಾರು ಸದ್ಯ ದಕ್ಷಿಣ ಒಳನಾಡನ್ನು ಆವರಿಸಿದೆ. ಹೀಗಾಗಿ ನಿರೀಕ್ಷೆಗಿಂತಲೂ ಮೊದಲೇ ಕರ್ನಾಟಕದ ಒಳನಾಡಿನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಿನ ಲೆಕ್ಕಾಚಾರ ಪ್ರಕಾರ ವಾಡಿಕೆಯಂತೆ ಈ ಬಾರಿ ಮಳೆ ಸುರಿಯಲಿದೆ.

Advertisement
Advertisement
Advertisement
Advertisement

ಕೇರಳದಿಂದ ಜೂನ್ 4 ರಂದು ಕರಾವಳಿಗೆ ಮುಂಗಾರು ಮಳೆ ಕಾಲಿಟ್ಟಿದ್ದರೂ ಚಂಡಮಾರುತದ ಕಾರಣದಿಂದ ಕೊಂಚ ನಿಧಾನವಾಗಿ ಈಗ ಮತ್ತೆ ವೇಗ ಪಡೆದಿದೆ.  ಕರ್ನಾಟಕದಲ್ಲಿ ಭಾನುವಾರದಿಂದ ಮುಂಗಾರು ಚುರುಕುಗೊಳ್ಳಲಿದೆ.  ಜೂನ್ 9 ರಿಂದ ಹೆಚ್ಚು ಮಳೆ ಬೀಳಲಿದೆ.

Advertisement

ಈ ಬಾರಿ ಜೂನ್ 11-12 ರೊಳಗೆ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಈಶಾನ್ಯ ರಾಜ್ಯಗಳಿಗೆ ಮುಂಗಾರು ಮಳೆ ತಲುಪಲಿದೆ. ವಾಯುಭಾರ ಕುಸಿತದ ಕಾರಣದಿಂದ ನೈರುತ್ಯ ಮಾನ್ಸೂನ್ ವೇಗ ಪಡೆಯುತ್ತಿದೆ. ಇದರಿಂದಾಗಿ ದೇಶದ ವಿವಿದೆಡೆ ನಿರೀಕ್ಷೆಗಿಂತಲೂ ಬೇಗನೆ ಮಳೆಯಾಗಲಿದೆ. ಮಂಗಳವಾರದ ವೇಳೆಗೆ  ಮಧ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ. ಹೀಗಾಗಿ  ಪಶ್ಚಿಮ ಬಂಗಾಳ, ಒಡಿಶಾ, ಸಿಕ್ಕಿಂ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಿಗೆ ಮುಂಗಾರು ವೇಗ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಎರಡು ದಿನಗಳಲ್ಲಿ,ನೈರುತ್ಯ ಮಾನ್ಸೂನ್  ಕರ್ನಾಟಕದ ಕೆಲವು ಭಾಗಗಳು, ತಮಿಳುನಾಡು ಮತ್ತು ಕರಾವಳಿ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ಈ ನಡುವೆ ಕೇರಳದಲ್ಲಿ ಮೀನುಗಾರರಿಕೆ ಎಚ್ಚರಿಕೆ ನೀಡಲಾಗಿದೆ. ಕೇರಳ ಪ್ರದೇಶದ ಸಮುದ್ರದಲ್ಲಿ ಗಾಳಿಯ ವೇಗವು 45-55 ಕಿ.ಮೀ ಹೊಂದಲಿದ್ದು  ಕೇರಳ ಕರಾವಳಿಯಲ್ಲಿ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…

4 hours ago

‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ

ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…

4 hours ago

ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |

15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…

5 hours ago

ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ

ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…

5 hours ago

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

11 hours ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

12 hours ago