Advertisement
ಅಂಕಣ

ಮಳೆ ಬರುವ ಕಾಲಕ್ಕೆ… ಒಳಗ್ಯಾಕ ಕುಂತೇವು…! ಇಳೆಯೊಡನೆ ಜಳಕವಾಡೋಣು…

Share

ಮಳೆ ಬರುವ ಕಾಲಕ್ಕೆ
ಒಳಗ್ಯಾಕ ಕುಂತೇವು
ಇಳೆಯೊಡನೆ ಜಳಕವಾಡೋಣು
ನಾವೂನು, ಮೋಡಗಳ ಆಟ ನೋಡೋಣು
….. ದ ರಾ ಬೇಂದ್ರೆ

Advertisement
Advertisement

#ಪಿ.ಜಿ.ಎಸ್.ಎನ್.ಪ್ರಸಾದ್ ಬಾಳಿಲ

Advertisement

ಮಳೆ ಮಾಪನ……

ಇದು ಆಸಕ್ತಿ ಇರುವ ಯಾರೇ ಆದರೂ ರೂಢಿಸಿಕೊಳ್ಳಬಹುದಾದ ಒಂದು ಸರಳ ಹವ್ಯಾಸ. ನಿರ್ದಿಷ್ಟ ಪ್ರದೇಶದಲ್ಲಿ ಬೀಳುವ ಮಳೆ ಹನಿಗಳ ಪ್ರಮಾಣವನ್ನು ಒಂದು ಸರಳ ಸಾಧನದ ಮೂಲಕ ಅಳೆದು ನಾವೇ ತಯಾರಿಸಿಕೊಂಡ ಕೋಷ್ಟಕದಲ್ಲಿ ಬರೆದಿಡುವುದು.ಇದು ದಿನಗಳು ಕಳೆದಂತೆ, ವರ್ಷಗಳು ಉರುಳಿದಂತೆ ನಮ್ಮ ಅರಿವಿಗೆ ಬಾರದೇ ಅಪೂರ್ವ ಅಂಕಿ ಅಂಶಗಳ ಆಗರವಾಗುವುದರಲ್ಲಿ ಯಾವುದೇ ಸಂಶಯವಿಲ್ಲ.

Advertisement

ಇತಿಹಾಸ : ಕ್ರಿ.ಪೂ.400 ರಷ್ಟು ಹಿಂದೆಯೇ ಮಳೆ ಮಾಪನ ಮಾಡುತ್ತಿದ್ದ ಬಗ್ಗೆ ” ಕೌಟಿಲ್ಯನ ಅರ್ಥಶಾಸ್ತ್ರ” ದಲ್ಲಿ ಉಲ್ಲೇಖವಿದೆ.
ಮಲೆನಾಡಿನ ಕಾಫಿ ತೋಟಗಳಲ್ಲಿ 19 ನೆ ಶತಮಾನದ ಆರಂಭದಲ್ಲಿ ಮಳೆ ಅಳೆದು ಬರೆದಿಡುವ ಹವ್ಯಾಸ ಆರಂಭಿಸಿದವರು ಬ್ರಿಟಿಷರು. ಮಳೆ ರಿಜಿಸ್ಟರ್ ( ಕೋಷ್ಟಕ ) ತಯಾರಿಸಿ ಅದರಲ್ಲಿ ಹವಾಮಾನದ ವಿವರದೊಂದಿಗೆ ಮಳೆ ಅಳತೆಯನ್ನು ಬರೆದಿಡುತ್ತಿದ್ದರು. ಕಾಫಿ ನಾಡಿನ ರೈತರಲ್ಲಿ ನೂರು ವರ್ಷಗಳಷ್ಟು ಹಳೆಯದಾದ ಮಳೆಯ ರಿಜಿಸ್ಟರ್ ಗಳಿವೆ. ತಜ್ಞರ ಪ್ರಕಾರ ಇವು ಅಮೂಲ್ಯ ದಾಖಲೆಗಳು ಮಳೆ ಮಾಪಕ
ಕೌಟಿಲ್ಯನ ಅರ್ಥಶಾಸ್ತ್ರದಲ್ಲಿನ ಉಲ್ಲೇಖ ಪ್ರಕಾರ ಅಂದು ಮಳೆಯನ್ನು ದ್ರೋಣದ ಲೆಕ್ಕದಲ್ಲಿ ಅಳತೆ ಮಾಡುತ್ತಿದ್ದರು. ಈ ಪದ್ಧತಿಯನ್ನು ‘ವರ್ಷಾನನ’ ಅಂತಲೂ, ಉಪಕರಣವನ್ನು ವರ್ಷಮಾನ್ ಅಂತಲೂ ಕರೆಯುತ್ತಿದ್ದರು. ಇಂದು ಕೂಡಾ ಭಾರೀ ಮಳೆಯನ್ನು ಕುಂಭದ್ರೋಣ ಮಳೆ ಅಂತ ಕರೆಯುವುದುಂಟು.

