ಸುಳ್ಯ: ಮಳೆ ಇಲ್ಲದಿರುವಾಗ ಗಿಡ ನೆಡಬೇಕು, ಮರ ಉಳಿಸಬೇಕು ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತದೆ. ಆದರೆ ನಿರಂತರ ಎರಡು ದಿನ ಮಳೆ ಬಂದಾಗ ಜನ ಮರವನ್ನು ಮರೆತರೇ… ?ಹೀಗೊಂದು ಜಿಜ್ಞಾಸೆ ಹುಟ್ಟಿಕೊಂಡದ್ದು ಬುಧವಾರ ಸುಳ್ಯದಲ್ಲಿ ನಡೆದ ಪ್ರಕೃತಿ ವಿಕೋಪ ತಡೆ ಕಾರ್ಯಸೂಚಿ ಸಭೆಯಲ್ಲಿ.
ಸಭೆಯಲ್ಲಿ ಮಾತನಾಡಿದ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ‘ಜೂನ್ ತಿಂಗಳ ಕೊನೆಯವರೆಗೆ ಮಳೆಯೇ ಬಾರದಿದ್ದಾಗ ಗಿಡಗಳನ್ನು ನೆಡಬೇಕು, ಮರಗಳನ್ನು ಉಳಿಸಬೇಕು. ನೆಡಲು ಗಿಡ ಕೊಡಿ ಸಾರ್.. ಎಂದು ಹಲವು ಮಂದಿ ಕೇಳುತ್ತಿದ್ದರು. ಆದರೆ ಎರಡು ದಿನ ಮಳೆ ಸುರಿದಾಗ ಮರಗಳು ಅಪಾಯಕಾರಿಯಾಗಿದೆ, ಮರ ಕಡಿಯಿರಿ ಸಾರ್ ಎಂದು ಕರೆ ಮಾಡುತ್ತಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದಾಗ ಗಂಭೀರ ಸಭೆಯಲ್ಲಿ ಕೆಲ ಕಾಲ ನಗುವಿನ ಕಾರಂಜಿ ಚಿಮ್ಮಿತು.
ಮಳೆ ಬಂದ ಕೂಡಲೇ ಮರಗಳನ್ನು, ಗಿಡಗಳನ್ನು ಮರೆಯುವುದು ಸರಿಯಲ್ಲ. ಗಿಡ ಬೆಳೆಸುವ, ಮರ ಉಳಿಸುವ ಜಾಗೃತಿ ಸದಾ ಇರಲಿ, ತೀರಾ ಅಪಾಯಕಾರಿ ಆಗಿದ್ದಲ್ಲಿ ಮಾತ್ರ ಅಂತಹಾ ಮರಗಳನ್ನು ಮಾತ್ರ ತೆರವು ಮಾಡಲು ಬೇಡಿಕೆ ಸಲ್ಲಿಸಿ. ಮಳೆಗಾಲದ ನೆಪದಲ್ಲಿ ಸದಾ ನಮ್ನನ್ನು ಸಲಹುವ ಮರಗಳನ್ನು ಕಡಿಯದಂತೆ ಎಚ್ಚರ ವಹಿಸಿ, ಗಿಡಗಳನ್ನು ನೆಡಲು ಆಸಕ್ತಿ ಮುಂದುವರಿಸಿ ಎಂದು ಅವರು ವಿನಂತಿಸಿದಾಗ ನಗು ಕರತಾಡನವಾಗಿ ಮಾರ್ಪಾಡಾಯಿತು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…