ಸುಳ್ಯ: ತಾಲೂಕಿನ ಕೆಲವು ಕಡೆ ಶನಿವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಮಳೆಯಾಗಿದೆ. ಸುಬ್ರಹ್ಮಣ್ಯ ಬಳಿಯ ಕಲ್ಲಾಜೆ, ಗುತ್ತಿಗಾರಿನ ಕೆಲವು ಕಡೆ , ಏನೆಕಲ್ಲು ಸೇರಿದಂತೆ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಹನಿ ಮಳೆಯಾಗಿದೆ. ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಕಂಡುಬಂದಿತ್ತು.
ಹವಾಮಾನ ಮುನ್ಸೂಚನೆ ಪ್ರಕಾರ ಸುಳ್ಯ, ಸುಬ್ರಹ್ಮಣ್ಯ, ಪುತ್ತೂರು, ಗುಂಡ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.
ಬಂಗಾಳ ಕೊಲ್ಲಿಯ ಅಂಡಮಾನ್ ದ್ವೀಪದ ಬಳಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ಇನ್ನೂ ಕೆಲವು ದಿನ ಮಳೆಯಾಗುವ ಮುನ್ಸೂಚನೆ ಇದೆ. ವಾಯುಭಾರ ಮತ್ತಷ್ಟು ಕುಸಿತವಾಗುತ್ತಿದ್ದು ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದ್ದು ಹವಾಮಾನದ ಸ್ಪಷ್ಟ ಚಿತ್ರಣವು ಭಾನುವಾರ ಸಿಗಲಿದೆ. ಚಂಡಮಾರುತ ಉಂಟಾದರೆ ಭಾರತದ ಪಶ್ಚಿಮ ಕರಾವಳಿಯಲ್ಲಿ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಮೇ.10 ಹಾಗೂ 11 ರಂದು ಮಳೆಯ ಸಾಧ್ಯತೆ ಹೆಚ್ಚಿದೆ.
ಆದರೆ ಭೂ ಮಧ್ಯೆ ರೇಖೆ ಗಿಂತ ಕೆಳ ಭಾಗದಲ್ಲಿ ಚಂಡಮಾರುತ ಉಂಟಾದರೆ ಬಂಗಾಳಕೊಲ್ಲಿ ಅಥವಾ ಅರಬ್ಬಿ ಸಮುದ್ರಕ್ಕೆ ಹೆಚ್ಚಿನ ಸಂದರ್ಭ ಚಂಡಮಾರುತ ಪ್ರವೇಶಿಸುವುದಿಲ್ಲ. ಹೀಗಾಗಿ ವಾಯುಭಾರ ಕುಸಿತದಿಂದ ಮಳೆ ಮಾತ್ರವೇ ಬರಬಹುದು ಎಂಬ ವಿಶ್ಲೇಷಣೆಯೂ ಇದೆ.
ಶನಿವಾರ ಮಧ್ಯಾಹ್ನ ಸುರಿದ ಮಳೆ:
ಈ ಬಾರಿ ಮುಂಗಾರು ಮಳೆ ನಿಗದಿತ ಸಮಯದಲ್ಲೇ ಆರಂಭವಾಗಲಿದೆ ಎನ್ನುವುದು ಈಗಿನ ಅಂದಾಜು. ಜೂನ್ ಮೊದಲ ವಾರದಲ್ಲಿ ಕೇರಳವನ್ನು ಮುಂಗಾರು ಮಳೆ ಪ್ರವೇಶಿಸಿ ಉತ್ತಮ ಮಳೆಯಾಗಲಿದೆ. ಅದಾದ 4 ದಿನದಲ್ಲಿ ಕರ್ನಾಟಕ ಕರಾವಳಿ ಪ್ರವೇಶ ಮಾಡುವ ಮುಂಗಾರು ಜೂನ್. 27 ರ ವೇಳೆಗೆ ನವದೆಹಲಿಗೆ ಪ್ರವೇಶವಾಗಬಹುದು , ಅದಕ್ಕೂ ಮುನ್ನ ಜೂ. 11 ರ ಸುಮಾರಿಗೆ ಮುಂಬೈ, ಕೋಲ್ಕತ್ತಾ ಮೊದಲಾದ ಕಡೆಗಳಲ್ಲಿ ಸುರಿಯಬಹುದು ಎನ್ನುವುದು ನಿರೀಕ್ಷೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…