ಒಂದು ನಿರ್ದಿಷ್ಟ ಪ್ರದೇಶದಲ್ಲಿ, ನಿರ್ದಿಷ್ಟ ಕಾಲದಲ್ಲಿ ಬೀಳುವ ಮಳೆ ಹನಿಗಳ ಪ್ರಮಾಣವನ್ನು ಅಳೆಯಲು ಬಳಸುವ ಸಾಧನವೇ ಮಳೆ ಮಾಪಕ. ಸಾಮಾನ್ಯವಾಗಿ 24 ಗಂಟೆಗಳಲ್ಲಿ ಸುರಿದ ಮಳೆಯನ್ನು ದಿನವಹಿ ದಾಖಲಿಸುವುದು ರೂಢಿ. ಮಳೆ ಮಾಪಕಕ್ಕೆ ಮಳೆ ನೀರು ಅಡೆತಡೆ ಇಲ್ಲದೆ ಬೀಳುವಂತಿರಬೇಕು.

Advertisement

ಮಳೆ ಮಾಪಕದ ರೇಖಾ ಚಿತ್ರ:

Advertisement

ಈ ದಿನಗಳಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಮಳೆ ಮಾಪಕಗಳು ಲಭ್ಯವಿವೆ.ಸರಳ ಸಾಧನಗಳಿಂದ ತೊಡಗಿ, ದುಬಾರಿ ಸ್ವಯಂಚಾಲಿತ ಸಾಧನಗಳವರೆಗೆ ಸಿಗುತ್ತದೆ.

Advertisement

 

Advertisement

ನಾನು ಅಳವಡಿಸಿಕೊಂಡ ಸುಲಭದಲ್ಲಿ ಅಳತೆ ಮಾಡಬಹುದಾದ ಉಪಕರಣ  ಮೇಲೆ ಕಾಣಿಸಲಾದ ಸರಳ ಗಾಜಿನ ಜಾಡಿಯಲ್ಲಿನ ಅಳತೆ ಕೂಡಾ ನಿಖರವಾದ ಲೆಕ್ಕಾಚಾರವನ್ನು ತೋರಿಸಬಲ್ಲುದು.

Advertisement

ಎಲ್ಲಿ ಸ್ಥಾಪಿಸಬೇಕು…?: ಮನೆಯ ಛಾವಣಿ, ಮರಗಿಡಗಳ ಕೆಳಗೆ ಅಳತೆಯ ಸಾಧನವನ್ನು ಇಡಬಾರದು. ಆದಷ್ಟು ಬಯಲ ಪ್ರದೇಶದಲ್ಲಿ ಇರಬೇಕು.
ಮಿ.ಮೀ.ಅಥವಾ ಸೆಂಟಿಮೀಟರ್ ಅಳತೆಯ ಜಾಡಿ ಸಿಗದಿದ್ದರೆ,ಚಿತ್ರದಲ್ಲಿ ಕಾಣಿಸಿದಂತೆ ನಾವೇ ಅಳತೆಯನ್ನು ಗುರುತು ಹಾಕಿಕೊಳ್ಳಬಹುದು ಇಲ್ಲವೇ ಫೂಟ್ ರೂಲರ್ ಸಹಾಯದಿಂದಲೂ ಅಳತೆ ಮಾಡಬಹುದು. ಪ್ರತಿದಿನ ಅಳತೆಯನ್ನು ನೋಡಿ ಕೋಷ್ಟಕದಲ್ಲಿ ಬರೆದಿಡುವುದು. ನಿನ್ನೆ ಬೆಳಿಗ್ಗೆ 8 ರಿಂದ ಈ ದಿನ ಬೆಳಗ್ಗೆ 8 ರ ತನಕ ದಾಖಲಾದ ಮಳೆಯನ್ನು ನಿನ್ನೆಯ ಲೆಕ್ಕಕ್ಕೆ ಬರೆದಿಡುವುದು ವಾಡಿಕೆ.

