Advertisement
ಸುದ್ದಿಗಳು

ಮಳೆಯ ಕೊರತೆ, ಗಟ್ಟಿಯಾಗದ ಒರತೆ : ಸೊರಗಿದ ಜಲಪಾತಗಳು…!

Share

ಮಡಿಕೇರಿ :  ಮಳೆ, ಗಾಳಿ, ಚಳಿ, ಮಂಜು  ವಾತಾವರಣ ಕಾವೇರಿ ತವರು ಕೊಡಗಿನ ಆಸ್ತಿ. ಪ್ರತಿವರ್ಷ ಜೂನ್ ಆರಂಭವಾಯಿತೆಂದರೆ ಮಳೆಗಾಲದ ಸೊಬಗು ಜಿಲ್ಲೆಯ ಸೊಬಗನ್ನು ಶ್ರೀಮಂತಗೊಳಿಸುತ್ತದೆ. ಆದರೆ ಪ್ರಸ್ತುತ ವರ್ಷ ಮಳೆಯ ಆಗಮನವೇ ಆಗದ ಕಾರಣ ಪ್ರಕೃತಿಯ ಮಡಿಲಿನ ಜಲಪಾತಗಳು ಸೊರಗಿವೆ.

ಮಳೆಯ ಪ್ರಮಾಣ ಗಣನೀಯವಾಗಿ ಕುಸಿತವಾಗಿದ್ದು, ಜಲಪಾತಗಳು ಜೀವಜಲವಿಲ್ಲದೆ ಕಳೆಗುಂದಿವೆ. ಜಿಲ್ಲೆಯ ಪ್ರಮುಖ ಹೆಸರುವಾಸಿ ಜಲಪಾತಗಳಾದ ಅಬ್ಬಿಫಾಲ್ಸ್, ಮಲ್ಲಳ್ಳಿ, ಇರ್ಪು, ಚೇಲಾವರ ಮಳೆಯಿಲ್ಲದೆ ಮಂಕಾಗಿದೆ. ಮಳೆಗಾಲವಾದರೂ ಮಾನ್ಸೂನ್ ಟೂರಿಸಂ ಪರಿಕಲ್ಪನೆಯಡಿ ಕೊಡಗಿನ ಕಡೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಆದರೆ ಮಳೆಗಾಲದಲ್ಲೂ ಸುಡುವ ಬಿಸಿಲು, ಬತ್ತಿಹೋದ ಜಲಮೂಲಗಳನ್ನು ಕಂಡು ನಿರಾಶೆಯಿಂದ ಮರಳುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ಕಳೆದ ಬಾರಿ ಈ ಜಲಪಾತಗಳೆಲ್ಲ ಬೋರ್ಗರೆಯುತ್ತಾ ಧುಮ್ಮಿಕ್ಕುವ ಮೂಲಕ ತಮ್ಮ ಸೊಬಗನ್ನು ಪ್ರವಾಸಿಗರಿಗೆ ಉಣ ಬಡಿಸಿದ್ದವು. ಆದರೆ ಈ ಬಾರಿಯ ಸ್ಥಿತಿ ಮಾತ್ರ ಭಿನ್ನವಾಗಿದೆ. ಮಡಿಕೇರಿಯ ಅಬ್ಬಿ ಜಲಪಾತವನ್ನು ನೋಡಲೆಂದು ಸರಕಾರಿ ರಜಾ ದಿನವಾದ ಶನಿವಾರ ಮತ್ತು ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ಆದರೆ ಜಲಪಾತದ ಸೊಬಗು ಮಾತ್ರ ಕಣ್ಮರೆಯಾಗಿತ್ತು. ಕಳೆದ ಮಳೆಗಾಲದಲ್ಲಿ ಅಬ್ಬಿ ಜಲಪಾತದ ಬಳಿಯೇ ಸಂಭವಿಸಿದ ಭೂ ಕುಸಿತದಿಂದ ಅಲ್ಲಿದ್ದ ತೂಗು ಸೇತುವೆಗೆ ಭಾಗಶ: ಹಾನಿಯಾಗಿದ್ದು, ಇಂದಿಗೂ ದುರಸ್ತಿ ಕಾರ್ಯಕ್ಕೆ ಪ್ರವಾಸೋದ್ಯಮ ಇಲಾಖೆ ಮುಂದಾಗಿಲ್ಲ.

