Advertisement
MIRROR FOCUS

ಮಳೆಯ ಹಿನ್ನೆಲೆ : ಗ್ರಾಮೀಣ ಭಾಗದಲ್ಲಿ ತುರ್ತು ಸಂಪರ್ಕಕ್ಕೆ ಬಿ ಎಸ್ ಎನ್ ಎಲ್ ಸೇವೆಗೆ‌ ಡೀಸೆಲ್ ವ್ಯವಸ್ಥೆ ಮಾಡಿದ ಬಳಕೆದಾರರು..!

Share

ವಾರದಿಂದ ಸುರಿಯುವ ಮಳೆ ಇನ್ನೂ ಮಳೆ ನಿಂತಿಲ್ಲ. ಗ್ರಾಮೀಣ ಭಾಗವಂತೂ ಯಾವುದೇ ಸಂಪರ್ಕವಿಲ್ಲದೆ ಕಂಗೆಟ್ಟಿತು. ಯಾವುದೇ ಸಹಾಯವಾಣಿಯೂ ಸಂಪರ್ಕವಾಗಲಿಲ್ಲ, ಶಾಲೆಗೆ ರಜೆ ಇದ್ದರೂ ತಿಳಿಯಲಿಲ್ಲ. ತುರ್ತು ಸಂಪರ್ಕಕ್ಕೂ ಸಾಧ್ಯವಾಗಲಿಲ್ಲ. ಏಕೆಂದರೆ ಗ್ರಾಮೀಣ ಭಾಗದಲ್ಲಿ ಬಿ ಎಸ್ ಎನ್ ಎಲ್ ಸೇವೆ ಇತ್ತು. ವಿವಿಧ ಕಾರಣದಿಂದ ಅದೆಲ್ಲವೂ ಸ್ಥಗಿತಗೊಂಡಿತು. ಆಗ ಜನರೇ ವ್ಯವಸ್ಥೆ ಗೆ ಮುಂದಾದದರು. ಈ ಕಡೆಗೆ ನಮ್ಮ ಬೆಳಕು…


 

ಗ್ರಾಮೀಣ ಭಾಗದಲ್ಲಿ ತುರ್ತು ಸಂಪರ್ಕ ವ್ಯವಸ್ಥೆಗೆ ಬಳಕೆದಾರರೇ ಡೀಸೆಲ್ ಸಂಗ್ರಹಿಸಿ ಬಿ ಎಸ್ ಎನ್ ಎಲ್ ಟವರ್ ಚಾಲೂ ಮಾಡಿ ಸೇವೆ ಒದಗಿಸಿಕೊಂಡ ಘಟನೆ ಸುಳ್ಯ ತಾಲೂಕಿನ ವಿವಿಧ ಕಡೆ ನಡೆದಿದೆ.‌ಈಗ ಇರುವುದು ಬಿ ಎಸ್ ಎನ್ ಎಲ್‌ನ ತಕ್ಷಣದ ವ್ಯವಸ್ಥೆ..!.

ಕಳೆದ ಒಂದು ‌ವಾರದಿಂದ ಜಿಲ್ಲೆಯಾದ್ಯಂತ ಭಾರೀ ಮಳೆ. ಇದರ ಜೊತೆಗೆ ಗಾಳಿಯೂ ಬೀಸಿದ ಕಾರಣ ವಿದ್ಯುತ್ ಕಂಬ ತುಂಡಾಗಿ ವಿದ್ಯುತ್ ಸಂಪರ್ಕ ಕಡಿತವಾಗಿ‌ ಊರೇ ಕತ್ತಲಲ್ಲಿ ಮುಳುಗಿತು. ಮೊದಲೇ ಡೀಸೆಲ್ ಸರಬರಾಜು ಇಲ್ಲದೆ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸರಬರಾಜು ಇಲ್ಲವಾದರೆ ಮೊಬೈಲ್ ಸಂಪರ್ಕವೂ ಕಡಿತವಾಗುತ್ತಿತ್ತು.‌
ಈಗ ಮಳೆ,‌ ಗಾಳಿಯ ಕಾರಣ ವಿದ್ಯುತ್ ಕಡಿತವಾಗಿ ತುರ್ತು ಸಂಪರ್ಕವೂ ಇಲ್ಲವಾಗಿತ್ತು.‌ಮಳೆಯ ಆರ್ಭಟ‌ ಹೆಚ್ಚಾಗಿ ತುರ್ತು ಸಂಪರ್ಕವೂ ಇಲ್ಲದೆ ಪರದಾಟ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಜನಪ್ರತಿನಿಧಿಗಳೂ‌ ಸೇರಿದಂತೆ ಅಧಿಕಾರಿಗಳು ನಿಸ್ಸಾಯಕ ಸ್ಥಿತಿಯಲ್ಲಿದ್ದರು. ಹೀಗಾಗಿ ಗ್ರಾಮಸ್ಥರೇ ಡೀಸಲ್ ಸಂಗ್ರಹಿಸಿ ಜನರೇಟರ್ ಚಾಲೂ ಮಾಡಿ ಸಂಪರ್ಕ ಮಾಡಿ ಕೊಂಡರು. ಈಗ ಬಿಎಸ್‌ಎನ್‌ಎಲ್‌ ಸಿಬಂದಿಗಳು ತಕ್ಷಣದ ತಾಂತ್ರಿಕ ವ್ಯವಸ್ಥೆ ಮಾಡಿಸಿಕೊಡಬೇಕಾಗಿದೆ.

ಸುಳ್ಯ ತಾಲೂಕಿನ ಕೊಲ್ಲಮೊಗ್ರ,‌ಹರಿಹರ ಪ್ರದೇಶದಲ್ಲಿ ಡೀಸೆಲ್ ಸಂಗ್ರಹವಾದರೆ ಗುತ್ತಿಗಾರು ಗ್ರಾಮದ‌ ಕಮಿಲದಲ್ಲೂ ಸಾರ್ವಜನಿಕರೇ ಡೀಸೆಲ್‌ ಸಂಗ್ರಹಿಸಿ ಜನರೇಟರ್ ಚಾಲೂ ಮಾಡಿ ಸಂಪರ್ಕ ವ್ಯವಸ್ಥೆ ಮಾಡಿಸಿಕೊಂಡರು.‌ ಗಾಳಿ ಮಳೆಗೆ‌‌ ವಿದ್ಯುತ್ ಕಂಬ ತುಂಡಾಗಿ ಕಮಿಲದಲ್ಲಿ ಒಂದು ವಾರದಿಂದ ವಿದ್ಯುತ್ ಸ್ಥಗಿತಗೊಂಡಿದ್ದು ಮೆಸ್ಕಾಂ‌ ಸಿಬಂದಿಗಳು ಸಮಾರೋಪಾದಿಯಲ್ಲಿ ಭಾರೀ ಮಳೆಯ ನಡುವೆಯೂ ನಿರಂತರ ಕೆಲಸ ಮಾಡುತ್ತಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

9 hours ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

10 hours ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

11 hours ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

18 hours ago

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…

23 hours ago

ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?

ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…

23 hours ago