ಮಳೆಯದೊಂದು ಕಥೆ

June 15, 2019
10:30 AM
ಭುವಿಯಲ್ಲಿ ಸೂರ್ಯನ ತಾಪ ಹೆಚ್ಚಾಯಿತು
ನೀರು ಕಾದು ಆವಿಯಾಯ್ತು
ಮಳೆಗಾಗಿ ಮನುಜ ಬೇಡಿ ನಿಂತ
ಮನುಜನ ಬೇಡಿಕೆಗೆ ಮಣಿಯಲಿಲ್ಲ ವರುಣ…..
ಕಾಡನ್ನು ಕಡಿದ ಭೋಗ ಜೀವಿ
ಬಿಸಿಲನ್ನು ಕಂಡು ಶಪಿಸಿದ
ಭುವಿ ಕಾದು ಕೆಂಪಾಯ್ತು
ಹಸಿರೆಲ್ಲ ಒಣಗಿ ಬರಡಾಯ್ತು….
ನೀರಿಗಾಗಿ ಭೂತಾಯಿಯ ಒಡಲನ್ನೇ ಬಗೆದ
ಅಲ್ಲೂ ನೀರ ಪಸೆ ಕಾಣದಾದಾಗ ಭೂಮಿ ತಾಯಿ ಬಂಜೆಯೆಂದ….
ದಾರಿಕಾಣದಾದಾಗ ನರ ದೇವನ ಮೊರೆ ಹೋದ
ಕೊನೆಗೂ ಮಣಿದ ವರುಣ ಧರೆಗೆ ಅವತರಿಸಿದ
ಬಿಡದೆ ನೀರ ಹೊಳೆಯನ್ನೇ ಹರಿಸಿದ
ಸಾಕಿನ್ನು ಹೋಗೆಂದ ಬುದ್ದಿವಂತ
ಹೋಗಲೊಲ್ಲೆ ಎಂದಾಗ ಶಪಿಸುತ್ತಾ ಕುಳಿತ….
ಅವಮಾನ ಸಹಿಸದ ವರುಣ
ಮತ್ತೆ ಗುಡಿಯ ಸೇರಿದ
ಮತ್ತೆ ಭುವಿಯಲ್ಲಿ ಧಗೆಯೇರಿತು
ಮನುಜನದು ಮತ್ತದೇ ಚಾಳಿ ಶುರುವಾಯಿತು….
ಮನುಜನ ವರ್ತನೆ ಬದಲಾಗಲೇ ಇಲ್ಲ…
ಅದಕ್ಕಾಗಿ ಪ್ರಕೃತಿ ತಾನಾಗಿಯೇ ಬದಲಾಗುತ್ತಿದೆ…
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ವೃದ್ಧಾಪ್ಯದಲ್ಲಿ ಬೇಕಾಗಿರುವುದು ಹಣವಲ್ಲ, ಗೌರವ ಮತ್ತು ಆತ್ಮೀಯತೆ
May 15, 2026
8:33 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಪದವಿಪೂರ್ವ ಶಿಕ್ಷಣ ಮತ್ತು ನೀಟ್ ಪರೀಕ್ಷೆಯ ಒತ್ತಡ : ಪರ್ಯಾಯ ದೃಷ್ಟಿಕೋನ
May 1, 2026
10:20 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್
April 20, 2026
9:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror