Advertisement
ಸುದ್ದಿಗಳು

ಮಳೆ ಬಂದಾಗ ಮರವನ್ನು ಮರೆತರೇ…?

Share

ಸುಳ್ಯ: ಮಳೆ ಇಲ್ಲದಿರುವಾಗ ಗಿಡ ನೆಡಬೇಕು, ಮರ ಉಳಿಸಬೇಕು ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತದೆ. ಆದರೆ ನಿರಂತರ ಎರಡು ದಿನ ಮಳೆ ಬಂದಾಗ ಜನ ಮರವನ್ನು ಮರೆತರೇ… ?ಹೀಗೊಂದು ಜಿಜ್ಞಾಸೆ ಹುಟ್ಟಿಕೊಂಡದ್ದು ಬುಧವಾರ ಸುಳ್ಯದಲ್ಲಿ ನಡೆದ ಪ್ರಕೃತಿ ವಿಕೋಪ ತಡೆ ಕಾರ್ಯಸೂಚಿ ಸಭೆಯಲ್ಲಿ.

ಸಭೆಯಲ್ಲಿ ಮಾತನಾಡಿದ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ‘ಜೂನ್ ತಿಂಗಳ ಕೊನೆಯವರೆಗೆ ಮಳೆಯೇ ಬಾರದಿದ್ದಾಗ ಗಿಡಗಳನ್ನು ನೆಡಬೇಕು, ಮರಗಳನ್ನು ಉಳಿಸಬೇಕು. ನೆಡಲು ಗಿಡ ಕೊಡಿ ಸಾರ್.. ಎಂದು ಹಲವು ಮಂದಿ ಕೇಳುತ್ತಿದ್ದರು. ಆದರೆ ಎರಡು ದಿನ ಮಳೆ ಸುರಿದಾಗ ಮರಗಳು ಅಪಾಯಕಾರಿಯಾಗಿದೆ, ಮರ ಕಡಿಯಿರಿ ಸಾರ್ ಎಂದು ಕರೆ ಮಾಡುತ್ತಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದಾಗ ಗಂಭೀರ ಸಭೆಯಲ್ಲಿ ಕೆಲ ಕಾಲ ನಗುವಿನ ಕಾರಂಜಿ ಚಿಮ್ಮಿತು.

ಮಳೆ ಬಂದ ಕೂಡಲೇ ಮರಗಳನ್ನು, ಗಿಡಗಳನ್ನು ಮರೆಯುವುದು ಸರಿಯಲ್ಲ‌. ಗಿಡ ಬೆಳೆಸುವ, ಮರ ಉಳಿಸುವ ಜಾಗೃತಿ ಸದಾ ಇರಲಿ, ತೀರಾ ಅಪಾಯಕಾರಿ ಆಗಿದ್ದಲ್ಲಿ ಮಾತ್ರ ಅಂತಹಾ ಮರಗಳನ್ನು ಮಾತ್ರ ತೆರವು ಮಾಡಲು ಬೇಡಿಕೆ ಸಲ್ಲಿಸಿ. ಮಳೆಗಾಲದ ನೆಪದಲ್ಲಿ ಸದಾ ನಮ್ನನ್ನು ಸಲಹುವ ಮರಗಳನ್ನು ಕಡಿಯದಂತೆ ಎಚ್ಚರ ವಹಿಸಿ, ಗಿಡಗಳನ್ನು ನೆಡಲು ಆಸಕ್ತಿ ಮುಂದುವರಿಸಿ ಎಂದು ಅವರು ವಿನಂತಿಸಿದಾಗ ನಗು ಕರತಾಡನವಾಗಿ ಮಾರ್ಪಾಡಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago