Advertisement
ಸುದ್ದಿಗಳು

ಮಳೆಯ ಜೊತೆಗೆ ಸುಳ್ಯ-ಪುತ್ತೂರಿನ ಗ್ರಾಮೀಣ ಭಾಗದಲ್ಲಿ ಸ್ತಬ್ಧಗೊಂಡ ಬಿ‌ ಎಸ್‌ ಎನ್ ಎನ್… ಸಂಸದ, ಶಾಸಕರೇ‌ ಸ್ವಲ್ಪ ಗಮನಿಸುವಿರಾ ?

Share

ಸುಳ್ಯ: ಕಳೆದ 3 ದಿನಗಳಿಂದ ಸುಳ್ಯ-ಪುತ್ತೂರಿನ ಗ್ರಾಮೀಣ ಭಾಗ ಅಕ್ಷರಶ: ಸ್ತಬ್ಧವಾಗಿದೆ. ಕರೆಂಟು ಇಲ್ಲ, ಮೊಬೈಲ್ ಇಲ್ಲ, ಅಂಚೆಸೇವೆಯೂ ಇಲ್ಲ..!. ಎಲ್ಲವೂ ಒಂದಕ್ಕೊಂದು ಲಿಂಕ್..!. ಸಂಸದರೇ, ಶಾಸಕರೇ ಈಗಲೂ ಗಮನಿಸದೇ ಇದ್ದರೆ , ಕನಿಷ್ಟ‌ಸಂಪರ್ಕ ವ್ಯವಸ್ಥೆ ಕಡೆಗೆ ಗಮನಿಸದೇ ಇದ್ದರೆ ಹೇಗೆ ಎಂದು‌ ಜನರು ಪ್ರಶ್ನೆ ಮಾಡುತ್ತಿದ್ದಾರೆ.

ಒಂದು ಕಾಲದಲ್ಲಿ ಪ್ರತಿ ಗ್ರಾಮಾಂತರ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿದ್ದ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಬಳಿಕ ಖಾಸಗಿ ಮೊಬೈಲ್‌ ಕಂಪೆನಿಗಳು ಬಂದ ಬಳಿಕ ಹಂತ-ಹಂತವಾಗಿ ತನ್ನ ನೆಟ್‌ವರ್ಕ್‌ ವ್ಯಾಪ್ತಿ ಕಳೆದುಕೊಳ್ಳುತ್ತಾ ಸಾಗಿ ಇದೀಗ ಬಳಕೆದಾರರು ಹಿಡಿಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪುತ್ತೂರು ನಗರ,ಗ್ರಾಮಾಂತರ ಬಂಟ್ವಾಳದಲ್ಲೂ ಸರಿಯಾಗಿ ಸಿಗದ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸಂಪೂರ್ಣ ಸ್ಥಬ್ಧಗೊಂಡಿದೆ.

ಪುತ್ತೂರು ಸುಳ್ಯ ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿರುವ ಆಯಾ ಗ್ರಾಮ ಪಂಚಾಯತ್ ಕಚೇರಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿ, ಹಾಲು ಉತ್ಪಾದಕರ ಸಹಕಾರ ಸಂಘದ ಕಚೇರಿ, ಗ್ರಾಮೀಣ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಅನೇಕ ಬ್ಯಾಂಕ್‌ಗಳ ಸಹಿತ ಹಲವಾರು ಸಂಘ ಸಂಸ್ಥೆಗಳು ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಕನೆಕ್ಷ ನ್‌ ಹೊಂದಿದ್ದು, ಇತ್ತೀಚಿನ ದಿನಗಳಲ್ಲಿ ತೀವ್ರ ನೆಟ್‌ವರ್ಕ್‌ ಸಮಸ್ಯೆ ಎದುರಿಸುತ್ತಿದ್ದು, ಜನಸಾಮಾನ್ಯರಿಗೆ ಕಚೇರಿ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿದೆ.ಕಳೆದ 3 ದಿನಗಳಿಂದ ಯಾವುದೂ ಇಲ್ಲ..! ಬಹುತೇಕ‌ ಕಡೆ  ಸೇವೆ ಸ್ಥಗಿತಗೊಂಡಿದೆ.

ಇಂದಿನ ಯುಗದಲ್ಲಿ ಹೆಚ್ಚಿನ ವಹಿವಾಟುಗಳು ಆನ್‌ಲೈನ್‌ ಮೂಲಕವೇ ನಡೆಯುತ್ತಿದ್ದು, ಇದಕ್ಕೆ ಇಂಟರ್‌ನೆಟ್‌ ಸೌಲಭ್ಯ ಅತಿ ಅಗತ್ಯ. ಆದರೆ ಪದೇ ಪದೇ ಸ್ತಬ್ಧಗೊಳ್ಳುತ್ತಿರುವ ನೆಟ್‌ವರ್ಕ್‌ನಿಂದಾಗಿ ಗ್ರಾಮೀಣ ಪ್ರದೇಶದ ಜನರ ಕಷ್ಟವನ್ನು ಕೇಳುವವರೇ ಇಲ್ಲದಂತಾಗಿದೆ.

ಕೆಲವು ಪ್ರದೇಶಗಳಲ್ಲಿ ಕರೆಂಟ್‌ ಹೋದರೆ ಬಿಎಸ್‌ಎನ್‌ಎಲ್‌ ಸಂಪರ್ಕ ಕಳೆದುಕೊಳ್ಳುತ್ತಿದ್ದು, ಕರೆಂಟ್‌ ಇರುವಾಗ ಮಾತ್ರ ಸೇವೆ ಒದಗಿಸುತ್ತಿದೆ. ಆದರೆ ಇನ್ನೂ ಕೆಲವು ಗ್ರಾಮೀಣ ಭಾಗಗಳಲ್ಲಿ ಕರೆಂಟ್‌ ಇದ್ದರೂ, ಇಲ್ಲದಿದ್ದರೂ ನೆಟ್‌ವರ್ಕ್‌ ಸಿಗುವುದೇ ಇಲ್ಲ. ಹೆಚ್ಚಿನ ಕಡೆಗಳಲ್ಲಿ ಟವರ್‌ನ ಬ್ಯಾಟರಿ ಚಾರ್ಜ್‌ ಮಾಡಲು ಜನರೇಟರ್‌ಗೆ ಸಮರ್ಪಕ ಡೀಸೆಲ್‌ ಕೊರತೆಯಿಂದ ಸಮಸ್ಯೆಯಾಗುತ್ತಿದೆ.

ಇದೀಗ ಮಳೆ ಗಾಳಿಯ ಕಾರಣದಿಂದ ಕರೆಂಟ್‌ ಸಮಸ್ಯೆಯೂ ವಿಪರೀತವಾಗಿದೆ.ಹಲವು ದಿನಗಳಿಂದ ಕರೆಂಟ್ ಇಲ್ಲವಾಗಿದೆ. ಇದರಿಂದ ಸಿಗ್ನಲ್ ಇಲ್ಲವಾಗಿದೆ. ಹೀಗಾಗಿ ಅಂಚೆಸೇವೆಯೂ ಬಂದ್…!

ಒಟ್ಟಿನಲ್ಲಿ ಜನಸಾಮಾನ್ಯರ ಗೋಳನ್ನು ಕೇಳುವವರೇ ಇಲ್ಲದಂತಾಗಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

2 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

17 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

18 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago