Advertisement
MIRROR FOCUS

ಮಳೆ ಬಂದರೆ ಮಂಗಳೂರು-ಬೆಂಗಳೂರು ರೈಲಿಗೂ ತಪ್ಪದ ಸಂಕಷ್ಟ

Share

ಮಲೆನಾಡು, ಪಶ್ಚಿಮಘಟ್ಟದಲ್ಲಿ ನಿರಂತರ ಮಳೆ ಸುರಿದರೆ ರೈಲು ಸಂಚಾರಕ್ಕೆ ಸಂಕಷ್ಟವಾಗುತ್ತದೆ. ಗುಡ್ಡ ಕುಸಿತ, ಬಂಡೆ ಕಲ್ಲು ಉರುಳಿ ಹಳಿಯ ಮೇಲೆ ಬೀಳುವ ಕಾರಣ ರೈಲು ಸಂಚಾರಕ್ಕೆ ಅಡ್ಡಿಯಾಗುತ್ತದೆ. ಇದೀಗ ಮಂಗಳೂರು-ಬೆಂಗಳೂರು ರೈಲು ಸಂಚಾರವೂ ಅದೇ ಹಾದಿಯಲ್ಲಿದೆ. ಈಚೆಗೆ ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಇದೀಗ ಬಂಡೆ ಕಲ್ಲುಗಳ ತೆರವು ಕಾರ್ಯ ನಡೆಯುತ್ತಿದೆ.


 

ಘಟ್ಟ ಪ್ರದೇಶದಲ್ಲಿ ಆಗಾಗ ಭಾರೀ ಮಳೆಯಾಗುತ್ತದೆ. ಕೆಲವೊಮ್ಮೆ ಕಡಿಮೆ ಎನಿಸಿದರೂ ಮಣ್ಣು ಸಡಿಲಗೊಂಡು ಗೂಡ್ಸ್ ರೈಲು ಹಾಗೂ ಪ್ರಯಾಣಿಕ ರೈಲು ಸಾಗುವ ಮಂಗಳೂರು-ಬೆಂಗಳೂರು ರೈಲು ಹಳಿಯಲ್ಲಿ  ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ವರೆಗಿನ ರೈಲು ಮಾರ್ಗದ ಮೇಲೆ ಮಣ್ಣು ಕುಸಿತವಾಗುತ್ತದೆ. ಹೀಗಾಗಿ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿದೆ.  ಸುರಿಯವ ಮಳೆಯ ಕಾರಣದಿಂದ ಬಂಡೆ ಕಲ್ಲುಗಳು ಕೂಡಾ ಜಾರಿ ಹಳಿಯ ಮೇಲೆ ಬೀಳುತ್ತವೆ. ಈಗ ಅಂತಹ ಕಲ್ಲುಗಳ ತೆರವು ಕಾರ್ಯ ನಡೆಯುತ್ತಿದೆ. ಬುಧವಾರ ಸಂಜೆ ಪೂರ್ಣಗೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

ಸುಬ್ರಹ್ಮಣ್ಯ ರಸ್ತೆ-ಸಿರಿಬಾಗಿಲು ನಡುವಣ ರೈಲು ಹಳಿಯ ಮೇಲೆ ಉರುಳಲು ಸಿದ್ಧವಾಗಿದ್ದ ಬಂಡೆಯನ್ನು ತೆರವುಗೊಳಿಸುವ ಕಾರ್ಯ ಶನಿವಾರ ಆರಂಭವಾಗಿತ್ತು. ಸ್ಫೋಟಕಗಳನ್ನು ಇರಿಸಿ ಬಂಡೆಯನ್ನು ಸಿಡಿಸುವ ಕಾಮಗಾರಿ ನಡೆಸುವ ಕಾರಣ ಗುಡ್ಡದಲ್ಲಿ ಕಂಪನ ಉಂಟಾಗಿ ಕಲ್ಲಿನ ಪರಿಸರದ ಮಣ್ಣು ಕೂಡಾ ಹಳಿಯ ಮೇಲೆ ಉರುಳಿ ಬಿದ್ದಿತ್ತು. ಮಳೆಯ ಕಾರಣದಿಂದಾಗಿ ಸಡಿಲಗೊಂಡ ಗುಡ್ಡೆಯ ಮಣ್ಣು ಮತ್ತೆ ಮತ್ತೆ ಕುಸಿಯುತ್ತಿರುವುದು ಕಾಮಗಾರಿಗೆ ಅಡ್ಡಿಯಾಯಿತು. ಆದರೂ 60ಕ್ಕೂ ಹೆಚ್ಚು ಕಾರ್ಮಿಕರು ಮತ್ತು ತಂತ್ರಜ್ಞರು ಜೆಸಿಬಿ, ಹಿಟಾಚಿಗಳ ಮೂಲಕ ತೆರವು ಕಾರ್ಯವನ್ನು ನಿರಂತರವಾಗಿ ನಡೆಸಲಾಗುತ್ತಿದೆ.

ಎರಡು ವಾರಗಳ ಹಿಂದೆ ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ತೆರಳಿದ್ದರು. ಬಳಿಕ ಬಂಡೆ ಕಲ್ಲುಗಳನ್ನು  ತೆರವು ಮಾಡುವ ಬಗ್ಗೆ ಚಿಂತನೆ ನಡೆಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago