ಸುಳ್ಯ: ಮಳೆ ಇಲ್ಲದಿರುವಾಗ ಗಿಡ ನೆಡಬೇಕು, ಮರ ಉಳಿಸಬೇಕು ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತದೆ. ಆದರೆ ನಿರಂತರ ಎರಡು ದಿನ ಮಳೆ ಬಂದಾಗ ಜನ ಮರವನ್ನು ಮರೆತರೇ… ?ಹೀಗೊಂದು ಜಿಜ್ಞಾಸೆ ಹುಟ್ಟಿಕೊಂಡದ್ದು ಬುಧವಾರ ಸುಳ್ಯದಲ್ಲಿ ನಡೆದ ಪ್ರಕೃತಿ ವಿಕೋಪ ತಡೆ ಕಾರ್ಯಸೂಚಿ ಸಭೆಯಲ್ಲಿ.
ಸಭೆಯಲ್ಲಿ ಮಾತನಾಡಿದ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ‘ಜೂನ್ ತಿಂಗಳ ಕೊನೆಯವರೆಗೆ ಮಳೆಯೇ ಬಾರದಿದ್ದಾಗ ಗಿಡಗಳನ್ನು ನೆಡಬೇಕು, ಮರಗಳನ್ನು ಉಳಿಸಬೇಕು. ನೆಡಲು ಗಿಡ ಕೊಡಿ ಸಾರ್.. ಎಂದು ಹಲವು ಮಂದಿ ಕೇಳುತ್ತಿದ್ದರು. ಆದರೆ ಎರಡು ದಿನ ಮಳೆ ಸುರಿದಾಗ ಮರಗಳು ಅಪಾಯಕಾರಿಯಾಗಿದೆ, ಮರ ಕಡಿಯಿರಿ ಸಾರ್ ಎಂದು ಕರೆ ಮಾಡುತ್ತಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದಾಗ ಗಂಭೀರ ಸಭೆಯಲ್ಲಿ ಕೆಲ ಕಾಲ ನಗುವಿನ ಕಾರಂಜಿ ಚಿಮ್ಮಿತು.
ಮಳೆ ಬಂದ ಕೂಡಲೇ ಮರಗಳನ್ನು, ಗಿಡಗಳನ್ನು ಮರೆಯುವುದು ಸರಿಯಲ್ಲ. ಗಿಡ ಬೆಳೆಸುವ, ಮರ ಉಳಿಸುವ ಜಾಗೃತಿ ಸದಾ ಇರಲಿ, ತೀರಾ ಅಪಾಯಕಾರಿ ಆಗಿದ್ದಲ್ಲಿ ಮಾತ್ರ ಅಂತಹಾ ಮರಗಳನ್ನು ಮಾತ್ರ ತೆರವು ಮಾಡಲು ಬೇಡಿಕೆ ಸಲ್ಲಿಸಿ. ಮಳೆಗಾಲದ ನೆಪದಲ್ಲಿ ಸದಾ ನಮ್ನನ್ನು ಸಲಹುವ ಮರಗಳನ್ನು ಕಡಿಯದಂತೆ ಎಚ್ಚರ ವಹಿಸಿ, ಗಿಡಗಳನ್ನು ನೆಡಲು ಆಸಕ್ತಿ ಮುಂದುವರಿಸಿ ಎಂದು ಅವರು ವಿನಂತಿಸಿದಾಗ ನಗು ಕರತಾಡನವಾಗಿ ಮಾರ್ಪಾಡಾಯಿತು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…