ಸುಳ್ಯ: ಮಳೆ ಇಲ್ಲದಿರುವಾಗ ಗಿಡ ನೆಡಬೇಕು, ಮರ ಉಳಿಸಬೇಕು ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತದೆ. ಆದರೆ ನಿರಂತರ ಎರಡು ದಿನ ಮಳೆ ಬಂದಾಗ ಜನ ಮರವನ್ನು ಮರೆತರೇ… ?ಹೀಗೊಂದು ಜಿಜ್ಞಾಸೆ ಹುಟ್ಟಿಕೊಂಡದ್ದು ಬುಧವಾರ ಸುಳ್ಯದಲ್ಲಿ ನಡೆದ ಪ್ರಕೃತಿ ವಿಕೋಪ ತಡೆ ಕಾರ್ಯಸೂಚಿ ಸಭೆಯಲ್ಲಿ.
ಸಭೆಯಲ್ಲಿ ಮಾತನಾಡಿದ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ‘ಜೂನ್ ತಿಂಗಳ ಕೊನೆಯವರೆಗೆ ಮಳೆಯೇ ಬಾರದಿದ್ದಾಗ ಗಿಡಗಳನ್ನು ನೆಡಬೇಕು, ಮರಗಳನ್ನು ಉಳಿಸಬೇಕು. ನೆಡಲು ಗಿಡ ಕೊಡಿ ಸಾರ್.. ಎಂದು ಹಲವು ಮಂದಿ ಕೇಳುತ್ತಿದ್ದರು. ಆದರೆ ಎರಡು ದಿನ ಮಳೆ ಸುರಿದಾಗ ಮರಗಳು ಅಪಾಯಕಾರಿಯಾಗಿದೆ, ಮರ ಕಡಿಯಿರಿ ಸಾರ್ ಎಂದು ಕರೆ ಮಾಡುತ್ತಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದಾಗ ಗಂಭೀರ ಸಭೆಯಲ್ಲಿ ಕೆಲ ಕಾಲ ನಗುವಿನ ಕಾರಂಜಿ ಚಿಮ್ಮಿತು.
ಮಳೆ ಬಂದ ಕೂಡಲೇ ಮರಗಳನ್ನು, ಗಿಡಗಳನ್ನು ಮರೆಯುವುದು ಸರಿಯಲ್ಲ. ಗಿಡ ಬೆಳೆಸುವ, ಮರ ಉಳಿಸುವ ಜಾಗೃತಿ ಸದಾ ಇರಲಿ, ತೀರಾ ಅಪಾಯಕಾರಿ ಆಗಿದ್ದಲ್ಲಿ ಮಾತ್ರ ಅಂತಹಾ ಮರಗಳನ್ನು ಮಾತ್ರ ತೆರವು ಮಾಡಲು ಬೇಡಿಕೆ ಸಲ್ಲಿಸಿ. ಮಳೆಗಾಲದ ನೆಪದಲ್ಲಿ ಸದಾ ನಮ್ನನ್ನು ಸಲಹುವ ಮರಗಳನ್ನು ಕಡಿಯದಂತೆ ಎಚ್ಚರ ವಹಿಸಿ, ಗಿಡಗಳನ್ನು ನೆಡಲು ಆಸಕ್ತಿ ಮುಂದುವರಿಸಿ ಎಂದು ಅವರು ವಿನಂತಿಸಿದಾಗ ನಗು ಕರತಾಡನವಾಗಿ ಮಾರ್ಪಾಡಾಯಿತು.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…