ಸುಳ್ಯ: ಪ್ರತಿನಿತ್ಯವೂ ನೀರಿಲ್ಲ ಅಂತ ನಾವು ಹೇಳುತ್ತಲೇ ಇದ್ದೇವೆ. ನಾವ್ಯಾಕೆ ನೀರು ಸಂರಕ್ಷಣೆಯತ್ತ ಚಿತ್ತವಿಡಬಾರದು ? ಮಳೆ ನೀರನ್ನೇ ಸಂರಕ್ಷಣೆ ಮಾಡಿದರೆ, ಇಂಗುವಂತೆ ಮಾಡಿದರೆ ಬರ ಬಾರದಂತೆ ಸ್ವಲ್ಪ ತಡೆಯಬಹುದು. ಈ ಬಗ್ಗೆ ಪಿ ಜಿ ಎಸ್ ಎನ್ ಪ್ರಸಾದ್ ಒಂದು ಲೆಕ್ಕ ನೀಡಿದ್ದಾರೆ. ಅದು ಮಳೆ ಲೆಕ್ಕ,
ಒಂದು ಚದರ ಮೀಟರ್ ಪ್ರದೇಶದಲ್ಲಿ ಬೀಳುವ ಒಂದು ಮಿ.ಮೀ.ಮಳೆ ಅಂದರೆ ಒಂದು ಲೀಟರ್ ನೀರು. ಎಕ್ರೆಗೆ 4046.856 ಚದರ ಮೀಟರ್. ಇಲ್ಲಿ ಮಳೆಯ ಅಗಾಧತೆಯನ್ನು ಗಮನಿಸೋಣ.
ಮಳೆ ಇಲ್ಲ ,ಹೀಗಾದರೆ ಹೇಗಾದೀತು,ಅದು ಇದು – ಅಂತ ಮಾತಾಡುತ್ತೇವೆ. ಈ ತನಕ ಬಂದಿರುವ ಮಳೆ ಒಂದು ಎಕರೆ ಪ್ರದೇಶದಲ್ಲಿ 15,13,524 ಲೀ. ಪ್ರಕೃತಿಯನ್ನು ದೂರದೆ ಅಭ್ಯಸಿಸೋಣ. ವಾರ್ಷಿಕ ಸರಾಸರಿ ಮಳೆ 4456 ಮಿ.ಮೀ. ಚದರ ಮೀಟರ್ ಒಂದರ 4456 ಲೀ.ನೀರು. ಇದನ್ನು ಸಂಗ್ರಹಿಸಿ ಇಟ್ಟಲ್ಲಿ ಒಬ್ಬನ 45 ದಿನಗಳ ಅಗತ್ಯಕ್ಕೆ ಸಾಕಾಗಬಲ್ಲುದು.!
ಮುಂದಿನ ದಿನಗಳಲ್ಲಿ ಇದು ಬೇಕಾದೀತು.
ಇಂದಿನ ದಿನವನ್ನು ಗಮನಿಸಿದರೆ, ಈಗಿನ ವಾತಾವರಣ ಗಮನಿಸಿದರೆ ಮಳೆ ಗಮನಿಸಿದರೆ ಜಲಸಂರಕ್ಷಣೆಯತ್ತ ಎಲ್ಲರೂ ಚಿತ್ತಹರಿಸಲೇಬೇಕಾದ ಅನಿವಾರ್ಯತೆ ಇದೆ. ಯಾವೆಲ್ಲಾ ಮಾದರಿಯನ್ನು ನೀರನ್ನು ಸಂರಕ್ಷಣೆ ಮಾಡಬಹುದು ಹಾಗೂ ಹೇಗೆ ಮಾಡಬಹುದು ಎಂಬುದರ ಬಗ್ಗೆ ಯೋಚನೆ ಮಾಡಲೇಬೇಕಿದೆ. ಇದುವರೆಗೆ ಮಳೆ ಇಲ್ಲ ಮಳೆ ಇಲ್ಲ ಎಂದು ಮಾತನಾಡಿದ್ದಾಯಿತು. ಮುಂದೇನು ಎಂಬುದರ ಬಗ್ಗೆ ಯೋಚನೆ ಮಾಡಬೇಕಿದೆ. ಇದಕ್ಕಾಗಿ ಜಲಸಂರಕ್ಷಣೆಯ ಯಶೋಗಾಥೆಗಳು ಇದ್ದರೆ, ಮಳೆಕೊಯ್ಲು , ನೀರಿನ ಬಗೆಗಿನ ಯಾವುದೇ ಯಶೋಗಾಥೆಗಳು ಇದ್ದರೆ ನಮ್ಮೊಂದಿಗೆ ಹಂಚಿಕೊಳ್ಳಿ. (sullianews@gmail.com ಅಥವಾ ವ್ಯಾಟ್ಸಪ್- 9449125447) ನಾವು ಅದನ್ನು ಪ್ರಕಟ ಮಾಡಿ ಇನ್ನೂ ಕೆಲವಾರು ಜನರಿಗೂ ತಿಳಿಯುವಂತೆ ಮಾಡುತ್ತೇವೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.