ಇನ್ನು ಪುಷ್ಪಗಿರಿ ತಪ್ಪಲಿನಲ್ಲಿರುವ ಮಲ್ಲಳ್ಳಿ ಜಲಪಾತದಲ್ಲೂ ಹೇಳಿಕೊಳ್ಳುವಷ್ಟು ನೀರಿಲ್ಲ. ಇಲ್ಲಿಗೂ ಸಹಸ್ರ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಮಲ್ಲಳ್ಳಿ ಜಲಪಾತದ ಸಹಜ ಮುದವೇ ಮಾಯವಾಗಿದೆ. ಪ್ರವಾಸಿಗರನ್ನು ತನ್ನ ಒಡಲಿನವರೆಗೂ ಬರಮಾಡಿಕೊಳ್ಳುವ ಜಿಲ್ಲೆಯ ಏಕೈಕ ಮಲ್ಲಳ್ಳಿ ಜಲಪಾತದಲ್ಲಿ ನೀರಿನ ಹನಿಗಳು ಬಹುದೂರದವರೆಗೆ ತನ್ನ ಸಿಂಚನ ಮೂಡಿಸುತ್ತದೆÉ. ಈ ನೀರಿನ ಹನಿಗಳಲ್ಲಿ ಮಿಂದೇಳುವುದೇ ಪ್ರವಾಸಿಗರಿಗೆ ಸ್ವರ್ಗಾನುಭವ. ಬೋರ್ಗರೆಯುತ್ತಾ ಧುಮ್ಮಿಕ್ಕುವ ಈ ಜಲಕನ್ಯೆಯ ಸೌಂದರ್ಯವನ್ನು ಕಣ್ತುಂಬಿಕೊಳ್ಳುವುದೇ ಒಂದು ರೋಮಾಂಚನ. ಆದರೆ ಪುಷ್ಪಗಿರಿ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗದಿರುವುದರಿಂದ ಮಲ್ಲಳ್ಳಿ ಸಹಜವಾಗಿಯೇ ಸೊರಗಿದೆ.

ನಾಪೋಕ್ಲು ಸಮೀಪದ ಚೇಲಾವರ ಮತ್ತು ದಕ್ಷಿಣ ಕೊಡಗಿನ ಇರ್ಪು ಜಲಪಾತಗಳ ಸ್ಥಿತಿಯೇನು ಭಿನ್ನವಾಗಿಲ್ಲ. ಜಿಲ್ಲೆಯಲ್ಲಿ ಮಳೆ ಕೊರತೆಯಾಗಿರುವುದಕ್ಕೆ ಈ ಜಲಪಾತಗಳು ಕೂಡ ಮೂಕ ಸಾಕ್ಷಿ ಹೇಳುತ್ತಿವೆ. ನೈಸರ್ಗಿಕವಾಗಿ ಹಚ್ಚ ಹಸಿರಿನ ಪರಿಸರದ ನಡುವೆ ಕಲ್ಲು ಬಂಡೆಗಳನ್ನು ಸವರುತ್ತಾ ಧುಮ್ಮಿಕ್ಕುವ ಈ ಜಲಪಾತಗಳಿಗೆ ಮಳೆ ಮತ್ತು ಜಲ ನೀರೇ ಆಧಾರ. ಮಳೆಯ ಕೊರತೆ ಮತ್ತು ಅಂತರ್ಜಲ ಏರಿಕೆಯಾಗದಿರುವುದರಿಂದ ಜಲಪಾತಗಳು ಜೀವಕಳೆ ಕಳೆದುಕೊಂಡಿವೆ.

ಕಟ್ಟುನಿಟ್ಟಿನ ಕ್ರಮ:

ಜಿಲ್ಲೆಯ ಜಲಪಾತಗಳು ಎಷ್ಟು ಮೋಹಕವಾಗಿದೆಯೋ ಅಷ್ಟೇ ಕರಾಳತೆಯನ್ನೂ ಹೊಂದಿವೆ. ಮೋಜು ಮಸ್ತಿಯಲ್ಲಿ ತೊಡಗಿ, ಮೈಮರೆತು ನೀರಿನಲ್ಲಿ ಇಳಿದರೆ ಸುಳಿಸಾವು ಖಚಿತ ಎನ್ನುವ ಮಾತಿದೆ. ಅಬ್ಬಿ ಜಲಪಾತದಲ್ಲಿ ನೀರಿಗಿಳಿಯದಂತೆ ಈ ಹಿಂದೆಯೇ ನಿರ್ಬಂಧ ವಿಧಿಸಿ ಅಪಾಯವನ್ನು ತಪ್ಪಿಸಲಾಗಿದೆ. ಹೀಗಾಗಿ ಇಲ್ಲಿ ಸಾವಿನ ಪ್ರಕರಣ ಕಡಿಮೆಯಾಗಿದೆ. ಸೋಮವಾರಪೇಟೆಯ ಮಲ್ಲಳ್ಳಿ ಜಲಪಾತದಲ್ಲಿ ಇತ್ತೀಚೆಗಷ್ಟೇ ಫೆನ್ಸ್ ಅಳವಡಿಸಿ ಜಲಪಾತದ ಒಡಲಿನವರೆಗೆ ತೆರಳುವುದಕ್ಕೆ ನಿಷೇಧ ಹೇರಲಾಗಿದೆ. ಇದನ್ನು ಮೀರಿ ಜಲಪಾತದ ಬುಡಕ್ಕೆ ತೆರಳಿದರೆ ಅಂತಹ ವ್ಯಕ್ತಿಗಳ ವಿರುದ್ದ ಸೋಮವಾರಪೇಟೆ ಪೊಲೀಸರು ಎಫ್.ಐ.ಆರ್ ದಾಖಲಿಸಲು ನಿರ್ಧರಿಸಿದ್ದಾರೆ.

ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯವೂ ಆಗಿದೆ. ಜಲಪಾತಗಳ ಪ್ರವೇಶ ದ್ವಾರದಲ್ಲೇ ನೀರಿಗೆ ಇಳಿಯುದನ್ನು ನಿಷೇಧಿಸಲಾಗಿದೆ. ಜಲಪಾತಕ್ಕಿಳಿದು ಮೃತಪಟ್ಟವರ ಸಂಖ್ಯೆಯನ್ನು ಕೂಡ ಇಲ್ಲಿ ವರ್ಷವಾರು ಉಲ್ಲೇಖಿಸಲಾಗಿದೆ. ಈ ರೀತಿಯ ಎಚ್ಚರಿಕೆಯ ಫಲಕ ಅಳವಡಿಸಿದ್ದರೂ, ಬಂಡ ಧೈರ್ಯ ಮಾಡಿ ಮೋಜು, ಮಸ್ತಿಗಾಗಿ ನೀರಿಗಿಳಿಯುವ ಪ್ರವಾಸಿಗರ ಅಮೂಲ್ಯ ಜೀವಗಳು ಜಲಪಾಲಾಗಿವೆ. ಈ ಪೈಕಿ ಯುವ ಸಮೂಹವೇ ಅತಿ ಹೆಚ್ಚು ಎನ್ನುವುದು ಗಮನಾರ್ಹ. ಆದರೆ ಪ್ರಸ್ತುತ ವರ್ಷ ಮಳೆ ಕೊರತೆಯಿಂದಾಗಿ ಜಲಪಾತಗಳು ಸೊರಗಿರುವುದರಿಂದ ಪ್ರವಾಸಿಗರ ಆಸಕ್ತಿಯು ಕಡಿಮೆಯಾಗಿದೆ. ಉತ್ತಮ ಮಳೆಯ ನಿರೀಕ್ಷೆಯಲ್ಲಿ ಕೊಡಗಿನ ಜನ ಮಾತ್ರವಲ್ಲ ಪ್ರವಾಸಿಗರು ಕೂಡ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

2 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

12 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

12 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

1 day ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

1 day ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

1 day ago