ಕೇರಳದಿಂದ ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಮಾಡಿದೆ. ಈ ಬಾರಿ ಅಂಫಾನ್ ಚಂಡಮಾರುತದ ಜೊತೆ ಜೊತೆಗೇ ಆರಂಭವಾದ ಮುಂಗಾರು ಮಳೆ ನಿಗದಿತ ಸಮಯಕ್ಕೆ ಕೇರಳ ಪ್ರವೇಶ ಮಾಡಿದೆ. ಜೂ.7 ರಿಂದ ರಾಜ್ಯದಲ್ಲಿ ಮಳೆ ಚುರುಕಾಗಲಿದ್ದು ಜೂ.9 ರಿಂದ ಎಂದಿನಂತೆ ಸುರಿಯಲಿದೆ. ಈ ನಡುವೆ ಜೂನ್ 4 ರಂದು ಕರಾವಳಿಗೆ ಆಗಮಿಸಿರುವ ಮುಂಗಾರು ಸದ್ಯ ದಕ್ಷಿಣ ಒಳನಾಡನ್ನು ಆವರಿಸಿದೆ. ಹೀಗಾಗಿ ನಿರೀಕ್ಷೆಗಿಂತಲೂ ಮೊದಲೇ ಕರ್ನಾಟಕದ ಒಳನಾಡಿನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಿನ ಲೆಕ್ಕಾಚಾರ ಪ್ರಕಾರ ವಾಡಿಕೆಯಂತೆ ಈ ಬಾರಿ ಮಳೆ ಸುರಿಯಲಿದೆ.
Advertisement Advertisement Advertisement
ಕೇರಳದಿಂದ ಜೂನ್ 4 ರಂದು ಕರಾವಳಿಗೆ ಮುಂಗಾರು ಮಳೆ ಕಾಲಿಟ್ಟಿದ್ದರೂ ಚಂಡಮಾರುತದ ಕಾರಣದಿಂದ ಕೊಂಚ ನಿಧಾನವಾಗಿ ಈಗ ಮತ್ತೆ ವೇಗ ಪಡೆದಿದೆ. ಕರ್ನಾಟಕದಲ್ಲಿ ಭಾನುವಾರದಿಂದ ಮುಂಗಾರು ಚುರುಕುಗೊಳ್ಳಲಿದೆ. ಜೂನ್ 9 ರಿಂದ ಹೆಚ್ಚು ಮಳೆ ಬೀಳಲಿದೆ.
ಈ ಬಾರಿ ಜೂನ್ 11-12 ರೊಳಗೆ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಈಶಾನ್ಯ ರಾಜ್ಯಗಳಿಗೆ ಮುಂಗಾರು ಮಳೆ ತಲುಪಲಿದೆ. ವಾಯುಭಾರ ಕುಸಿತದ ಕಾರಣದಿಂದ ನೈರುತ್ಯ ಮಾನ್ಸೂನ್ ವೇಗ ಪಡೆಯುತ್ತಿದೆ. ಇದರಿಂದಾಗಿ ದೇಶದ ವಿವಿದೆಡೆ ನಿರೀಕ್ಷೆಗಿಂತಲೂ ಬೇಗನೆ ಮಳೆಯಾಗಲಿದೆ. ಮಂಗಳವಾರದ ವೇಳೆಗೆ ಮಧ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ. ಹೀಗಾಗಿ ಪಶ್ಚಿಮ ಬಂಗಾಳ, ಒಡಿಶಾ, ಸಿಕ್ಕಿಂ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಿಗೆ ಮುಂಗಾರು ವೇಗ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಎರಡು ದಿನಗಳಲ್ಲಿ,ನೈರುತ್ಯ ಮಾನ್ಸೂನ್ ಕರ್ನಾಟಕದ ಕೆಲವು ಭಾಗಗಳು, ತಮಿಳುನಾಡು ಮತ್ತು ಕರಾವಳಿ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ನಡುವೆ ಕೇರಳದಲ್ಲಿ ಮೀನುಗಾರರಿಕೆ ಎಚ್ಚರಿಕೆ ನೀಡಲಾಗಿದೆ. ಕೇರಳ ಪ್ರದೇಶದ ಸಮುದ್ರದಲ್ಲಿ ಗಾಳಿಯ ವೇಗವು 45-55 ಕಿ.ಮೀ ಹೊಂದಲಿದ್ದು ಕೇರಳ ಕರಾವಳಿಯಲ್ಲಿ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…