Advertisement
ಸುದ್ದಿಗಳು

#ಮಳೆಮಾತು | ಚುರುಕಾದ ಮುಂಗಾರು ಮಳೆ | ರಾಜ್ಯದ ವಿವಿದೆಡೆ ನಿರೀಕ್ಷೆಗೂ ಮುನ್ನವೇ ಮುಂಗಾರು ಹೆಜ್ಜೆ |

Share

ಕೇರಳದಿಂದ ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಮಾಡಿದೆ. ಈ ಬಾರಿ ಅಂಫಾನ್ ಚಂಡಮಾರುತದ ಜೊತೆ ಜೊತೆಗೇ ಆರಂಭವಾದ ಮುಂಗಾರು ಮಳೆ ನಿಗದಿತ ಸಮಯಕ್ಕೆ ಕೇರಳ ಪ್ರವೇಶ ಮಾಡಿದೆ. ಜೂ.7 ರಿಂದ ರಾಜ್ಯದಲ್ಲಿ  ಮಳೆ ಚುರುಕಾಗಲಿದ್ದು ಜೂ.9 ರಿಂದ ಎಂದಿನಂತೆ ಸುರಿಯಲಿದೆ. ಈ ನಡುವೆ ಜೂನ್ 4 ರಂದು ಕರಾವಳಿಗೆ ಆಗಮಿಸಿರುವ ಮುಂಗಾರು ಸದ್ಯ ದಕ್ಷಿಣ ಒಳನಾಡನ್ನು ಆವರಿಸಿದೆ. ಹೀಗಾಗಿ ನಿರೀಕ್ಷೆಗಿಂತಲೂ ಮೊದಲೇ ಕರ್ನಾಟಕದ ಒಳನಾಡಿನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಿನ ಲೆಕ್ಕಾಚಾರ ಪ್ರಕಾರ ವಾಡಿಕೆಯಂತೆ ಈ ಬಾರಿ ಮಳೆ ಸುರಿಯಲಿದೆ.


ಕೇರಳದಿಂದ ಜೂನ್ 4 ರಂದು ಕರಾವಳಿಗೆ ಮುಂಗಾರು ಮಳೆ ಕಾಲಿಟ್ಟಿದ್ದರೂ ಚಂಡಮಾರುತದ ಕಾರಣದಿಂದ ಕೊಂಚ ನಿಧಾನವಾಗಿ ಈಗ ಮತ್ತೆ ವೇಗ ಪಡೆದಿದೆ.  ಕರ್ನಾಟಕದಲ್ಲಿ ಭಾನುವಾರದಿಂದ ಮುಂಗಾರು ಚುರುಕುಗೊಳ್ಳಲಿದೆ.  ಜೂನ್ 9 ರಿಂದ ಹೆಚ್ಚು ಮಳೆ ಬೀಳಲಿದೆ.

ಈ ಬಾರಿ ಜೂನ್ 11-12 ರೊಳಗೆ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಈಶಾನ್ಯ ರಾಜ್ಯಗಳಿಗೆ ಮುಂಗಾರು ಮಳೆ ತಲುಪಲಿದೆ. ವಾಯುಭಾರ ಕುಸಿತದ ಕಾರಣದಿಂದ ನೈರುತ್ಯ ಮಾನ್ಸೂನ್ ವೇಗ ಪಡೆಯುತ್ತಿದೆ. ಇದರಿಂದಾಗಿ ದೇಶದ ವಿವಿದೆಡೆ ನಿರೀಕ್ಷೆಗಿಂತಲೂ ಬೇಗನೆ ಮಳೆಯಾಗಲಿದೆ. ಮಂಗಳವಾರದ ವೇಳೆಗೆ  ಮಧ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ. ಹೀಗಾಗಿ  ಪಶ್ಚಿಮ ಬಂಗಾಳ, ಒಡಿಶಾ, ಸಿಕ್ಕಿಂ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಿಗೆ ಮುಂಗಾರು ವೇಗ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಎರಡು ದಿನಗಳಲ್ಲಿ,ನೈರುತ್ಯ ಮಾನ್ಸೂನ್  ಕರ್ನಾಟಕದ ಕೆಲವು ಭಾಗಗಳು, ತಮಿಳುನಾಡು ಮತ್ತು ಕರಾವಳಿ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ನಡುವೆ ಕೇರಳದಲ್ಲಿ ಮೀನುಗಾರರಿಕೆ ಎಚ್ಚರಿಕೆ ನೀಡಲಾಗಿದೆ. ಕೇರಳ ಪ್ರದೇಶದ ಸಮುದ್ರದಲ್ಲಿ ಗಾಳಿಯ ವೇಗವು 45-55 ಕಿ.ಮೀ ಹೊಂದಲಿದ್ದು  ಕೇರಳ ಕರಾವಳಿಯಲ್ಲಿ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

3 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

3 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

4 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

14 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

15 hours ago