Advertisement
MIRROR FOCUS

ಮಳೆಯದೊಂದು ಲೆಕ್ಕಾಚಾರ… ನಾವೇಕೆ ಹೀಗೆ ಮಾಡಬಾರದು ?

Share

ಸುಳ್ಯ: ಪ್ರತಿನಿತ್ಯವೂ ನೀರಿಲ್ಲ ಅಂತ ನಾವು ಹೇಳುತ್ತಲೇ ಇದ್ದೇವೆ. ನಾವ್ಯಾಕೆ ನೀರು ಸಂರಕ್ಷಣೆಯತ್ತ ಚಿತ್ತವಿಡಬಾರದು ? ಮಳೆ ನೀರನ್ನೇ ಸಂರಕ್ಷಣೆ ಮಾಡಿದರೆ, ಇಂಗುವಂತೆ ಮಾಡಿದರೆ ಬರ ಬಾರದಂತೆ ಸ್ವಲ್ಪ ತಡೆಯಬಹುದು. ಈ ಬಗ್ಗೆ ಪಿ ಜಿ ಎಸ್ ಎನ್ ಪ್ರಸಾದ್ ಒಂದು ಲೆಕ್ಕ ನೀಡಿದ್ದಾರೆ. ಅದು ಮಳೆ ಲೆಕ್ಕ,

ಒಂದು ಚದರ ಮೀಟರ್ ಪ್ರದೇಶದಲ್ಲಿ ಬೀಳುವ ಒಂದು ಮಿ.ಮೀ.ಮಳೆ ಅಂದರೆ ಒಂದು ಲೀಟರ್ ನೀರು. ಎಕ್ರೆಗೆ 4046.856 ಚದರ ಮೀಟರ್. ಇಲ್ಲಿ ಮಳೆಯ ಅಗಾಧತೆಯನ್ನು ಗಮನಿಸೋಣ.

ಮಳೆ ಇಲ್ಲ ,ಹೀಗಾದರೆ ಹೇಗಾದೀತು,ಅದು ಇದು – ಅಂತ ಮಾತಾಡುತ್ತೇವೆ. ಈ ತನಕ ಬಂದಿರುವ ಮಳೆ ಒಂದು ಎಕರೆ ಪ್ರದೇಶದಲ್ಲಿ 15,13,524 ಲೀ. ಪ್ರಕೃತಿಯನ್ನು ದೂರದೆ ಅಭ್ಯಸಿಸೋಣ. ವಾರ್ಷಿಕ ಸರಾಸರಿ ಮಳೆ 4456 ಮಿ.ಮೀ. ಚದರ ಮೀಟರ್ ಒಂದರ 4456 ಲೀ.ನೀರು. ಇದನ್ನು ಸಂಗ್ರಹಿಸಿ ಇಟ್ಟಲ್ಲಿ ಒಬ್ಬನ 45 ದಿನಗಳ ಅಗತ್ಯಕ್ಕೆ ಸಾಕಾಗಬಲ್ಲುದು.!

ಮುಂದಿನ ದಿನಗಳಲ್ಲಿ ಇದು ಬೇಕಾದೀತು.

ಇಂದಿನ ದಿನವನ್ನು ಗಮನಿಸಿದರೆ, ಈಗಿನ ವಾತಾವರಣ ಗಮನಿಸಿದರೆ ಮಳೆ ಗಮನಿಸಿದರೆ ಜಲಸಂರಕ್ಷಣೆಯತ್ತ ಎಲ್ಲರೂ ಚಿತ್ತಹರಿಸಲೇಬೇಕಾದ ಅನಿವಾರ್ಯತೆ ಇದೆ. ಯಾವೆಲ್ಲಾ ಮಾದರಿಯನ್ನು ನೀರನ್ನು ಸಂರಕ್ಷಣೆ ಮಾಡಬಹುದು ಹಾಗೂ ಹೇಗೆ ಮಾಡಬಹುದು  ಎಂಬುದರ ಬಗ್ಗೆ ಯೋಚನೆ ಮಾಡಲೇಬೇಕಿದೆ. ಇದುವರೆಗೆ ಮಳೆ ಇಲ್ಲ ಮಳೆ ಇಲ್ಲ ಎಂದು ಮಾತನಾಡಿದ್ದಾಯಿತು. ಮುಂದೇನು ಎಂಬುದರ ಬಗ್ಗೆ ಯೋಚನೆ ಮಾಡಬೇಕಿದೆ. ಇದಕ್ಕಾಗಿ ಜಲಸಂರಕ್ಷಣೆಯ ಯಶೋಗಾಥೆಗಳು ಇದ್ದರೆ, ಮಳೆಕೊಯ್ಲು , ನೀರಿನ ಬಗೆಗಿನ ಯಾವುದೇ ಯಶೋಗಾಥೆಗಳು ಇದ್ದರೆ ನಮ್ಮೊಂದಿಗೆ ಹಂಚಿಕೊಳ್ಳಿ. (sullianews@gmail.com ಅಥವಾ ವ್ಯಾಟ್ಸಪ್- 9449125447)  ನಾವು ಅದನ್ನು ಪ್ರಕಟ ಮಾಡಿ ಇನ್ನೂ ಕೆಲವಾರು ಜನರಿಗೂ ತಿಳಿಯುವಂತೆ ಮಾಡುತ್ತೇವೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಗೆ ಋತುಮಾನ ಬೇಡಿಕೆ | ಯಾವ ತಿಂಗಳಲ್ಲಿ ಹೆಚ್ಚು ಲಾಭ? ಯಾವಾಗ ಮಾರುಕಟ್ಟೆ ಮಂದಗತಿ?

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…

5 hours ago

ವಿದೇಶಿ ಅಡಿಕೆ ಶಂಕೆ – ತೆರಿಗೆ ವಂಚನೆ ವಿವಾದ | ವಶಪಡಿಸಿಕೊಂಡ 380 ಚೀಲ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಣೆ

ಕಸ್ಟಮ್ಸ್‌ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…

6 hours ago

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

21 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago