ಕೇರಳದಿಂದ ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಮಾಡಿದೆ. ಈ ಬಾರಿ ಅಂಫಾನ್ ಚಂಡಮಾರುತದ ಜೊತೆ ಜೊತೆಗೇ ಆರಂಭವಾದ ಮುಂಗಾರು ಮಳೆ ನಿಗದಿತ ಸಮಯಕ್ಕೆ ಕೇರಳ ಪ್ರವೇಶ ಮಾಡಿದೆ. ಜೂ.7 ರಿಂದ ರಾಜ್ಯದಲ್ಲಿ ಮಳೆ ಚುರುಕಾಗಲಿದ್ದು ಜೂ.9 ರಿಂದ ಎಂದಿನಂತೆ ಸುರಿಯಲಿದೆ. ಈ ನಡುವೆ ಜೂನ್ 4 ರಂದು ಕರಾವಳಿಗೆ ಆಗಮಿಸಿರುವ ಮುಂಗಾರು ಸದ್ಯ ದಕ್ಷಿಣ ಒಳನಾಡನ್ನು ಆವರಿಸಿದೆ. ಹೀಗಾಗಿ ನಿರೀಕ್ಷೆಗಿಂತಲೂ ಮೊದಲೇ ಕರ್ನಾಟಕದ ಒಳನಾಡಿನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಿನ ಲೆಕ್ಕಾಚಾರ ಪ್ರಕಾರ ವಾಡಿಕೆಯಂತೆ ಈ ಬಾರಿ ಮಳೆ ಸುರಿಯಲಿದೆ.
ಕೇರಳದಿಂದ ಜೂನ್ 4 ರಂದು ಕರಾವಳಿಗೆ ಮುಂಗಾರು ಮಳೆ ಕಾಲಿಟ್ಟಿದ್ದರೂ ಚಂಡಮಾರುತದ ಕಾರಣದಿಂದ ಕೊಂಚ ನಿಧಾನವಾಗಿ ಈಗ ಮತ್ತೆ ವೇಗ ಪಡೆದಿದೆ. ಕರ್ನಾಟಕದಲ್ಲಿ ಭಾನುವಾರದಿಂದ ಮುಂಗಾರು ಚುರುಕುಗೊಳ್ಳಲಿದೆ. ಜೂನ್ 9 ರಿಂದ ಹೆಚ್ಚು ಮಳೆ ಬೀಳಲಿದೆ.
ಈ ಬಾರಿ ಜೂನ್ 11-12 ರೊಳಗೆ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಈಶಾನ್ಯ ರಾಜ್ಯಗಳಿಗೆ ಮುಂಗಾರು ಮಳೆ ತಲುಪಲಿದೆ. ವಾಯುಭಾರ ಕುಸಿತದ ಕಾರಣದಿಂದ ನೈರುತ್ಯ ಮಾನ್ಸೂನ್ ವೇಗ ಪಡೆಯುತ್ತಿದೆ. ಇದರಿಂದಾಗಿ ದೇಶದ ವಿವಿದೆಡೆ ನಿರೀಕ್ಷೆಗಿಂತಲೂ ಬೇಗನೆ ಮಳೆಯಾಗಲಿದೆ. ಮಂಗಳವಾರದ ವೇಳೆಗೆ ಮಧ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ. ಹೀಗಾಗಿ ಪಶ್ಚಿಮ ಬಂಗಾಳ, ಒಡಿಶಾ, ಸಿಕ್ಕಿಂ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಿಗೆ ಮುಂಗಾರು ವೇಗ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಎರಡು ದಿನಗಳಲ್ಲಿ,ನೈರುತ್ಯ ಮಾನ್ಸೂನ್ ಕರ್ನಾಟಕದ ಕೆಲವು ಭಾಗಗಳು, ತಮಿಳುನಾಡು ಮತ್ತು ಕರಾವಳಿ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ನಡುವೆ ಕೇರಳದಲ್ಲಿ ಮೀನುಗಾರರಿಕೆ ಎಚ್ಚರಿಕೆ ನೀಡಲಾಗಿದೆ. ಕೇರಳ ಪ್ರದೇಶದ ಸಮುದ್ರದಲ್ಲಿ ಗಾಳಿಯ ವೇಗವು 45-55 ಕಿ.ಮೀ ಹೊಂದಲಿದ್ದು ಕೇರಳ ಕರಾವಳಿಯಲ್ಲಿ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ.
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…