ಸುದ್ದಿಗಳು

ಮಳೆಹಾನಿ ಹಿನ್ನೆಲೆ : ಕೊಡಗಿನಲ್ಲಿ ಸರಳ ಗಣೇಶೋತ್ಸವ ಆಚರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ: ಪ್ರಸ್ತುತ ವರ್ಷ ಆಗಸ್ಟ್ ತಿಂಗಳಿನಲ್ಲಿ ಸುರಿದ ಮಹಾಮಳೆಯ ಪ್ರವಾಹದ ಸಂಕಷ್ಟವನ್ನು ಎದುರಿಸುತ್ತಿರುವ ಕೊಡಗು ಜಿಲ್ಲೆಯಲ್ಲಿ ಸಾಂಪ್ರದಾಯಿಕ ಗಣೇಶೋತ್ಸವಕ್ಕೆ ಸಿದ್ಧತೆ ಪೂರ್ಣಗೊಂಡಿದೆ.

Advertisement
Advertisement

ಜಿಲ್ಲೆಯಾದ್ಯಂತ ವಿವಿಧ ಗಣೇಶೋತ್ಸವ ಸಮಿತಿಗಳು 400 ಕ್ಕೂ ಹೆಚ್ಚು ಭಾಗಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಿವೆ. ಮಡಿಕೇರಿಯ ಕೋಟೆ ಶ್ರೀಮಹಾಗಣಪತಿ ದೇವಾಲಯದಲ್ಲಿ ಸೋಮವಾರ ಬೆಳಗ್ಗಿನಿಂದಲೇ ಅಭಿಷೇಕ, ಅಲಂಕಾರ, ಅರ್ಚನೆ, ಹೋಮ ಹವನಾದಿ ವಿಶೇಷ ಪೂಜೆಗಳು ನಡೆಯಲಿವೆ. ಭಕ್ತರು ಸಾವಿರಾರು ಈಡುಗಾಯಿ ಸೇವೆಯನ್ನು ಮಹಾಗಣಪತಿಗೆ ಅರ್ಪಿಸಲಿದ್ದಾರೆ.

ಉಳಿದಂತೆ ನಗರದ ಹೊಸ ಬಡಾವಣೆಯ ಪ್ರಸನ್ನ ಗಣಪತಿ ದೇವಾಲಯ, ದೇಚೂರು ಶ್ರೀವಿದ್ಯಾಗಣಪತಿ, ಕನ್ನಂಡಬಾಣೆಯ ದೃಷ್ಟಿ ಗಣಪತಿ, ಕಾಲೇಜು ರಸ್ತೆಯ ವಿಜಯವಿನಾಯಕ ಸೇರಿದಂತೆ ಎಲ್ಲಾ ದೇವಾಲಯಗಳಲ್ಲಿ ಗಣೇಶನ ಆರಾಧನೆ ನಡೆಯಲಿದೆ.ನಗರದಲ್ಲಿ 25 ಕ್ಕೂ ಹೆಚ್ಚಿನ ಗಣೇಶೋತ್ಸವ ಸಮಿತಿಗಳು ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಿವೆ. ಪ್ರತಿಷ್ಠಾಪನೆ ಮತ್ತು ವಿಸರ್ಜನೆಯ ಸಂದರ್ಭ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಈಗಾಗಲೇ ನಗರ ಠಾಣಾ ಪೊಲೀಸರು ಸೂಕ್ತ ಸಲಹೆ, ಸೂಚನೆ ನೀಡಿದ್ದಾರೆ.

ಗಣೇಶೋತ್ಸವವನ್ನು ಪ್ರತಿವರ್ಷ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದ ವಿರಾಜಪೇಟೆಯಲ್ಲಿ ಈ ಬಾರಿ ಮಹಾಮಳೆಯಿಂದ ಸಾವು, ನೋವುಗಳು ಸಂಭವಿಸಿರುವುದರಿಂದ ಸರಳ ಆಚರಣೆಗೆ ಸಮಿತಿಗಳು ಸಿದ್ಧತೆ ಮಾಡಿಕೊಂಡಿವೆ. ಸೋಮವಾರಪೇಟೆಯಲ್ಲಿ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಿಸುವುದರೊಂದಿಗೆ ಗಣೇಶೋತ್ಸವಕ್ಕೆ ಚಾಲನೆ ದೊರೆಯಲಿದ್ದು, ಸಾಂಪ್ರದಾಯಿಕ ಆಚರಣೆಗೆ ಒತ್ತು ನೀಡಲಾಗುತ್ತಿದೆ.

ಕುಶಾಲನಗರ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀಗಣಪತಿ ದೇವಾಲಯದಲ್ಲೂ ಗೌರಿ, ಗಣೇಶೋತ್ಸವ ವಿಶೇಷ ಪೂಜೆಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಲಿದೆ. ಈ ಬಾರಿ ಪರಿಸರ ಸ್ನೇಹಿ ಗಣಪನ ಮೂರ್ತಿಗಳಿಗೆ ಆದ್ಯತೆ ನೀಡಿರುವುದು ವಿಶೇಷ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

4 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

8 hours ago

ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…

10 hours ago

ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…

10 hours ago

ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…

10 hours ago

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…

12 hours ago