ಮಡಿಕೇರಿ : ಪಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಅದೇ ಗ್ರಾಮ ವ್ಯಾಪ್ತಿಯಲ್ಲಿ ಮನೆಗಳನ್ನು ನಿರ್ಮಿಸಿ ಕೊಡಬೇಕು ಮತ್ತು ಸಂತ್ರಸ್ತರ ಖರ್ಚು, ವೆಚ್ಚವನ್ನು ಸಧ್ಯದ ಮಟ್ಟಿಗೆ ಸರಕಾರವೇ ಭರಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಪ್ರಮುಖರು ಹಾಗೂ ಕೊಡಗು ಪ್ರಕೃತಿ ವಿಕೋಪ ಸಂತ್ರಸ್ತರ ಹೊರಾಟ ಸಮಿತಿಯ ಅನೇಕರು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂತ್ರಸ್ತರ ಪರವಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಜಿಲ್ಲಾ ಬಿಜೆಪಿ ಹಾಗೂ ಕೊಡಗು ಪ್ರಕೃತಿ ಹೊರಾಟ ಸಮಿತಿ ಮಳೆಗಾಲ ಆರಂಭಕ್ಕೂ ಮೊದಲು ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂತರಿಸುವಂತೆ ಒತ್ತಾಯಿಸಿದರು. ಮಹಾಮಳೆಯಿಂದ ಸಂತ್ರಸ್ತರಾದವರಿಗೆ ಸಮರ್ಪಕವಾಗಿ ಯಾವುದೇ ಪರಿಹಾರ ವ್ಯವಸ್ಥೆಯನ್ನು ಕಲ್ಪಿಸಿಲ್ಲ ಎಂದು ಆರೋಪಿಸಿದ ಬಿಜೆಪಿ ಪ್ರಮುಖರು ತೀವ್ರ ಹಾನಿಗೊಳಗಾದ 8 ಗ್ರಾ.ಪಂ ವ್ಯಾಪ್ತಿಯ ಸಂತ್ರಸ್ತರ ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸಿದರು.ಸರಕಾತಕ್ಷಣ 8 ಪಂಚಾಯತ್ ವ್ಯಾಪ್ತಿಗೆ ಒಳಪಡುವ ಸಂತ್ರಸ್ತರ ಬೆಳೆಸಾಲ, ಕೃಷಿ ಅಭಿವೃದ್ಧಿ ಸಾಲ, ಯಂತ್ರೋಪಕರಣಗಳ ಮೇಲಿನ ಸಾಲ, ವಿದ್ಯಾಭ್ಯಾಸ ಸಾಲ, ತೋಟದ ಮನೆ ನಿರ್ಮಾಣದ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕೆಂದು ಒತ್ತಾಯಿಸಿದರು.
ಕೆಲವು ಸಂತ್ರಸ್ತರು ಅಪಾಯದ ವಲಯದಲ್ಲಿ ವಾಸಿಸುತ್ತಿದ್ದು, ಬೇರೆಡೆಗೆ ಸ್ಥಳಾಂತರಗೊಳ್ಳಲು ಹಾಗೂ ಬೇರೆಡೆ ಬಾಡಿಗೆ ಮನೆ ಪಡೆಯಲು ಬೇಕಾದ ಮುಂಗಡ ಗಣ ಮತ್ತು ಪ್ರತಿ ತಿಂಗಳ ಬಾಡಿಗೆ ಮೊತ್ತವನ್ನು ಸರಕಾರ ನೀಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸಂತ್ರಸ್ತರ ಸಮಸ್ಯೆಗಳಿಗೆ ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದೆ. ಮಳೆಗಾಲಕ್ಕೆ ಮೊದಲೇ ಮನೆಗಳನ್ನು ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಸುರಕ್ಷತೆಯ ದೃಷ್ಟಿಯಿಂದ ಗುಣಮಟ್ಟದ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಜಿಲ್ಲಾಡಳಿತ ಸೂಚಿಸುವ ಸ್ಥಳದಲ್ಲಿ ಮನೆಗಳನ್ನು ಪಡೆದುಕೊಳ್ಳುವುದು ಸೂಕ್ತವೆಂದು ಸಂತ್ರಸ್ತರ ಮನವೊಲಿಸುವ ಪ್ರಯತ್ನ ಮಾಡಿದರು.
ಹೋರಾಟ ಸಮಿತಿಯ ಮುಖಂಡ ಎಂ.ಬಿ.ದೇವಯ್ಯ, ಜಿಲ್ಲಾ ಬಿಜೆಪಿ ವಕ್ತಾರ ನಾಪಂಡ ರವಿಕಾಳಪ್ಪ, ಪ್ರಧಾನ ಕಾರ್ಯದರ್ಶಿಗಳಾದ ರವಿಕುಶಾಲಪ್ಪ, ಕಾಂತಿಸತೀಶ್, ವಿ.ಕೆ.ಲೋಕೇಶ್, ಗಾಳಿಬೀಡು ಪಂಚಾಯತ್ ಅಧ್ಯಕ್ಷ ಸುಭಾಷ್ ನಾಣಯ್ಯ ಹಾಗೂ ಸಂತ್ರಸ್ತರು ಹಾಜರಿದ್ದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…