MIRROR FOCUS

ಮಳೆ ಬಂದರೆ ಮಂಗಳೂರು-ಬೆಂಗಳೂರು ರೈಲಿಗೂ ತಪ್ಪದ ಸಂಕಷ್ಟ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಲೆನಾಡು, ಪಶ್ಚಿಮಘಟ್ಟದಲ್ಲಿ ನಿರಂತರ ಮಳೆ ಸುರಿದರೆ ರೈಲು ಸಂಚಾರಕ್ಕೆ ಸಂಕಷ್ಟವಾಗುತ್ತದೆ. ಗುಡ್ಡ ಕುಸಿತ, ಬಂಡೆ ಕಲ್ಲು ಉರುಳಿ ಹಳಿಯ ಮೇಲೆ ಬೀಳುವ ಕಾರಣ ರೈಲು ಸಂಚಾರಕ್ಕೆ ಅಡ್ಡಿಯಾಗುತ್ತದೆ. ಇದೀಗ ಮಂಗಳೂರು-ಬೆಂಗಳೂರು ರೈಲು ಸಂಚಾರವೂ ಅದೇ ಹಾದಿಯಲ್ಲಿದೆ. ಈಚೆಗೆ ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಇದೀಗ ಬಂಡೆ ಕಲ್ಲುಗಳ ತೆರವು ಕಾರ್ಯ ನಡೆಯುತ್ತಿದೆ.

Advertisement
Advertisement

 

ಘಟ್ಟ ಪ್ರದೇಶದಲ್ಲಿ ಆಗಾಗ ಭಾರೀ ಮಳೆಯಾಗುತ್ತದೆ. ಕೆಲವೊಮ್ಮೆ ಕಡಿಮೆ ಎನಿಸಿದರೂ ಮಣ್ಣು ಸಡಿಲಗೊಂಡು ಗೂಡ್ಸ್ ರೈಲು ಹಾಗೂ ಪ್ರಯಾಣಿಕ ರೈಲು ಸಾಗುವ ಮಂಗಳೂರು-ಬೆಂಗಳೂರು ರೈಲು ಹಳಿಯಲ್ಲಿ  ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ವರೆಗಿನ ರೈಲು ಮಾರ್ಗದ ಮೇಲೆ ಮಣ್ಣು ಕುಸಿತವಾಗುತ್ತದೆ. ಹೀಗಾಗಿ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿದೆ.  ಸುರಿಯವ ಮಳೆಯ ಕಾರಣದಿಂದ ಬಂಡೆ ಕಲ್ಲುಗಳು ಕೂಡಾ ಜಾರಿ ಹಳಿಯ ಮೇಲೆ ಬೀಳುತ್ತವೆ. ಈಗ ಅಂತಹ ಕಲ್ಲುಗಳ ತೆರವು ಕಾರ್ಯ ನಡೆಯುತ್ತಿದೆ. ಬುಧವಾರ ಸಂಜೆ ಪೂರ್ಣಗೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

ಸುಬ್ರಹ್ಮಣ್ಯ ರಸ್ತೆ-ಸಿರಿಬಾಗಿಲು ನಡುವಣ ರೈಲು ಹಳಿಯ ಮೇಲೆ ಉರುಳಲು ಸಿದ್ಧವಾಗಿದ್ದ ಬಂಡೆಯನ್ನು ತೆರವುಗೊಳಿಸುವ ಕಾರ್ಯ ಶನಿವಾರ ಆರಂಭವಾಗಿತ್ತು. ಸ್ಫೋಟಕಗಳನ್ನು ಇರಿಸಿ ಬಂಡೆಯನ್ನು ಸಿಡಿಸುವ ಕಾಮಗಾರಿ ನಡೆಸುವ ಕಾರಣ ಗುಡ್ಡದಲ್ಲಿ ಕಂಪನ ಉಂಟಾಗಿ ಕಲ್ಲಿನ ಪರಿಸರದ ಮಣ್ಣು ಕೂಡಾ ಹಳಿಯ ಮೇಲೆ ಉರುಳಿ ಬಿದ್ದಿತ್ತು. ಮಳೆಯ ಕಾರಣದಿಂದಾಗಿ ಸಡಿಲಗೊಂಡ ಗುಡ್ಡೆಯ ಮಣ್ಣು ಮತ್ತೆ ಮತ್ತೆ ಕುಸಿಯುತ್ತಿರುವುದು ಕಾಮಗಾರಿಗೆ ಅಡ್ಡಿಯಾಯಿತು. ಆದರೂ 60ಕ್ಕೂ ಹೆಚ್ಚು ಕಾರ್ಮಿಕರು ಮತ್ತು ತಂತ್ರಜ್ಞರು ಜೆಸಿಬಿ, ಹಿಟಾಚಿಗಳ ಮೂಲಕ ತೆರವು ಕಾರ್ಯವನ್ನು ನಿರಂತರವಾಗಿ ನಡೆಸಲಾಗುತ್ತಿದೆ.

ಎರಡು ವಾರಗಳ ಹಿಂದೆ ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ತೆರಳಿದ್ದರು. ಬಳಿಕ ಬಂಡೆ ಕಲ್ಲುಗಳನ್ನು  ತೆರವು ಮಾಡುವ ಬಗ್ಗೆ ಚಿಂತನೆ ನಡೆಸಿದ್ದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

2 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

20 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago