Advertisement
MIRROR FOCUS

ಮಳೆಯದೊಂದು ಲೆಕ್ಕಾಚಾರ… ನಾವೇಕೆ ಹೀಗೆ ಮಾಡಬಾರದು ?

Share

ಸುಳ್ಯ: ಪ್ರತಿನಿತ್ಯವೂ ನೀರಿಲ್ಲ ಅಂತ ನಾವು ಹೇಳುತ್ತಲೇ ಇದ್ದೇವೆ. ನಾವ್ಯಾಕೆ ನೀರು ಸಂರಕ್ಷಣೆಯತ್ತ ಚಿತ್ತವಿಡಬಾರದು ? ಮಳೆ ನೀರನ್ನೇ ಸಂರಕ್ಷಣೆ ಮಾಡಿದರೆ, ಇಂಗುವಂತೆ ಮಾಡಿದರೆ ಬರ ಬಾರದಂತೆ ಸ್ವಲ್ಪ ತಡೆಯಬಹುದು. ಈ ಬಗ್ಗೆ ಪಿ ಜಿ ಎಸ್ ಎನ್ ಪ್ರಸಾದ್ ಒಂದು ಲೆಕ್ಕ ನೀಡಿದ್ದಾರೆ. ಅದು ಮಳೆ ಲೆಕ್ಕ,

ಒಂದು ಚದರ ಮೀಟರ್ ಪ್ರದೇಶದಲ್ಲಿ ಬೀಳುವ ಒಂದು ಮಿ.ಮೀ.ಮಳೆ ಅಂದರೆ ಒಂದು ಲೀಟರ್ ನೀರು. ಎಕ್ರೆಗೆ 4046.856 ಚದರ ಮೀಟರ್. ಇಲ್ಲಿ ಮಳೆಯ ಅಗಾಧತೆಯನ್ನು ಗಮನಿಸೋಣ.

ಮಳೆ ಇಲ್ಲ ,ಹೀಗಾದರೆ ಹೇಗಾದೀತು,ಅದು ಇದು – ಅಂತ ಮಾತಾಡುತ್ತೇವೆ. ಈ ತನಕ ಬಂದಿರುವ ಮಳೆ ಒಂದು ಎಕರೆ ಪ್ರದೇಶದಲ್ಲಿ 15,13,524 ಲೀ. ಪ್ರಕೃತಿಯನ್ನು ದೂರದೆ ಅಭ್ಯಸಿಸೋಣ. ವಾರ್ಷಿಕ ಸರಾಸರಿ ಮಳೆ 4456 ಮಿ.ಮೀ. ಚದರ ಮೀಟರ್ ಒಂದರ 4456 ಲೀ.ನೀರು. ಇದನ್ನು ಸಂಗ್ರಹಿಸಿ ಇಟ್ಟಲ್ಲಿ ಒಬ್ಬನ 45 ದಿನಗಳ ಅಗತ್ಯಕ್ಕೆ ಸಾಕಾಗಬಲ್ಲುದು.!

ಮುಂದಿನ ದಿನಗಳಲ್ಲಿ ಇದು ಬೇಕಾದೀತು.

ಇಂದಿನ ದಿನವನ್ನು ಗಮನಿಸಿದರೆ, ಈಗಿನ ವಾತಾವರಣ ಗಮನಿಸಿದರೆ ಮಳೆ ಗಮನಿಸಿದರೆ ಜಲಸಂರಕ್ಷಣೆಯತ್ತ ಎಲ್ಲರೂ ಚಿತ್ತಹರಿಸಲೇಬೇಕಾದ ಅನಿವಾರ್ಯತೆ ಇದೆ. ಯಾವೆಲ್ಲಾ ಮಾದರಿಯನ್ನು ನೀರನ್ನು ಸಂರಕ್ಷಣೆ ಮಾಡಬಹುದು ಹಾಗೂ ಹೇಗೆ ಮಾಡಬಹುದು  ಎಂಬುದರ ಬಗ್ಗೆ ಯೋಚನೆ ಮಾಡಲೇಬೇಕಿದೆ. ಇದುವರೆಗೆ ಮಳೆ ಇಲ್ಲ ಮಳೆ ಇಲ್ಲ ಎಂದು ಮಾತನಾಡಿದ್ದಾಯಿತು. ಮುಂದೇನು ಎಂಬುದರ ಬಗ್ಗೆ ಯೋಚನೆ ಮಾಡಬೇಕಿದೆ. ಇದಕ್ಕಾಗಿ ಜಲಸಂರಕ್ಷಣೆಯ ಯಶೋಗಾಥೆಗಳು ಇದ್ದರೆ, ಮಳೆಕೊಯ್ಲು , ನೀರಿನ ಬಗೆಗಿನ ಯಾವುದೇ ಯಶೋಗಾಥೆಗಳು ಇದ್ದರೆ ನಮ್ಮೊಂದಿಗೆ ಹಂಚಿಕೊಳ್ಳಿ. (sullianews@gmail.com ಅಥವಾ ವ್ಯಾಟ್ಸಪ್- 9449125447)  ನಾವು ಅದನ್ನು ಪ್ರಕಟ ಮಾಡಿ ಇನ್ನೂ ಕೆಲವಾರು ಜನರಿಗೂ ತಿಳಿಯುವಂತೆ ಮಾಡುತ್ತೇವೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

10 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

13 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

13 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

17 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

17 hours ago