Advertisement
ಸುದ್ದಿಗಳು

#ಮಳೆಮಾತು | ಚುರುಕಾದ ಮುಂಗಾರು ಮಳೆ | ರಾಜ್ಯದ ವಿವಿದೆಡೆ ನಿರೀಕ್ಷೆಗೂ ಮುನ್ನವೇ ಮುಂಗಾರು ಹೆಜ್ಜೆ |

Share

ಕೇರಳದಿಂದ ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಮಾಡಿದೆ. ಈ ಬಾರಿ ಅಂಫಾನ್ ಚಂಡಮಾರುತದ ಜೊತೆ ಜೊತೆಗೇ ಆರಂಭವಾದ ಮುಂಗಾರು ಮಳೆ ನಿಗದಿತ ಸಮಯಕ್ಕೆ ಕೇರಳ ಪ್ರವೇಶ ಮಾಡಿದೆ. ಜೂ.7 ರಿಂದ ರಾಜ್ಯದಲ್ಲಿ  ಮಳೆ ಚುರುಕಾಗಲಿದ್ದು ಜೂ.9 ರಿಂದ ಎಂದಿನಂತೆ ಸುರಿಯಲಿದೆ. ಈ ನಡುವೆ ಜೂನ್ 4 ರಂದು ಕರಾವಳಿಗೆ ಆಗಮಿಸಿರುವ ಮುಂಗಾರು ಸದ್ಯ ದಕ್ಷಿಣ ಒಳನಾಡನ್ನು ಆವರಿಸಿದೆ. ಹೀಗಾಗಿ ನಿರೀಕ್ಷೆಗಿಂತಲೂ ಮೊದಲೇ ಕರ್ನಾಟಕದ ಒಳನಾಡಿನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಿನ ಲೆಕ್ಕಾಚಾರ ಪ್ರಕಾರ ವಾಡಿಕೆಯಂತೆ ಈ ಬಾರಿ ಮಳೆ ಸುರಿಯಲಿದೆ.


ಕೇರಳದಿಂದ ಜೂನ್ 4 ರಂದು ಕರಾವಳಿಗೆ ಮುಂಗಾರು ಮಳೆ ಕಾಲಿಟ್ಟಿದ್ದರೂ ಚಂಡಮಾರುತದ ಕಾರಣದಿಂದ ಕೊಂಚ ನಿಧಾನವಾಗಿ ಈಗ ಮತ್ತೆ ವೇಗ ಪಡೆದಿದೆ.  ಕರ್ನಾಟಕದಲ್ಲಿ ಭಾನುವಾರದಿಂದ ಮುಂಗಾರು ಚುರುಕುಗೊಳ್ಳಲಿದೆ.  ಜೂನ್ 9 ರಿಂದ ಹೆಚ್ಚು ಮಳೆ ಬೀಳಲಿದೆ.

ಈ ಬಾರಿ ಜೂನ್ 11-12 ರೊಳಗೆ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಈಶಾನ್ಯ ರಾಜ್ಯಗಳಿಗೆ ಮುಂಗಾರು ಮಳೆ ತಲುಪಲಿದೆ. ವಾಯುಭಾರ ಕುಸಿತದ ಕಾರಣದಿಂದ ನೈರುತ್ಯ ಮಾನ್ಸೂನ್ ವೇಗ ಪಡೆಯುತ್ತಿದೆ. ಇದರಿಂದಾಗಿ ದೇಶದ ವಿವಿದೆಡೆ ನಿರೀಕ್ಷೆಗಿಂತಲೂ ಬೇಗನೆ ಮಳೆಯಾಗಲಿದೆ. ಮಂಗಳವಾರದ ವೇಳೆಗೆ  ಮಧ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ. ಹೀಗಾಗಿ  ಪಶ್ಚಿಮ ಬಂಗಾಳ, ಒಡಿಶಾ, ಸಿಕ್ಕಿಂ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಿಗೆ ಮುಂಗಾರು ವೇಗ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಎರಡು ದಿನಗಳಲ್ಲಿ,ನೈರುತ್ಯ ಮಾನ್ಸೂನ್  ಕರ್ನಾಟಕದ ಕೆಲವು ಭಾಗಗಳು, ತಮಿಳುನಾಡು ಮತ್ತು ಕರಾವಳಿ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ನಡುವೆ ಕೇರಳದಲ್ಲಿ ಮೀನುಗಾರರಿಕೆ ಎಚ್ಚರಿಕೆ ನೀಡಲಾಗಿದೆ. ಕೇರಳ ಪ್ರದೇಶದ ಸಮುದ್ರದಲ್ಲಿ ಗಾಳಿಯ ವೇಗವು 45-55 ಕಿ.ಮೀ ಹೊಂದಲಿದ್ದು  ಕೇರಳ ಕರಾವಳಿಯಲ್ಲಿ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

2 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

8 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

8 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago