Advertisement
MIRROR FOCUS

ಮಳೆಯ ಹಿನ್ನೆಲೆ : ಗ್ರಾಮೀಣ ಭಾಗದಲ್ಲಿ ತುರ್ತು ಸಂಪರ್ಕಕ್ಕೆ ಬಿ ಎಸ್ ಎನ್ ಎಲ್ ಸೇವೆಗೆ‌ ಡೀಸೆಲ್ ವ್ಯವಸ್ಥೆ ಮಾಡಿದ ಬಳಕೆದಾರರು..!

Share

ವಾರದಿಂದ ಸುರಿಯುವ ಮಳೆ ಇನ್ನೂ ಮಳೆ ನಿಂತಿಲ್ಲ. ಗ್ರಾಮೀಣ ಭಾಗವಂತೂ ಯಾವುದೇ ಸಂಪರ್ಕವಿಲ್ಲದೆ ಕಂಗೆಟ್ಟಿತು. ಯಾವುದೇ ಸಹಾಯವಾಣಿಯೂ ಸಂಪರ್ಕವಾಗಲಿಲ್ಲ, ಶಾಲೆಗೆ ರಜೆ ಇದ್ದರೂ ತಿಳಿಯಲಿಲ್ಲ. ತುರ್ತು ಸಂಪರ್ಕಕ್ಕೂ ಸಾಧ್ಯವಾಗಲಿಲ್ಲ. ಏಕೆಂದರೆ ಗ್ರಾಮೀಣ ಭಾಗದಲ್ಲಿ ಬಿ ಎಸ್ ಎನ್ ಎಲ್ ಸೇವೆ ಇತ್ತು. ವಿವಿಧ ಕಾರಣದಿಂದ ಅದೆಲ್ಲವೂ ಸ್ಥಗಿತಗೊಂಡಿತು. ಆಗ ಜನರೇ ವ್ಯವಸ್ಥೆ ಗೆ ಮುಂದಾದದರು. ಈ ಕಡೆಗೆ ನಮ್ಮ ಬೆಳಕು…


 

ಗ್ರಾಮೀಣ ಭಾಗದಲ್ಲಿ ತುರ್ತು ಸಂಪರ್ಕ ವ್ಯವಸ್ಥೆಗೆ ಬಳಕೆದಾರರೇ ಡೀಸೆಲ್ ಸಂಗ್ರಹಿಸಿ ಬಿ ಎಸ್ ಎನ್ ಎಲ್ ಟವರ್ ಚಾಲೂ ಮಾಡಿ ಸೇವೆ ಒದಗಿಸಿಕೊಂಡ ಘಟನೆ ಸುಳ್ಯ ತಾಲೂಕಿನ ವಿವಿಧ ಕಡೆ ನಡೆದಿದೆ.‌ಈಗ ಇರುವುದು ಬಿ ಎಸ್ ಎನ್ ಎಲ್‌ನ ತಕ್ಷಣದ ವ್ಯವಸ್ಥೆ..!.

ಕಳೆದ ಒಂದು ‌ವಾರದಿಂದ ಜಿಲ್ಲೆಯಾದ್ಯಂತ ಭಾರೀ ಮಳೆ. ಇದರ ಜೊತೆಗೆ ಗಾಳಿಯೂ ಬೀಸಿದ ಕಾರಣ ವಿದ್ಯುತ್ ಕಂಬ ತುಂಡಾಗಿ ವಿದ್ಯುತ್ ಸಂಪರ್ಕ ಕಡಿತವಾಗಿ‌ ಊರೇ ಕತ್ತಲಲ್ಲಿ ಮುಳುಗಿತು. ಮೊದಲೇ ಡೀಸೆಲ್ ಸರಬರಾಜು ಇಲ್ಲದೆ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸರಬರಾಜು ಇಲ್ಲವಾದರೆ ಮೊಬೈಲ್ ಸಂಪರ್ಕವೂ ಕಡಿತವಾಗುತ್ತಿತ್ತು.‌
ಈಗ ಮಳೆ,‌ ಗಾಳಿಯ ಕಾರಣ ವಿದ್ಯುತ್ ಕಡಿತವಾಗಿ ತುರ್ತು ಸಂಪರ್ಕವೂ ಇಲ್ಲವಾಗಿತ್ತು.‌ಮಳೆಯ ಆರ್ಭಟ‌ ಹೆಚ್ಚಾಗಿ ತುರ್ತು ಸಂಪರ್ಕವೂ ಇಲ್ಲದೆ ಪರದಾಟ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಜನಪ್ರತಿನಿಧಿಗಳೂ‌ ಸೇರಿದಂತೆ ಅಧಿಕಾರಿಗಳು ನಿಸ್ಸಾಯಕ ಸ್ಥಿತಿಯಲ್ಲಿದ್ದರು. ಹೀಗಾಗಿ ಗ್ರಾಮಸ್ಥರೇ ಡೀಸಲ್ ಸಂಗ್ರಹಿಸಿ ಜನರೇಟರ್ ಚಾಲೂ ಮಾಡಿ ಸಂಪರ್ಕ ಮಾಡಿ ಕೊಂಡರು. ಈಗ ಬಿಎಸ್‌ಎನ್‌ಎಲ್‌ ಸಿಬಂದಿಗಳು ತಕ್ಷಣದ ತಾಂತ್ರಿಕ ವ್ಯವಸ್ಥೆ ಮಾಡಿಸಿಕೊಡಬೇಕಾಗಿದೆ.

ಸುಳ್ಯ ತಾಲೂಕಿನ ಕೊಲ್ಲಮೊಗ್ರ,‌ಹರಿಹರ ಪ್ರದೇಶದಲ್ಲಿ ಡೀಸೆಲ್ ಸಂಗ್ರಹವಾದರೆ ಗುತ್ತಿಗಾರು ಗ್ರಾಮದ‌ ಕಮಿಲದಲ್ಲೂ ಸಾರ್ವಜನಿಕರೇ ಡೀಸೆಲ್‌ ಸಂಗ್ರಹಿಸಿ ಜನರೇಟರ್ ಚಾಲೂ ಮಾಡಿ ಸಂಪರ್ಕ ವ್ಯವಸ್ಥೆ ಮಾಡಿಸಿಕೊಂಡರು.‌ ಗಾಳಿ ಮಳೆಗೆ‌‌ ವಿದ್ಯುತ್ ಕಂಬ ತುಂಡಾಗಿ ಕಮಿಲದಲ್ಲಿ ಒಂದು ವಾರದಿಂದ ವಿದ್ಯುತ್ ಸ್ಥಗಿತಗೊಂಡಿದ್ದು ಮೆಸ್ಕಾಂ‌ ಸಿಬಂದಿಗಳು ಸಮಾರೋಪಾದಿಯಲ್ಲಿ ಭಾರೀ ಮಳೆಯ ನಡುವೆಯೂ ನಿರಂತರ ಕೆಲಸ ಮಾಡುತ್ತಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

8 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

8 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

24 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago