Advertisement
ಸುದ್ದಿಗಳು

ಮಳೆಯ ಜೊತೆಗೆ ಸುಳ್ಯ-ಪುತ್ತೂರಿನ ಗ್ರಾಮೀಣ ಭಾಗದಲ್ಲಿ ಸ್ತಬ್ಧಗೊಂಡ ಬಿ‌ ಎಸ್‌ ಎನ್ ಎನ್… ಸಂಸದ, ಶಾಸಕರೇ‌ ಸ್ವಲ್ಪ ಗಮನಿಸುವಿರಾ ?

Share

ಸುಳ್ಯ: ಕಳೆದ 3 ದಿನಗಳಿಂದ ಸುಳ್ಯ-ಪುತ್ತೂರಿನ ಗ್ರಾಮೀಣ ಭಾಗ ಅಕ್ಷರಶ: ಸ್ತಬ್ಧವಾಗಿದೆ. ಕರೆಂಟು ಇಲ್ಲ, ಮೊಬೈಲ್ ಇಲ್ಲ, ಅಂಚೆಸೇವೆಯೂ ಇಲ್ಲ..!. ಎಲ್ಲವೂ ಒಂದಕ್ಕೊಂದು ಲಿಂಕ್..!. ಸಂಸದರೇ, ಶಾಸಕರೇ ಈಗಲೂ ಗಮನಿಸದೇ ಇದ್ದರೆ , ಕನಿಷ್ಟ‌ಸಂಪರ್ಕ ವ್ಯವಸ್ಥೆ ಕಡೆಗೆ ಗಮನಿಸದೇ ಇದ್ದರೆ ಹೇಗೆ ಎಂದು‌ ಜನರು ಪ್ರಶ್ನೆ ಮಾಡುತ್ತಿದ್ದಾರೆ.

ಒಂದು ಕಾಲದಲ್ಲಿ ಪ್ರತಿ ಗ್ರಾಮಾಂತರ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿದ್ದ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಬಳಿಕ ಖಾಸಗಿ ಮೊಬೈಲ್‌ ಕಂಪೆನಿಗಳು ಬಂದ ಬಳಿಕ ಹಂತ-ಹಂತವಾಗಿ ತನ್ನ ನೆಟ್‌ವರ್ಕ್‌ ವ್ಯಾಪ್ತಿ ಕಳೆದುಕೊಳ್ಳುತ್ತಾ ಸಾಗಿ ಇದೀಗ ಬಳಕೆದಾರರು ಹಿಡಿಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪುತ್ತೂರು ನಗರ,ಗ್ರಾಮಾಂತರ ಬಂಟ್ವಾಳದಲ್ಲೂ ಸರಿಯಾಗಿ ಸಿಗದ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸಂಪೂರ್ಣ ಸ್ಥಬ್ಧಗೊಂಡಿದೆ.

ಪುತ್ತೂರು ಸುಳ್ಯ ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿರುವ ಆಯಾ ಗ್ರಾಮ ಪಂಚಾಯತ್ ಕಚೇರಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿ, ಹಾಲು ಉತ್ಪಾದಕರ ಸಹಕಾರ ಸಂಘದ ಕಚೇರಿ, ಗ್ರಾಮೀಣ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಅನೇಕ ಬ್ಯಾಂಕ್‌ಗಳ ಸಹಿತ ಹಲವಾರು ಸಂಘ ಸಂಸ್ಥೆಗಳು ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಕನೆಕ್ಷ ನ್‌ ಹೊಂದಿದ್ದು, ಇತ್ತೀಚಿನ ದಿನಗಳಲ್ಲಿ ತೀವ್ರ ನೆಟ್‌ವರ್ಕ್‌ ಸಮಸ್ಯೆ ಎದುರಿಸುತ್ತಿದ್ದು, ಜನಸಾಮಾನ್ಯರಿಗೆ ಕಚೇರಿ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿದೆ.ಕಳೆದ 3 ದಿನಗಳಿಂದ ಯಾವುದೂ ಇಲ್ಲ..! ಬಹುತೇಕ‌ ಕಡೆ  ಸೇವೆ ಸ್ಥಗಿತಗೊಂಡಿದೆ.

ಇಂದಿನ ಯುಗದಲ್ಲಿ ಹೆಚ್ಚಿನ ವಹಿವಾಟುಗಳು ಆನ್‌ಲೈನ್‌ ಮೂಲಕವೇ ನಡೆಯುತ್ತಿದ್ದು, ಇದಕ್ಕೆ ಇಂಟರ್‌ನೆಟ್‌ ಸೌಲಭ್ಯ ಅತಿ ಅಗತ್ಯ. ಆದರೆ ಪದೇ ಪದೇ ಸ್ತಬ್ಧಗೊಳ್ಳುತ್ತಿರುವ ನೆಟ್‌ವರ್ಕ್‌ನಿಂದಾಗಿ ಗ್ರಾಮೀಣ ಪ್ರದೇಶದ ಜನರ ಕಷ್ಟವನ್ನು ಕೇಳುವವರೇ ಇಲ್ಲದಂತಾಗಿದೆ.

ಕೆಲವು ಪ್ರದೇಶಗಳಲ್ಲಿ ಕರೆಂಟ್‌ ಹೋದರೆ ಬಿಎಸ್‌ಎನ್‌ಎಲ್‌ ಸಂಪರ್ಕ ಕಳೆದುಕೊಳ್ಳುತ್ತಿದ್ದು, ಕರೆಂಟ್‌ ಇರುವಾಗ ಮಾತ್ರ ಸೇವೆ ಒದಗಿಸುತ್ತಿದೆ. ಆದರೆ ಇನ್ನೂ ಕೆಲವು ಗ್ರಾಮೀಣ ಭಾಗಗಳಲ್ಲಿ ಕರೆಂಟ್‌ ಇದ್ದರೂ, ಇಲ್ಲದಿದ್ದರೂ ನೆಟ್‌ವರ್ಕ್‌ ಸಿಗುವುದೇ ಇಲ್ಲ. ಹೆಚ್ಚಿನ ಕಡೆಗಳಲ್ಲಿ ಟವರ್‌ನ ಬ್ಯಾಟರಿ ಚಾರ್ಜ್‌ ಮಾಡಲು ಜನರೇಟರ್‌ಗೆ ಸಮರ್ಪಕ ಡೀಸೆಲ್‌ ಕೊರತೆಯಿಂದ ಸಮಸ್ಯೆಯಾಗುತ್ತಿದೆ.

ಇದೀಗ ಮಳೆ ಗಾಳಿಯ ಕಾರಣದಿಂದ ಕರೆಂಟ್‌ ಸಮಸ್ಯೆಯೂ ವಿಪರೀತವಾಗಿದೆ.ಹಲವು ದಿನಗಳಿಂದ ಕರೆಂಟ್ ಇಲ್ಲವಾಗಿದೆ. ಇದರಿಂದ ಸಿಗ್ನಲ್ ಇಲ್ಲವಾಗಿದೆ. ಹೀಗಾಗಿ ಅಂಚೆಸೇವೆಯೂ ಬಂದ್…!

ಒಟ್ಟಿನಲ್ಲಿ ಜನಸಾಮಾನ್ಯರ ಗೋಳನ್ನು ಕೇಳುವವರೇ ಇಲ್ಲದಂತಾಗಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

11 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

11 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago