ವಾರದಿಂದ ಸುರಿಯುವ ಮಳೆ ಇನ್ನೂ ಮಳೆ ನಿಂತಿಲ್ಲ. ಗ್ರಾಮೀಣ ಭಾಗವಂತೂ ಯಾವುದೇ ಸಂಪರ್ಕವಿಲ್ಲದೆ ಕಂಗೆಟ್ಟಿತು. ಯಾವುದೇ ಸಹಾಯವಾಣಿಯೂ ಸಂಪರ್ಕವಾಗಲಿಲ್ಲ, ಶಾಲೆಗೆ ರಜೆ ಇದ್ದರೂ ತಿಳಿಯಲಿಲ್ಲ. ತುರ್ತು ಸಂಪರ್ಕಕ್ಕೂ ಸಾಧ್ಯವಾಗಲಿಲ್ಲ. ಏಕೆಂದರೆ ಗ್ರಾಮೀಣ ಭಾಗದಲ್ಲಿ ಬಿ ಎಸ್ ಎನ್ ಎಲ್ ಸೇವೆ ಇತ್ತು. ವಿವಿಧ ಕಾರಣದಿಂದ ಅದೆಲ್ಲವೂ ಸ್ಥಗಿತಗೊಂಡಿತು. ಆಗ ಜನರೇ ವ್ಯವಸ್ಥೆ ಗೆ ಮುಂದಾದದರು. ಈ ಕಡೆಗೆ ನಮ್ಮ ಬೆಳಕು…
ಗ್ರಾಮೀಣ ಭಾಗದಲ್ಲಿ ತುರ್ತು ಸಂಪರ್ಕ ವ್ಯವಸ್ಥೆಗೆ ಬಳಕೆದಾರರೇ ಡೀಸೆಲ್ ಸಂಗ್ರಹಿಸಿ ಬಿ ಎಸ್ ಎನ್ ಎಲ್ ಟವರ್ ಚಾಲೂ ಮಾಡಿ ಸೇವೆ ಒದಗಿಸಿಕೊಂಡ ಘಟನೆ ಸುಳ್ಯ ತಾಲೂಕಿನ ವಿವಿಧ ಕಡೆ ನಡೆದಿದೆ.ಈಗ ಇರುವುದು ಬಿ ಎಸ್ ಎನ್ ಎಲ್ನ ತಕ್ಷಣದ ವ್ಯವಸ್ಥೆ..!.
ಕಳೆದ ಒಂದು ವಾರದಿಂದ ಜಿಲ್ಲೆಯಾದ್ಯಂತ ಭಾರೀ ಮಳೆ. ಇದರ ಜೊತೆಗೆ ಗಾಳಿಯೂ ಬೀಸಿದ ಕಾರಣ ವಿದ್ಯುತ್ ಕಂಬ ತುಂಡಾಗಿ ವಿದ್ಯುತ್ ಸಂಪರ್ಕ ಕಡಿತವಾಗಿ ಊರೇ ಕತ್ತಲಲ್ಲಿ ಮುಳುಗಿತು. ಮೊದಲೇ ಡೀಸೆಲ್ ಸರಬರಾಜು ಇಲ್ಲದೆ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸರಬರಾಜು ಇಲ್ಲವಾದರೆ ಮೊಬೈಲ್ ಸಂಪರ್ಕವೂ ಕಡಿತವಾಗುತ್ತಿತ್ತು.
ಈಗ ಮಳೆ, ಗಾಳಿಯ ಕಾರಣ ವಿದ್ಯುತ್ ಕಡಿತವಾಗಿ ತುರ್ತು ಸಂಪರ್ಕವೂ ಇಲ್ಲವಾಗಿತ್ತು.ಮಳೆಯ ಆರ್ಭಟ ಹೆಚ್ಚಾಗಿ ತುರ್ತು ಸಂಪರ್ಕವೂ ಇಲ್ಲದೆ ಪರದಾಟ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಜನಪ್ರತಿನಿಧಿಗಳೂ ಸೇರಿದಂತೆ ಅಧಿಕಾರಿಗಳು ನಿಸ್ಸಾಯಕ ಸ್ಥಿತಿಯಲ್ಲಿದ್ದರು. ಹೀಗಾಗಿ ಗ್ರಾಮಸ್ಥರೇ ಡೀಸಲ್ ಸಂಗ್ರಹಿಸಿ ಜನರೇಟರ್ ಚಾಲೂ ಮಾಡಿ ಸಂಪರ್ಕ ಮಾಡಿ ಕೊಂಡರು. ಈಗ ಬಿಎಸ್ಎನ್ಎಲ್ ಸಿಬಂದಿಗಳು ತಕ್ಷಣದ ತಾಂತ್ರಿಕ ವ್ಯವಸ್ಥೆ ಮಾಡಿಸಿಕೊಡಬೇಕಾಗಿದೆ.
ಸುಳ್ಯ ತಾಲೂಕಿನ ಕೊಲ್ಲಮೊಗ್ರ,ಹರಿಹರ ಪ್ರದೇಶದಲ್ಲಿ ಡೀಸೆಲ್ ಸಂಗ್ರಹವಾದರೆ ಗುತ್ತಿಗಾರು ಗ್ರಾಮದ ಕಮಿಲದಲ್ಲೂ ಸಾರ್ವಜನಿಕರೇ ಡೀಸೆಲ್ ಸಂಗ್ರಹಿಸಿ ಜನರೇಟರ್ ಚಾಲೂ ಮಾಡಿ ಸಂಪರ್ಕ ವ್ಯವಸ್ಥೆ ಮಾಡಿಸಿಕೊಂಡರು. ಗಾಳಿ ಮಳೆಗೆ ವಿದ್ಯುತ್ ಕಂಬ ತುಂಡಾಗಿ ಕಮಿಲದಲ್ಲಿ ಒಂದು ವಾರದಿಂದ ವಿದ್ಯುತ್ ಸ್ಥಗಿತಗೊಂಡಿದ್ದು ಮೆಸ್ಕಾಂ ಸಿಬಂದಿಗಳು ಸಮಾರೋಪಾದಿಯಲ್ಲಿ ಭಾರೀ ಮಳೆಯ ನಡುವೆಯೂ ನಿರಂತರ ಕೆಲಸ ಮಾಡುತ್ತಿದ್ದಾರೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…