ಬೆಳ್ಳಾರೆ: ಮಳೆಯೇ ಬಾ…. ಬಾ ಮಳೆಯೇ ಬಾ…. ಈ ಪ್ರಾರ್ಥನೆ ಒಂದು ಕಡೆಯಾದರೆ , ನಾಡಿನಲ್ಲಿ ಸಮೃದ್ಧ ಮಳೆಯಾಗಲಿ, ಕೃಷಿ ಉಳಿಯಲಿ, ಕುಡಿಯುವ ನೀರು ಬರಲಿ…!. ಈಗ ಎಲ್ಲೆಡೆಯೂ ಇದೇ ಪ್ರಾರ್ಥನೆ.
ಹೀಗಾಗಿ ಸಾಮಾಜಿಕ ಹಿತದೃಷ್ಠಿಯಿಂದ, ನಾಡಿನ ನೆಮ್ಮದಿಗಾಗಿ ಊರ ಭಕ್ತರು ಹಾಗು ಪೆರುವಾಜೆಯ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಜಲದುರ್ಗಾ ದೇವಿಗೆ 108 ಸೀಯಾಳ ಅಭಿಷೇಕ ನಡೆಯಿತು.ಪೂಜಾ ನೇತೃತ್ವವನ್ನು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ವಹಸಿದ್ದರು.
ಪೂಜಾ ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಭೋಜರಾಜ ಶೆಟ್ಟಿ, ಕರುಣಾಕರ ಗೌಡ ಪೆರುವಾಜೆಗುತ್ತು, ಸಚಿನ್ರಾಜ್ ಶೆಟ್ಟಿ, ಶಶಿಕಾಂತ್ ರಾವ್, ಕಸ್ತೂರಿನಾಥ ಶೆಟ್ಟಿ ಪೆರುವಾಜೆಗುತ್ತು, ಮೋನಪ್ಪ ಪೂಜಾರಿ, ದೇವರಾಜ್ ಆಳ್ವ, ಮಹಾಬಲ ರೈ, ವಸಂತ ಆಚಾರ್ಯ, ಸುಂದರ ಗೌಡ ಕೊಡಿಯಾಲ ಉಪಸ್ಥಿತರಿದ್ದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…