Advertisement
ಸುದ್ದಿಗಳು

ಮಳೆ…. ಮಳೆ …..! | ವಾಯುಭಾರ ಕುಸಿತ ಸರಿಯಾಗುವುದೇ….? | ಕಾದು ಕುಳಿತ ಚಂಡಮಾರುತ ದೂರವಾಗುವುದೇ…? |

Share

ಸುಳ್ಯ: ತಾಲೂಕಿನ ಕೆಲವು ಕಡೆ ಶನಿವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಮಳೆಯಾಗಿದೆ. ಸುಬ್ರಹ್ಮಣ್ಯ ಬಳಿಯ ಕಲ್ಲಾಜೆ, ಗುತ್ತಿಗಾರಿನ ಕೆಲವು ಕಡೆ , ಏನೆಕಲ್ಲು ಸೇರಿದಂತೆ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ  ಹನಿ ಮಳೆಯಾಗಿದೆ. ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಕಂಡುಬಂದಿತ್ತು.

Advertisement
Advertisement
Advertisement
Advertisement

ಹವಾಮಾನ ಮುನ್ಸೂಚನೆ ಪ್ರಕಾರ ಸುಳ್ಯ, ಸುಬ್ರಹ್ಮಣ್ಯ,  ಪುತ್ತೂರು, ಗುಂಡ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.

Advertisement

 

Advertisement

ಬಂಗಾಳ ಕೊಲ್ಲಿಯ ಅಂಡಮಾನ್‌ ದ್ವೀಪದ ಬಳಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ಇನ್ನೂ ಕೆಲವು ದಿನ ಮಳೆಯಾಗುವ ಮುನ್ಸೂಚನೆ ಇದೆ. ವಾಯುಭಾರ ಮತ್ತಷ್ಟು ಕುಸಿತವಾಗುತ್ತಿದ್ದು  ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದ್ದು ಹವಾಮಾನದ ಸ್ಪಷ್ಟ ಚಿತ್ರಣವು ಭಾನುವಾರ ಸಿಗಲಿದೆ. ಚಂಡಮಾರುತ ಉಂಟಾದರೆ  ಭಾರತದ ಪಶ್ಚಿಮ ಕರಾವಳಿಯಲ್ಲಿ  ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಮೇ.10  ಹಾಗೂ 11 ರಂದು ಮಳೆಯ ಸಾಧ್ಯತೆ ಹೆಚ್ಚಿದೆ.

ಆದರೆ ಭೂ ಮಧ್ಯೆ ರೇಖೆ ಗಿಂತ ಕೆಳ ಭಾಗದಲ್ಲಿ ಚಂಡಮಾರುತ ಉಂಟಾದರೆ  ಬಂಗಾಳಕೊಲ್ಲಿ ಅಥವಾ ಅರಬ್ಬಿ ಸಮುದ್ರಕ್ಕೆ ಹೆಚ್ಚಿನ ಸಂದರ್ಭ ಚಂಡಮಾರುತ ಪ್ರವೇಶಿಸುವುದಿಲ್ಲ. ಹೀಗಾಗಿ ವಾಯುಭಾರ ಕುಸಿತದಿಂದ ಮಳೆ ಮಾತ್ರವೇ ಬರಬಹುದು  ಎಂಬ ವಿಶ್ಲೇಷಣೆಯೂ ಇದೆ.

Advertisement

ಶನಿವಾರ ಮಧ್ಯಾಹ್ನ ಸುರಿದ ಮಳೆ:

Advertisement

 

ಈ ಬಾರಿ ಮುಂಗಾರು ಮಳೆ ನಿಗದಿತ ಸಮಯದಲ್ಲೇ ಆರಂಭವಾಗಲಿದೆ ಎನ್ನುವುದು  ಈಗಿನ ಅಂದಾಜು. ಜೂನ್ ಮೊದಲ ವಾರದಲ್ಲಿ  ಕೇರಳವನ್ನು  ಮುಂಗಾರು ಮಳೆ ಪ್ರವೇಶಿಸಿ ಉತ್ತಮ ಮಳೆಯಾಗಲಿದೆ. ಅದಾದ 4 ದಿನದಲ್ಲಿ ಕರ್ನಾಟಕ ಕರಾವಳಿ ಪ್ರವೇಶ ಮಾಡುವ ಮುಂಗಾರು  ಜೂನ್. 27 ರ ವೇಳೆಗೆ ನವದೆಹಲಿಗೆ ಪ್ರವೇಶವಾಗಬಹುದು , ಅದಕ್ಕೂ ಮುನ್ನ ಜೂ. 11 ರ ಸುಮಾರಿಗೆ ಮುಂಬೈ, ಕೋಲ್ಕತ್ತಾ ಮೊದಲಾದ ಕಡೆಗಳಲ್ಲಿ ಸುರಿಯಬಹುದು ಎನ್ನುವುದು ನಿರೀಕ್ಷೆ.

Advertisement

 

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

21 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

1 day ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago