ಸುಳ್ಯ: ಪ್ರತಿನಿತ್ಯವೂ ನೀರಿಲ್ಲ ಅಂತ ನಾವು ಹೇಳುತ್ತಲೇ ಇದ್ದೇವೆ. ನಾವ್ಯಾಕೆ ನೀರು ಸಂರಕ್ಷಣೆಯತ್ತ ಚಿತ್ತವಿಡಬಾರದು ? ಮಳೆ ನೀರನ್ನೇ ಸಂರಕ್ಷಣೆ ಮಾಡಿದರೆ, ಇಂಗುವಂತೆ ಮಾಡಿದರೆ ಬರ ಬಾರದಂತೆ ಸ್ವಲ್ಪ ತಡೆಯಬಹುದು. ಈ ಬಗ್ಗೆ ಪಿ ಜಿ ಎಸ್ ಎನ್ ಪ್ರಸಾದ್ ಒಂದು ಲೆಕ್ಕ ನೀಡಿದ್ದಾರೆ. ಅದು ಮಳೆ ಲೆಕ್ಕ,
ಒಂದು ಚದರ ಮೀಟರ್ ಪ್ರದೇಶದಲ್ಲಿ ಬೀಳುವ ಒಂದು ಮಿ.ಮೀ.ಮಳೆ ಅಂದರೆ ಒಂದು ಲೀಟರ್ ನೀರು. ಎಕ್ರೆಗೆ 4046.856 ಚದರ ಮೀಟರ್. ಇಲ್ಲಿ ಮಳೆಯ ಅಗಾಧತೆಯನ್ನು ಗಮನಿಸೋಣ.
ಮಳೆ ಇಲ್ಲ ,ಹೀಗಾದರೆ ಹೇಗಾದೀತು,ಅದು ಇದು – ಅಂತ ಮಾತಾಡುತ್ತೇವೆ. ಈ ತನಕ ಬಂದಿರುವ ಮಳೆ ಒಂದು ಎಕರೆ ಪ್ರದೇಶದಲ್ಲಿ 15,13,524 ಲೀ. ಪ್ರಕೃತಿಯನ್ನು ದೂರದೆ ಅಭ್ಯಸಿಸೋಣ. ವಾರ್ಷಿಕ ಸರಾಸರಿ ಮಳೆ 4456 ಮಿ.ಮೀ. ಚದರ ಮೀಟರ್ ಒಂದರ 4456 ಲೀ.ನೀರು. ಇದನ್ನು ಸಂಗ್ರಹಿಸಿ ಇಟ್ಟಲ್ಲಿ ಒಬ್ಬನ 45 ದಿನಗಳ ಅಗತ್ಯಕ್ಕೆ ಸಾಕಾಗಬಲ್ಲುದು.!
ಮುಂದಿನ ದಿನಗಳಲ್ಲಿ ಇದು ಬೇಕಾದೀತು.
ಇಂದಿನ ದಿನವನ್ನು ಗಮನಿಸಿದರೆ, ಈಗಿನ ವಾತಾವರಣ ಗಮನಿಸಿದರೆ ಮಳೆ ಗಮನಿಸಿದರೆ ಜಲಸಂರಕ್ಷಣೆಯತ್ತ ಎಲ್ಲರೂ ಚಿತ್ತಹರಿಸಲೇಬೇಕಾದ ಅನಿವಾರ್ಯತೆ ಇದೆ. ಯಾವೆಲ್ಲಾ ಮಾದರಿಯನ್ನು ನೀರನ್ನು ಸಂರಕ್ಷಣೆ ಮಾಡಬಹುದು ಹಾಗೂ ಹೇಗೆ ಮಾಡಬಹುದು ಎಂಬುದರ ಬಗ್ಗೆ ಯೋಚನೆ ಮಾಡಲೇಬೇಕಿದೆ. ಇದುವರೆಗೆ ಮಳೆ ಇಲ್ಲ ಮಳೆ ಇಲ್ಲ ಎಂದು ಮಾತನಾಡಿದ್ದಾಯಿತು. ಮುಂದೇನು ಎಂಬುದರ ಬಗ್ಗೆ ಯೋಚನೆ ಮಾಡಬೇಕಿದೆ. ಇದಕ್ಕಾಗಿ ಜಲಸಂರಕ್ಷಣೆಯ ಯಶೋಗಾಥೆಗಳು ಇದ್ದರೆ, ಮಳೆಕೊಯ್ಲು , ನೀರಿನ ಬಗೆಗಿನ ಯಾವುದೇ ಯಶೋಗಾಥೆಗಳು ಇದ್ದರೆ ನಮ್ಮೊಂದಿಗೆ ಹಂಚಿಕೊಳ್ಳಿ. (sullianews@gmail.com ಅಥವಾ ವ್ಯಾಟ್ಸಪ್- 9449125447) ನಾವು ಅದನ್ನು ಪ್ರಕಟ ಮಾಡಿ ಇನ್ನೂ ಕೆಲವಾರು ಜನರಿಗೂ ತಿಳಿಯುವಂತೆ ಮಾಡುತ್ತೇವೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…