ಸುಬ್ರಹ್ಮಣ್ಯ: ಮಳೆ ಹಲವು ಕಡೆ ಸಂಕಷ್ಟ ತಂದಿತು. ಈ ಸಂದರ್ಭ ಆಡಳಿತದ ವತಿಯಿಂದ ಗಂಜಿ ಕೇಂದ್ರ ತೆರೆಯಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಿಂದ ಮಳೆ ಪೀಡಿತ ಕಲ್ಮಕಾರು ಗಂಜಿ ಕೇಂದ್ರಕ್ಕೆ ಶ್ರೀ ದೇವರ ಅನ್ನ ಪ್ರಸಾದ ಹಾಗೂ ಚಾಪೆ,ಹೊದಿಕೆಗಳನ್ನು ವಿತರಿಸಲಾಗಿದೆ. ದೇವಸ್ಥಾನದ ಆಡಳಿತ ತಕ್ಷಣ ಸ್ಪಂದನೆ ನೀಡುತ್ತಿದೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹಾಗೂ ಸದಸ್ಯರು ಗಮನಿಸಿ ಸೂಕ್ತ ನಿರ್ಧಾರ ಕೈಗೊಂಡು ಜನಮೆಚ್ಚುಗೆಗೆ ಪಾತ್ರರಾದರು.
ಸಾಮಾಜಿಕ ಮುಂದಾಳು ಗುರುಪ್ರಸಾದ್ ಪಂಜ, ಪ್ರಶಾಂತ್ ಭಟ್ ಮಾಣಿಲ ಸೇರಿದಂತೆ ಹಲವರು ನಿರಂತರ ಮಳೆ ಸಂಕಷ್ಟಕ್ಕೆ ಒಳಗಾದವರಿಗೆ ಸಹಾಯ ಮಾಡುತ್ತಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