ಮೇಲ್ಕಾಣಿಸಿದ ಸಾಂಪ್ರದಾಯಿಕ ಉಪಕರಣದಲ್ಲಿಯಾದರೆ ದೊಡ್ಡ ಜಾಡಿಯಲ್ಲಿ ಸಂಗ್ರಹವಾದ ಮಳೆ ನೀರನ್ನು ಹತ್ತಿರದಲ್ಲಿ ಕಾಣಿಸಲಾದ ಪಾರದರ್ಶಕ ಜಾಡಿಗೆ ವರ್ಗಾಯಿಸಿ ಅಳೆಯಬೇಕಾಗುತ್ತದೆ. ಹೊಸಬರಿಗೆ ಇದು ಸ್ವಲ್ಪ ಕಷ್ಟದ ಕೆಲಸ ಅಂತ ಅನಿಸಬಹುದು.

Advertisement

2014 ರ ಮೊದಲು ನಾಲ್ಕಾರು ಮಂದಿಯಷ್ಟೇ ತೊಡಗಿಸಿಕೊಂಡಿದ್ದ ವಿಶೇಷ ಖರ್ಚಿಲ್ಲದ ಈ ಹವ್ಯಾಸ ಇಂದು ಜನಪ್ರಿಯಗೊಳ್ಳುತ್ತಿದೆ. ಸುಳ್ಯ ತಾಲೂಕಿನಾದ್ಯಂತ ಈಗ 15 ಮಂದಿ ಕೃಷಿಕರು ಮಳೆ ಅಳತೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅನೇಕ ಮಂದಿ ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ಅನೇಕ ಮಂದಿ ಕೃಷಿಕರು ಈ ಹವ್ಯಾಸವನ್ನು ರೂಢಿಸಿಕೊಂಡರೆ ಕೃಷಿಕರದ್ದೇ ಆದ NETWORK ನ್ನು ಬಲಗೊಳಿಸಬಹುದು ಮಾತ್ರವಲ್ಲ ಕೃಷಿಕಾಯಕದಲ್ಲಿ ಮಳೆಯ ಪಾತ್ರವನ್ನು ನಿಖರವಾಗಿ ಅಂದಾಜಿಸಬಹುದು.

ಇಲ್ಲೊಂದು ಗಾದೆ ಮಾತು ನೆನಪಾಗ್ತಿದೆ..” ಒಂದು ಮಳೆ ಬಂದರೆ ಎತ್ತಿನ ಎರಡೂ ಕೊಂಬುಗಳು ಒದ್ದೆಯಾಗಬೇಕಾದಿಲ್ಲ..” ಯಾಕೆಂದರೆ ಒಂದು ಪ್ರದೇಶದ ಅತ್ಯಂತ ನಿಖರವಾದ ಮಳೆ ಅಳತೆ ಸಿಗಬೇಕಾದರೆ 3.5 ಕಿ.ಮೀ.ಸುತ್ತಳತೆಯಲ್ಲಿ ಒಂದಾದರೂ ಮಳೆ ಮಾಪನ ಬೇಕು..
ಈ ಕ್ಷಣವೇ ಮಳೆಯ ಚಿಟಪಟಕ್ಕೆ ನೀವೂ ಸ್ವರ ಸೇರಿಸಿ ಮಾತನಾಡಲಾರಂಭಿಸಿ.. ನಿಮ್ಮೊಳಗೊಬ್ಬ ಸಂಶೋಧಕ ಜಾಗೃತನಾಗಲೂಬಹುದು.

Advertisement

ಬರಹ: #ಪಿ.ಜಿ.ಎಸ್.ಎನ್.ಪ್ರಸಾದ್ ಬಾಳಿಲ

Advertisement

ಪಿ.ಜಿ.ಎಸ್.ಎನ್.ಪ್ರಸಾದ್ ಬಾಳಿಲ

( ಮಳೆ ಮಾಪನದ ಆಸಕ್ತರಿದ್ದರೆ ಸಂಪರ್ಕಿಸಬಹುದು – ಮಳೆ ಮಾಹಿತಿ-ಮಳೆ ಮಾಪನಕ್ಕೆಂದು ಕೃಷಿಕರ ಗುಂಪು ವಾಟ್ಸಪ್‌ ಹಾಗೂ ಪೇಸ್‌ ಬುಕ್‌ ನಲ್ಲಿದೆ. ಜಿಲ್ಲೆಯ ವಿವಿದೆಡೆಯ ಮಳೆ ಮಾಹಿತಿ ಲಭ್ಯವಿದೆ. ಜಿಲ್ಲೆಯಲ್ಲಿ ಇನ್ನಷ್ಟು ಮಂದಿ ಆಸಕ್ತರು  ಹೆಚ್ಚಾಗಬೇಕಿದೆ. )

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

21 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

1 day ago