ಬೆಳ್ಳಾರೆ: ಮಳೆಯೇ ಬಾ…. ಬಾ ಮಳೆಯೇ ಬಾ…. ಈ ಪ್ರಾರ್ಥನೆ ಒಂದು ಕಡೆಯಾದರೆ , ನಾಡಿನಲ್ಲಿ ಸಮೃದ್ಧ ಮಳೆಯಾಗಲಿ, ಕೃಷಿ ಉಳಿಯಲಿ, ಕುಡಿಯುವ ನೀರು ಬರಲಿ…!. ಈಗ ಎಲ್ಲೆಡೆಯೂ ಇದೇ ಪ್ರಾರ್ಥನೆ.
ಹೀಗಾಗಿ ಸಾಮಾಜಿಕ ಹಿತದೃಷ್ಠಿಯಿಂದ, ನಾಡಿನ ನೆಮ್ಮದಿಗಾಗಿ ಊರ ಭಕ್ತರು ಹಾಗು ಪೆರುವಾಜೆಯ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಜಲದುರ್ಗಾ ದೇವಿಗೆ 108 ಸೀಯಾಳ ಅಭಿಷೇಕ ನಡೆಯಿತು.ಪೂಜಾ ನೇತೃತ್ವವನ್ನು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ವಹಸಿದ್ದರು.
ಪೂಜಾ ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಭೋಜರಾಜ ಶೆಟ್ಟಿ, ಕರುಣಾಕರ ಗೌಡ ಪೆರುವಾಜೆಗುತ್ತು, ಸಚಿನ್ರಾಜ್ ಶೆಟ್ಟಿ, ಶಶಿಕಾಂತ್ ರಾವ್, ಕಸ್ತೂರಿನಾಥ ಶೆಟ್ಟಿ ಪೆರುವಾಜೆಗುತ್ತು, ಮೋನಪ್ಪ ಪೂಜಾರಿ, ದೇವರಾಜ್ ಆಳ್ವ, ಮಹಾಬಲ ರೈ, ವಸಂತ ಆಚಾರ್ಯ, ಸುಂದರ ಗೌಡ ಕೊಡಿಯಾಲ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…