ಕೇರಳದಿಂದ ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಮಾಡಿದೆ. ಈ ಬಾರಿ ಅಂಫಾನ್ ಚಂಡಮಾರುತದ ಜೊತೆ ಜೊತೆಗೇ ಆರಂಭವಾದ ಮುಂಗಾರು ಮಳೆ ನಿಗದಿತ ಸಮಯಕ್ಕೆ ಕೇರಳ ಪ್ರವೇಶ ಮಾಡಿದೆ. ಜೂ.7 ರಿಂದ ರಾಜ್ಯದಲ್ಲಿ ಮಳೆ ಚುರುಕಾಗಲಿದ್ದು ಜೂ.9 ರಿಂದ ಎಂದಿನಂತೆ ಸುರಿಯಲಿದೆ. ಈ ನಡುವೆ ಜೂನ್ 4 ರಂದು ಕರಾವಳಿಗೆ ಆಗಮಿಸಿರುವ ಮುಂಗಾರು ಸದ್ಯ ದಕ್ಷಿಣ ಒಳನಾಡನ್ನು ಆವರಿಸಿದೆ. ಹೀಗಾಗಿ ನಿರೀಕ್ಷೆಗಿಂತಲೂ ಮೊದಲೇ ಕರ್ನಾಟಕದ ಒಳನಾಡಿನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಿನ ಲೆಕ್ಕಾಚಾರ ಪ್ರಕಾರ ವಾಡಿಕೆಯಂತೆ ಈ ಬಾರಿ ಮಳೆ ಸುರಿಯಲಿದೆ.
ಕೇರಳದಿಂದ ಜೂನ್ 4 ರಂದು ಕರಾವಳಿಗೆ ಮುಂಗಾರು ಮಳೆ ಕಾಲಿಟ್ಟಿದ್ದರೂ ಚಂಡಮಾರುತದ ಕಾರಣದಿಂದ ಕೊಂಚ ನಿಧಾನವಾಗಿ ಈಗ ಮತ್ತೆ ವೇಗ ಪಡೆದಿದೆ. ಕರ್ನಾಟಕದಲ್ಲಿ ಭಾನುವಾರದಿಂದ ಮುಂಗಾರು ಚುರುಕುಗೊಳ್ಳಲಿದೆ. ಜೂನ್ 9 ರಿಂದ ಹೆಚ್ಚು ಮಳೆ ಬೀಳಲಿದೆ.
ಈ ಬಾರಿ ಜೂನ್ 11-12 ರೊಳಗೆ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಈಶಾನ್ಯ ರಾಜ್ಯಗಳಿಗೆ ಮುಂಗಾರು ಮಳೆ ತಲುಪಲಿದೆ. ವಾಯುಭಾರ ಕುಸಿತದ ಕಾರಣದಿಂದ ನೈರುತ್ಯ ಮಾನ್ಸೂನ್ ವೇಗ ಪಡೆಯುತ್ತಿದೆ. ಇದರಿಂದಾಗಿ ದೇಶದ ವಿವಿದೆಡೆ ನಿರೀಕ್ಷೆಗಿಂತಲೂ ಬೇಗನೆ ಮಳೆಯಾಗಲಿದೆ. ಮಂಗಳವಾರದ ವೇಳೆಗೆ ಮಧ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ. ಹೀಗಾಗಿ ಪಶ್ಚಿಮ ಬಂಗಾಳ, ಒಡಿಶಾ, ಸಿಕ್ಕಿಂ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಿಗೆ ಮುಂಗಾರು ವೇಗ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಎರಡು ದಿನಗಳಲ್ಲಿ,ನೈರುತ್ಯ ಮಾನ್ಸೂನ್ ಕರ್ನಾಟಕದ ಕೆಲವು ಭಾಗಗಳು, ತಮಿಳುನಾಡು ಮತ್ತು ಕರಾವಳಿ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ನಡುವೆ ಕೇರಳದಲ್ಲಿ ಮೀನುಗಾರರಿಕೆ ಎಚ್ಚರಿಕೆ ನೀಡಲಾಗಿದೆ. ಕೇರಳ ಪ್ರದೇಶದ ಸಮುದ್ರದಲ್ಲಿ ಗಾಳಿಯ ವೇಗವು 45-55 ಕಿ.ಮೀ ಹೊಂದಲಿದ್ದು ಕೇರಳ ಕರಾವಳಿಯಲ್ಲಿ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…